AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?: ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ

ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?

ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?: ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 07, 2022 | 4:32 PM

Share

ಬೆಂಗಳೂರು: ‘ಹಿಂದೂ’ (Hindu) ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಕರ್ನಾಟಕದ ಹಿರಿಯ ಕಾಂಗ್ರೆಸ್ (Congress) ನಾಯಕ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ (Satish Laxmanrao Jarkiholi) ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ. ಹಿಂದೂ ಪದದ ಅರ್ಥವನ್ನು ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ ಎಂದು ಜಾರಕಿಹೊಳಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಈ ಪದ ಎಲ್ಲಿಂದ ಬಂದಿದೆಯೆಂದು ತಿಳಿಯಲು ವಿಕಿಪೀಡಿಯಾ ಚೆಕ್ ಮಾಡಿ ಎಂದು ಅವರು ಹೇಳಿದ್ದಾರೆ.

ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಈ  ರೀತಿ ಮಾತನಾಡಿದ್ದಾರೆ.

Published On - 4:29 pm, Mon, 7 November 22

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ