AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?: ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ

ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?

ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?: ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
TV9 Web
| Edited By: |

Updated on:Nov 07, 2022 | 4:32 PM

Share

ಬೆಂಗಳೂರು: ‘ಹಿಂದೂ’ (Hindu) ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಕರ್ನಾಟಕದ ಹಿರಿಯ ಕಾಂಗ್ರೆಸ್ (Congress) ನಾಯಕ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ (Satish Laxmanrao Jarkiholi) ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ. ಹಿಂದೂ ಪದದ ಅರ್ಥವನ್ನು ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ ಎಂದು ಜಾರಕಿಹೊಳಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಈ ಪದ ಎಲ್ಲಿಂದ ಬಂದಿದೆಯೆಂದು ತಿಳಿಯಲು ವಿಕಿಪೀಡಿಯಾ ಚೆಕ್ ಮಾಡಿ ಎಂದು ಅವರು ಹೇಳಿದ್ದಾರೆ.

ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಈ  ರೀತಿ ಮಾತನಾಡಿದ್ದಾರೆ.

Published On - 4:29 pm, Mon, 7 November 22

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು