AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನಿಗೆ ಚಾಕು ಇರಿದ ಗೆಳೆಯ, ಚಿಕಿತ್ಸೆ ಫಲಿಸದೆ ಸಾವು

ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 9 ರಂದು ರಾತ್ರಿ ಚಾಕು ಇರಿಯಲಾಗಿತ್ತು. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಳಗಾವಿ: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನಿಗೆ ಚಾಕು ಇರಿದ ಗೆಳೆಯ, ಚಿಕಿತ್ಸೆ ಫಲಿಸದೆ ಸಾವು
ಕೊಲೆ ಆರೋಪಿ ಹುಲ್ಲೆಪ್ಪಾ ಕರೀಕಟ್ಟಿ ಮತ್ತು ಕೊಲೆಯಾದ ಅಭಿಷೇಕ್ ಬುಡ್ರಿ
ಸಹದೇವ್​ ಮಾನೆ
| Edited By: Rakesh Nayak Manchi|

Updated on:Aug 14, 2023 | 4:10 PM

Share

ಬೆಳಗಾವಿ, ಆಗಸ್ಟ್ 14: ತನ್ನ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ಆಗಸ್ಟ್ 9 ರಂದು ನಡೆದಿದ್ದ ಚಾಕು ಇರಿತ ಪ್ರಕರಣ ಇದಾಗಿದ್ದು, ಅಭಿಷೇಕ್ ಬುಡ್ರಿ (19) ಕೊಲೆಯಾದ (Muder) ಯುವಕನಾಗಿದ್ದಾನೆ.

ಹುಲ್ಲೆಪ್ಪಾ ಕರೀಕಟ್ಟಿ ಎಂಬವನ ಪತ್ನಿ ಮೇಲೆ ಅಭಿಷೇಕ್ ಬುಡ್ರಿ ಕಣ್ಣು ಹಾಕಿದ್ದನು. ಈ ಬಗ್ಗೆ ವಿಚಾರ ತಿಳಿದ ಹುಲ್ಲೆಪ್ಪಾ, ಆಗಸ್ಟ್ 9 ರಂದು ರಾತ್ರಿ ಬರ್ತ್​ಡೇ ಪಾರ್ಟಿ ಇದೆ ಅಂತಾ ಅಭಿಷೇಕ್​ನನ್ನು ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದನು.

ಇದನ್ನೂ ಓದಿ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತೆ ರೀ ಓಪನ್ ಮಾಡುತ್ತಾ ಸರ್ಕಾರ..?

ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್​ನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಭಿಷೇಕ್ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಹುಲ್ಲೆಪ್ಪಾನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Mon, 14 August 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ