AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಾ ಮೀಸಲಾತಿ ಕಿಚ್ಚು: ಸಾಂಗ್ಲಿಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ, ಕೆಎಸ್​ಆರ್​ಟಿಸಿ ಬಸ್​​ ಸಂಚಾರ ಸ್ಥಗಿತ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಬಂದ್‌ ಆಚರಿಸಲಾಗುತ್ತಿದೆ. ಟಯರ್​ಗಳಿಗೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಗ್ಲಿ ಜಿಲ್ಲೆಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮರಾಠಾ ಮೀಸಲಾತಿ ಕಿಚ್ಚು: ಸಾಂಗ್ಲಿಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ, ಕೆಎಸ್​ಆರ್​ಟಿಸಿ ಬಸ್​​ ಸಂಚಾರ ಸ್ಥಗಿತ
ಮರಾಠಾ ಮೀಸಲಾತಿ ಪ್ರತಿಭಟನೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Sep 07, 2023 | 12:46 PM

Share

ಚಿಕ್ಕೋಡಿ, ಸೆ.07: ಮಹಾರಾಷ್ಟ್ರದಲ್ಲಿ ದಿನೇ ದಿನೇ ಮರಾಠಾ ಮೀಸಲಾತಿ ಕಿಚ್ಚು(Maratha Reservation) ತೀವ್ರಗೊಳ್ಳುತ್ತಿದೆ. ಮಹಾರಾಷ್ಟ್ರದ ಜಾಲ್ನಾದಲ್ಲಿ ಮರಾಠಾ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿಚಾರ್ಜ್‌ ಖಂಡಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಬಂದ್‌ಗೆ ಮರಾಠಾ ಸಮುದಾಯ ಕರೆ ನೀಡಿದೆ. ಕೊಲ್ಹಾಪುರ ಬಳಿಕ ಇಂದು ಸಾಂಗ್ಲಿ ಜಿಲ್ಲೆ ಬಂದ್ ಮಾಡಲಾಗಿದೆ(Sangli Bandh). ಸಾಂಗ್ಲಿ ನಗರದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ(Protest) ನಡೆಸಲಾಗುತ್ತಿದೆ. ಏಕ್ ಮರಾಠಾ ಲಾಕ್ ಮರಾಠಾ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಇನ್ನು ಸಾಂಗ್ಲಿ ಜಿಲ್ಲೆಗೆ ತೆರಳುವ ಕೆಎಸ್​ಆರ್​ಟಿಸಿ ಬಸ್​​ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಬಂದ್‌ ಆಚರಿಸಲಾಗುತ್ತಿದೆ. ಟಯರ್​ಗಳಿಗೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಗ್ಲಿ ಜಿಲ್ಲೆಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆ ಕಾಗವಾಡ ಮಾರ್ಗವಾಗಿ ಸಾಂಗ್ಲಿ ಜಿಲ್ಲೆಗೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಗಡಿಭಾಗದವರೆಗೆ ಮಾತ್ರ ರಾಜ್ಯ ಸಾರಿಗೆ ಬಸ್‌ಗಳು ಸಂಚರಿಸುತ್ತಿವೆ.

ಇದನ್ನೂ ಓದಿ: ಮಹಾರಾಷ್ಟ್ರ: ಜಾಲನಾದಲ್ಲಿ ಹಿಂಸಾರೂಪ ಪಡೆದ ಮರಾಠಾ ಮೀಸಲಾತಿ ಹೋರಾಟ, 300ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸು

ಕರ್ನಾಟಕ ಬಸ್‌ಗೆ ಬೆಂಕಿ

ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮರಾಠಾ ಮೀಸಲಾತಿ ಉದ್ರಿಕ್ತ ಹೋರಾಟಗಾರು ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಇಟ್ಟಿದ್ದರು. ಮಹಾರಾಷ್ಟ್ರದ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಔರಂಗಾಬಾದ್-ಹುಬ್ಬಳ್ಳಿ ಮಾರ್ಗದ ಬಸ್‌ಗೆ ಬೆಂಕಿ ಹಚ್ಚಿದ್ದರು. ಅದೃಷ್ಟವಶಾತ್ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರಿಗೆ ಯಾವುದೇ ಜೀವ ಹಾನಿ ಸಂಭವಿಸಿರಲಿಲ್ಲ.

ಜಾಲ್ನಾ ಜಿಲ್ಲೆಯ ಶಹಾಗಡ್‌ನಲ್ಲಿ ಪ್ರತಿಭಟನೆ ವೇಳೆ ಸ್ಥಳಕ್ಕೆ ಪೊಲೀಸರು ಬಂದಾಗ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿತ್ತು. ಆಗ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ಬಳಿಕ ಜಾಲ್ನಾ ಜಿಲ್ಲೆಯ ವಡಿಗೋದ್ರಿ ಬಳಿ ವಾಹನಗಳ ಮೇಲೆ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಕೆಎಸ್ಆರ್‌ಟಿಸಿ ಹಾಗೂ ಮಹಾರಾಷ್ಟ್ರ ಸಾರಿಗೆ ಬಸ್ ಸೇರಿದಂತೆ ಆರಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.ಇಂದು ಕೂಡ ಪ್ರತಿಭಟನೆಯ ಕಿಚ್ಚು ಜೋರಾಗಿದೆ.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು