AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಮತ್ತು ಪರಿಷತ್​ನಲ್ಲಿ ಪ್ರತಿಧ್ವನಿಸಿದ ಜಲೀಲ್ ಹತ್ಯೆ ಪ್ರಕರಣ, ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ತರಾಟೆ

ಮಂಗಳೂರಿನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್​ ಕೊಲೆ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ವಿಪಕ್ಷ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಪರಿಷತ್​ನಲ್ಲೂ ಪ್ರಕರಣದ ಬಗ್ಗೆ ಪ್ರಸ್ತಾಪವಾಗಿದೆ.

ವಿಧಾನಸಭೆ ಮತ್ತು ಪರಿಷತ್​ನಲ್ಲಿ ಪ್ರತಿಧ್ವನಿಸಿದ ಜಲೀಲ್ ಹತ್ಯೆ ಪ್ರಕರಣ, ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ತರಾಟೆ
ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: Rakesh Nayak Manchi|

Updated on:Dec 26, 2022 | 2:38 PM

Share

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್​ ಕೊಲೆ ಪ್ರಕರಣ (Jaleel Murder Case) ಸಂಬಂಧ ವಿಧಾನಸಭೆಯಲ್ಲಿ ವಿಪಕ್ಷ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಶೂನ್ಯ ವೇಳೆಯಲ್ಲಿ ಪ್ರಕರಣವನ್ನು ಪ್ರಸ್ತಾಪ ಮಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್ (U.T.Khadar), ಅಬ್ದುಲ್ ಜಲೀಲ್​ನನ್ನು ಕೋಮುವಾದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅನೈತಿಕ ಗೂಂಡಾಗಿರಿಗೆ ಕೂಡಲೇ ಸರ್ಕಾರ ಕಡಿವಾಣ ಹಾಕಬೇಕು. ದುಷ್ಕರ್ಮಿಗಳ ಕೈಯಲ್ಲಿ ಸಮಾಜ ಕೊಟ್ಟು ಸುಮ್ಮನಿರುವುದು ಸರಿಯಲ್ಲ. ಸರ್ಕಾರ ಪರಿಹಾರ ಕೊಡಲ್ಲ, ಇನ್ನೊಂದು ಕಡೆ ಯುಎಪಿಎ ಹಾಕಲ್ಲ. ಈ ರೀತಿ ಸರ್ಕಾರದ ತಾರತಮ್ಯ ಸರಿಯಲ್ಲ ಎಂದು ಟೀಕಿಸಿದರು.

ಈ ವೇಳೆ ಎದ್ದುನಿಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ದಕ್ಷಿಣ ಕನ್ನಡದಲ್ಲಿ ಅನೇಕ ಕಡೆ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ. ಬಜರಂಗದಳದವರು ಮಾಡುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯವರು ಮಂಗಳೂರಿಗೆ ಹೋದಾಗಲೇ ಇಂತಹ ಕೊಲೆ ಆಗಿದೆ. ಆಕ್ಷನ್​​ಗೆ ರಿಯಾಕ್ಷನ್ ಅಂತಾ ಮುಖ್ಯಮಂತ್ರಿಯವರು ಪ್ರಚೋದನೆ ರೀತಿ ಹೇಳುತ್ತಾರೆ. ಮುಸಲ್ಮಾನರು ಕೊಲೆಯಾದರೆ ಸರ್ಕಾರದ ದುಡ್ಡು ಯಾಕೆ ಕೊಡಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಂಗಳೂರು: ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್​ನಲ್ಲಿ 144 ಸೆಕ್ಷನ್​ ಜಾರಿ

ಜಲೀಲ್ ಪ್ರಕರಣದಲ್ಲಿ ಕೂಡಾ ಯುಎಪಿಎ ಹಾಕಿ ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದ ಸಿದ್ದರಾಮಯ್ಯ, ಕರಾವಳಿ ಪ್ರದೇಶದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ನೈತಿಕ ಪೊಲೀಸ್ ಗಿರಿ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಜಲೀಲ್ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಜಲೀಲ್​ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಯು.ಟಿ.ಖಾದರ್​ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ಎಲ್ಲಾ ಪ್ರಕರಣಗಳಿಗೂ ಪರಿಹಾರ ಕೊಡಲು ಆಗುವುದಿಲ್ಲ. ನೈತಿಕ ಪೊಲೀಸ್​ಗಿರಿ ನಡೆಯುವುದಕ್ಕೆ ಅವಕಾಶ ಕೊಡಲ್ಲ. ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ ಎಂದರು. ಅಲ್ಲದೆ, ಈ ಪ್ರಕರಣ ಕುರಿತು ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದರು.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ಅಶ್ಲೀಲ, ಅರೆನಗ್ನ ಚಿತ್ರಗಳು: ವಿಧಾನ ಪರಿಷತ್​ನಲ್ಲಿ ಗಂಭೀರ ಚರ್ಚೆ

ಪರಿಷತ್​ನಲ್ಲೂ ಪ್ರತಿಧ್ವನಿಸಿದ ಜಲೀಲ್ ಹತ್ಯೆ ಪ್ರಕರಣ

ವಿಧಾನ ಪರಿಷತ್​​ನಲ್ಲಿಯೂ ಮಂಗಳೂರಿನ ಜಲೀಲ್ ಹತ್ಯೆ ಪ್ರಕರಣ ಸದ್ದು ಮಾಡಿದೆ. ಜಲೀಲ್ ಹತ್ಯೆ ಪ್ರಕರಣ ಕುರಿತು ಚರ್ಚೆಗೆ ವಿಪಕ್ಷ ಕಾಂಗ್ರೆಸ್ ಒತ್ತಾಯ ಮಾಡಿತು. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು ನಿಯಮ 59 ಅಡಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Mon, 26 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?