AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಗಡಿ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ; ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಕುರಿತು ಚರ್ಚೆ

ಇಂದು(ಮಾ.13) ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್ (Shivaraj Patil) ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಗಡಿ ಸಮಸ್ಯೆ ಕುರಿತು ಕನ್ನಡ ಪರ ಸಂಘಟನೆಗಳಿಂದ ಸಮಸ್ಯೆಯನ್ನ ಆಹ್ವಾಲಿಸಲಾಗಿದೆ. ಗಡಿ ವಿವಾದವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಎಂಇಎಸ್, ಶಿವಸೇನೆ ಸಂಘಟನೆಯನ್ನ ರಾಜ್ಯದಲ್ಲಿ ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರರು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಗಡಿ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ; ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಕುರಿತು ಚರ್ಚೆ
ಬೆಳಗಾವಿಯಲ್ಲಿ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಸಭೆ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 13, 2024 | 3:35 PM

ಬೆಳಗಾವಿ, ಮಾ.13: ಬೆಳಗಾವಿ(Belagavi)ಯಲ್ಲಿ ಆಗಾಗ ನಾಡದ್ರೋಹಿ ಚಟುವಟಿಕೆಗಳು ಆಗುತ್ತಿರುತ್ತದೆ. ಈ ಹಿನ್ನಲೆ ಇಂದು(ಮಾ.13) ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್ (Shivaraj Patil) ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಗಡಿ ಸಮಸ್ಯೆ ಕುರಿತು ಕನ್ನಡ ಪರ ಸಂಘಟನೆಗಳಿಂದ ಸಮಸ್ಯೆಯನ್ನ ಆಹ್ವಾಲಿಸಲಾಗಿದೆ. ಈ ವೇಳೆ ಗಡಿ ಸಂರಕ್ಷಣಾ ಪ್ರಾದೇಶಿಕಾ ಕಚೇರಿ ಬೆಳಗಾವಿಗೆ ಸ್ಥಳಾಂತರ ಆಗಬೇಕು. ಕಡ್ಡಾಯ ಕನ್ನಡ ಬಳಕೆ, ಗಡಿ ವಿಚಾರ, ಕನ್ನಡ ರಾಜ್ಯೋತ್ಸವ ಆಚರಣೆ, ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಕುರಿತು ಚರ್ಚೆ ನಡೆಸಲಾಗಿದೆ.

ಇನ್ನು ಗಡಿ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಎಂಇಎಸ್, ಶಿವಸೇನೆ ಸಂಘಟನೆಯನ್ನ ರಾಜ್ಯದಲ್ಲಿ ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಎಸ್ಪಿ ಭೀಮಾಶಂಕರ್ ಗುಳೇದ್, ಜಿಪಂ ಸಿಇಒ ರಾಹುಲ್ ಶಿಂಧೆ, ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು.

ಇದನ್ನೂ ಓದಿ:ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ: ಬದರಿನಾಥದಲ್ಲಿ ಉದ್ಧವ್ ಠಾಕ್ರೆ ಕುಟುಂಬದವರ ಎದುರು ಘೋಷಣೆ ಕೂಗಿದ ಬೆಳಗಾವಿ ನಿವಾಸಿಗಳು

ಈ ಕುರಿತು ಮಾತನಾಡಿದ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್, ‘ ಬೆಳಗಾವಿಯಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪನೆ ಮಾಡಲು ಸರ್ಕಾರ ನಿರ್ಧಾರ ಮಾಡಬೇಕು. ರಿಜಿನಲ್ ಆಫೀಸ್ ಸುವರ್ಣ ವಿಧಾನಸೌಧದಲ್ಲಿ ಮಾಡಿ ಗಡಿ ಆಯೋಗದ ಹೊಸ ಮೇಂಬರ್​ಗಳನ್ನ ಮಾಡಬೇಕಾಗುತ್ತದೆ. ಜೊತೆಗೆ ಪ್ರಾದೇಶಿಕ ಕಚೇರಿ ಆದ ಮೇಲೆ ತಾತ್ಕಾಲಿಕವಾಗಿ ಬೆಳಗಾವಿಯ ಒಬ್ಬರನ್ನ ಆಯೋಗದ ಸದಸ್ಯರನ್ನಾಗಿ ಮಾಡುತ್ತೇವೆ. ನದಿ ಮತ್ತು ಗಡಿಗಳ ಬಗ್ಗೆ ಹಿತ ಕಾಯುವ ದೃಷ್ಟಿಯಿಂದ ಈ ಆಯೋಗ ಕೆಲಸ ಮಾಡುತ್ತದೆ.

ಬೆಳಗಾವಿ ಗಡಿ ಭಾಗದ ಬಗ್ಗೆ ಸಂಪೂರ್ಣ ಮಾಹಿತಿ ಇರುವವರು ಈ ಆಯೋಗದಲ್ಲಿ ಸದಸ್ಯರಾಗಿರುತ್ತಾರೆ. ಈ ಸದಸ್ಯರು ಕನ್ನಡಪರ ಹೋರಾಟಗಾರರ ಜೊತೆ ಸಂಪರ್ಕದಲ್ಲಿ ಇದ್ದು, ಸಲಹೆ ತೆಗದುಕ್ಕೊಳ್ಳುವ ಕೆಲಸ ಮಾಡುತ್ತಾರೆ. ಜೊತೆಗೆ ನೇರವಾಗಿ ಹೋರಾಟಗಾರರೆ ಸದಸ್ಯರಿಗೆ ಸಲಹೆ ಕೊಡುವ ಕೆಲಸ ಮಾಡಬಹುದು. ಇನ್ನು ಸುವರ್ಣ ವಿಧಾನಸೌಧದಲ್ಲಿ ಸಂಪರ್ಕ ಕಚೇರಿ ತೆರೆದು ಜನಸಂಪರ್ಕ ಮಾಡಲು ಅವಕಾಶ ಮಾಡುತ್ತೇವೆ. ಇದೇ ವೇಳೆ ಬೆಳಗಾವಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸುವ ವಿಚಾರ, ‘ನಾಮಫಲಕ ಅಳವಡಿಸುವ ಕುರಿತು ರಾಜ್ಯ ಸರ್ಕಾರದಿಂದ ಆದೇಶ ಆಗಿದೆ. ಕನ್ನಡ ನಾಮಫಲಕ ಕುರಿತು ನಮ್ಮ ಆಯೋಗದ ವ್ಯಾಪ್ತಿಗೆ ಬರೋದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್