AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬಾಣಂತಿ ಸಾವಿಗೆ ಕಾರಣವಾಯ್ತಾ ಬಿಮ್ಸ್ ಸಿಬ್ಬಂದಿ ನೀಡಿದ ಔಷಧ? ಕುಟುಂಬದವರಿಂದ ದೂರು ದಾಖಲು

ಬೆಳಗಾವಿ ಬಿಮ್ಸ್​ನಲ್ಲಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದ ಸಿಬ್ಬಂದಿ ವಿರುದ್ದ ದೂರು ದಾಖಲಾಗಿದೆ. ಇನ್ನೊಂದು ಕಡೆ ಮೃತರ ಕುಟುಂಬಸ್ಥರು ಸಾವಿಗೆ ಕಾರಣ ವೈದ್ಯರ ನಿರ್ಲಕ್ಷ್ಯ ಹಾಗೂ ಬಾಣಂತಿಗೆ ನೀಡಿದ ಔಷಧ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬಾಣಂತಿ ಸಾವಿನ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು? ಸಿಬ್ಬಂದಿ ನೀಡಿದ ಮಾತ್ರೆಯೇ ಬಾಣಂತಿ ಸಾವಿಗೆ ಕಾರಣವಾಯ್ತಾ? ಇತ್ತೀಚಿನ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.

ಬೆಳಗಾವಿ: ಬಾಣಂತಿ ಸಾವಿಗೆ ಕಾರಣವಾಯ್ತಾ ಬಿಮ್ಸ್ ಸಿಬ್ಬಂದಿ ನೀಡಿದ ಔಷಧ? ಕುಟುಂಬದವರಿಂದ ದೂರು ದಾಖಲು
ಬಿಮ್ಸ್ ಆಸ್ಪತ್ರೆ
Sahadev Mane
| Edited By: |

Updated on: Dec 24, 2024 | 7:27 AM

Share

ಬೆಳಗಾವಿ, ಡಿಸೆಂಬರ್ 24: ಬೆಳಗಾವಿ ಬಿಮ್ಸ್​​ನಲ್ಲಿ ಬಾಣಂತಿಯರ ಸಾವು ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಸೋಮವಾರ ಮತ್ತೊಬ್ಬರು ಬಾಣಂತಿ ಸಾವನ್ನಪ್ಪಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಬಾಳಪ್ಪ ಜಿರಲಿ, ಎರಡು ದಿನ ಹಿಂದಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿ ಆರೋಗ್ಯವಾಗಿದ್ದರು. ಸೋಮವಾರ ಎದೆನೋವು ಎಂದು ಒದ್ದಾಡತೊಡಗಿದ್ದರು. ಈ ವೇಳೆ, ‘‘ಸರಿಯಾದ ಸಮಯಕ್ಕೆ ವೈದ್ಯರು ಬಂದಿಲ್ಲ. ಚೆನ್ನಾಗಿದ್ದ ವೈಶಾಲಿಗೆ ಯಾವ ಔಷಧ ಕೊಟ್ಟು ಈ ರೀತಿ ಆಗಿದೆ ಗೊತ್ತಿಲ್ಲ. ಆದರೆ ಕೆಲವೇ ಗಂಟೆಗಳಲ್ಲಿ ವೈಶಾಲಿ ಸಾವನ್ನಪ್ಪಿದ್ದಾರೆ’’ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಾತ್ರಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗಿದ್ದು, ಗೌಡವಾಡ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಹಾಗೂ ಬಿಮ್ಸ್ ಸಿಬ್ಬಂದಿ ನೀಡಿದ ಔಷಧಿ ಕಾರಣ ಎಂದು ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮೃತಳ ಪತಿ ಬಾಳಪ್ಪ ದೂರು ದಾಖಲು ಮಾಡಿದ್ದಾರೆ. ಇದರನ್ವಯ ಸೆಕ್ಷನ್ 170 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಎಪಿಎಂಸಿ ಠಾಣೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಬೆಳಗಾವಿಯಲ್ಲೂ ಅದೇ ರೀತಿ ಬಾಣಂತಿಯರ ಸಾವಾಗಿದ್ದು ಸಾಕಷ್ಟು ಭಯ ಹುಟ್ಟುವಂತೆ ಮಾಡಿದೆ. ಒಂದೆಡೆ ಕುಟುಂಬಸ್ಥರು, ಯಾವ ಔಷಧಿ ನೀಡಿದ್ದರು ಎಂಬ ಬಗ್ಗೆಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಚೊಚ್ಚಲ ಹೆರಿಗೆ ಖುಷಿಯಲ್ಲಿದ್ದ ಕುಟುಂಬಸ್ಥರು ಗೋಳಾಡುತ್ತಿದ್ದರೆ ಇನ್ನೊಂದೆಡೆ ಎರಡು ದಿನದ ಹೆಣ್ಣು ಮಗು ಇದೀಗ ಅನಾಥವಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಧ್ಯಮಗಳಿಂದ ಮಾಹಿತಿ ಗೊತ್ತಾಗಿದೆ. ಬಿಮ್ಸ್ ಆಸ್ಪತ್ರೆ ವ್ಯವಸ್ಥೆ ಸುಧಾರಣೆಗೆ ನಾನು ಕೂಡ ಎರಡು ಬಾರಿ ಭೇಟಿ ನೀಡಿದ್ದೇನೆ. ಮೊನ್ನೆಯಷ್ಟೇ ಸಭೆ ಕೂಡ ಮಾಡಿದ್ದೇನೆ. ಈಗ ಯಾವ ಕಾರಣಕ್ಕೆ ಸಾವಾಗಿದೆ ಎಂಬುದರ ಕುರಿತು ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಬಿಮ್ಸ್​ನಲ್ಲಿ ಮತ್ತೊಬ್ಬ ಬಾಣಂತಿ ಸಾವು: ವೈದ್ಯರ ವಿರುದ್ಧ ಆಕ್ರೋಶ

ಒಟ್ಟಿನಲ್ಲಿ ಆರು ತಿಂಗಳಲ್ಲಿ ಇದೇ ಬಿಮ್ಸ್ ಆಸ್ಪತ್ರೆಯಲ್ಲಿ ಎಂಟು ಜನ ಬಾಣಂತಿಯರ ಸಾವಾಗಿತ್ತು. ಇದೀಗ ಮತ್ತೋರ್ವ ಬಾಣಂತಿ ಮಗುವಿಗೆ ಜನ್ಮ ನೀಡಿದ ಒಂದು ದಿನದ ಬಳಿಕ ಸಾವನ್ನಪ್ಪಿದ್ದಾರೆ. ಇದು ಸಾಕಷ್ಟು ಅನುಮಾನ ಮೂಡುವಂತೆ ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು