AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಮತ್ತು ಪರಿಷತ್​ನಲ್ಲಿ ಪ್ರತಿಧ್ವನಿಸಿದ ಜಲೀಲ್ ಹತ್ಯೆ ಪ್ರಕರಣ, ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ತರಾಟೆ

ಮಂಗಳೂರಿನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್​ ಕೊಲೆ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ವಿಪಕ್ಷ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಪರಿಷತ್​ನಲ್ಲೂ ಪ್ರಕರಣದ ಬಗ್ಗೆ ಪ್ರಸ್ತಾಪವಾಗಿದೆ.

ವಿಧಾನಸಭೆ ಮತ್ತು ಪರಿಷತ್​ನಲ್ಲಿ ಪ್ರತಿಧ್ವನಿಸಿದ ಜಲೀಲ್ ಹತ್ಯೆ ಪ್ರಕರಣ, ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ತರಾಟೆ
ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: Rakesh Nayak Manchi|

Updated on:Dec 26, 2022 | 2:38 PM

Share

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್​ ಕೊಲೆ ಪ್ರಕರಣ (Jaleel Murder Case) ಸಂಬಂಧ ವಿಧಾನಸಭೆಯಲ್ಲಿ ವಿಪಕ್ಷ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಶೂನ್ಯ ವೇಳೆಯಲ್ಲಿ ಪ್ರಕರಣವನ್ನು ಪ್ರಸ್ತಾಪ ಮಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್ (U.T.Khadar), ಅಬ್ದುಲ್ ಜಲೀಲ್​ನನ್ನು ಕೋಮುವಾದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅನೈತಿಕ ಗೂಂಡಾಗಿರಿಗೆ ಕೂಡಲೇ ಸರ್ಕಾರ ಕಡಿವಾಣ ಹಾಕಬೇಕು. ದುಷ್ಕರ್ಮಿಗಳ ಕೈಯಲ್ಲಿ ಸಮಾಜ ಕೊಟ್ಟು ಸುಮ್ಮನಿರುವುದು ಸರಿಯಲ್ಲ. ಸರ್ಕಾರ ಪರಿಹಾರ ಕೊಡಲ್ಲ, ಇನ್ನೊಂದು ಕಡೆ ಯುಎಪಿಎ ಹಾಕಲ್ಲ. ಈ ರೀತಿ ಸರ್ಕಾರದ ತಾರತಮ್ಯ ಸರಿಯಲ್ಲ ಎಂದು ಟೀಕಿಸಿದರು.

ಈ ವೇಳೆ ಎದ್ದುನಿಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ದಕ್ಷಿಣ ಕನ್ನಡದಲ್ಲಿ ಅನೇಕ ಕಡೆ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ. ಬಜರಂಗದಳದವರು ಮಾಡುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯವರು ಮಂಗಳೂರಿಗೆ ಹೋದಾಗಲೇ ಇಂತಹ ಕೊಲೆ ಆಗಿದೆ. ಆಕ್ಷನ್​​ಗೆ ರಿಯಾಕ್ಷನ್ ಅಂತಾ ಮುಖ್ಯಮಂತ್ರಿಯವರು ಪ್ರಚೋದನೆ ರೀತಿ ಹೇಳುತ್ತಾರೆ. ಮುಸಲ್ಮಾನರು ಕೊಲೆಯಾದರೆ ಸರ್ಕಾರದ ದುಡ್ಡು ಯಾಕೆ ಕೊಡಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಂಗಳೂರು: ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್​ನಲ್ಲಿ 144 ಸೆಕ್ಷನ್​ ಜಾರಿ

ಜಲೀಲ್ ಪ್ರಕರಣದಲ್ಲಿ ಕೂಡಾ ಯುಎಪಿಎ ಹಾಕಿ ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದ ಸಿದ್ದರಾಮಯ್ಯ, ಕರಾವಳಿ ಪ್ರದೇಶದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ನೈತಿಕ ಪೊಲೀಸ್ ಗಿರಿ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಜಲೀಲ್ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಜಲೀಲ್​ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಯು.ಟಿ.ಖಾದರ್​ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ಎಲ್ಲಾ ಪ್ರಕರಣಗಳಿಗೂ ಪರಿಹಾರ ಕೊಡಲು ಆಗುವುದಿಲ್ಲ. ನೈತಿಕ ಪೊಲೀಸ್​ಗಿರಿ ನಡೆಯುವುದಕ್ಕೆ ಅವಕಾಶ ಕೊಡಲ್ಲ. ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ ಎಂದರು. ಅಲ್ಲದೆ, ಈ ಪ್ರಕರಣ ಕುರಿತು ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದರು.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ಅಶ್ಲೀಲ, ಅರೆನಗ್ನ ಚಿತ್ರಗಳು: ವಿಧಾನ ಪರಿಷತ್​ನಲ್ಲಿ ಗಂಭೀರ ಚರ್ಚೆ

ಪರಿಷತ್​ನಲ್ಲೂ ಪ್ರತಿಧ್ವನಿಸಿದ ಜಲೀಲ್ ಹತ್ಯೆ ಪ್ರಕರಣ

ವಿಧಾನ ಪರಿಷತ್​​ನಲ್ಲಿಯೂ ಮಂಗಳೂರಿನ ಜಲೀಲ್ ಹತ್ಯೆ ಪ್ರಕರಣ ಸದ್ದು ಮಾಡಿದೆ. ಜಲೀಲ್ ಹತ್ಯೆ ಪ್ರಕರಣ ಕುರಿತು ಚರ್ಚೆಗೆ ವಿಪಕ್ಷ ಕಾಂಗ್ರೆಸ್ ಒತ್ತಾಯ ಮಾಡಿತು. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು ನಿಯಮ 59 ಅಡಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Mon, 26 December 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ