AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪೊಲೀಸರನ್ನು ನಾಯಿಗಳಿಗೆ ಹೋಲಿಸಿದ ಎಂಇಎಸ್​ ಪುಂಡರು​: ಆಕ್ರೋಶ

ಬೆಳಗಾವಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕನ ಮೇಲೆ ನಡೆದ ಹಲ್ಲೆಯನ್ನು ಸಮರ್ಥಿಸಿಕೊಂಡು ಕನ್ನಡಪರ ಹೋರಾಟಗಾರರನ್ನು ಅವಮಾನಿಸಿದ ಎಂಇಎಸ್ ಕಾರ್ಯಕರ್ತ ಶುಭಂ ಶಳಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಳಕೆ ಬಂಧನ ಹಿನ್ನೆಲೆಯಲ್ಲಿ ಎಂಇಎಸ್​ ಕಾರ್ಯಕರ್ತರು ಕರ್ನಾಟಕದ ಪೊಲೀಸರನ್ನು 'ನಾಯಿ' ಗೆ ಹೋಲಿಕೆ ಮಾಡಿ ವಿವಾದಾತ್ಮಕ ಪೋಸ್ಟ್​ ಹಾಕಿದ್ದಾರೆ.

Sahadev Mane
| Edited By: |

Updated on:Mar 25, 2025 | 2:38 PM

Share

ಬೆಳಗಾವಿ, ಮಾರ್ಚ್​ 25: ಎಂಇಎಸ್ (MES) ಪುಂಡ ಶುಭಂ ಶಳಕೆ ಬಂಧನ ಬೆನ್ನಲ್ಲೇ ಪೊಲೀಸರಿಗೆ (Police) ನಾಯಿಗಳು ಎಂದು ಎಂಇಎಸ್ ಸಂಘಟನೆಯ ಯುವ ಸಮಿತಿ ಸೀಮಾಭಾಗ್ ಪೇಜ್​ನಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಹಾಕಿದೆ. ಪುಂಡ ಶಳಕೆ ಹಿಡಿದುಕೊಂಡು ನಿಂತಿದ್ದ ಪೊಲೀಸರ ಫೋಟೊ ಹಾಕಿ, “ಸಮಿತಿಯ ಸಿಂಹ ಒಬ್ಬನೇ ಫೈಟ್ ಮಾಡುತ್ತಿದ್ದಾನೆ. ಸಾವಿರಾರು ನಾಯಿಗಳು ಅವನ ಬೆನ್ನು ಬಿದ್ದಿವೆ‌. ಆದರೂ ನಾಯಿಗಳಿಗೆ ಸಿಂಹವನ್ನು ಮುಗಿಸಲು ಅಗುತ್ತಿಲ್ಲ” ಎಂದು ಪೋಸ್ಟ್​ ಹಾಕಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕನ ಮೇಲಿನ ಹಲ್ಲೆ ಸಮರ್ಥಿಸಿಕೊಂಡು, ಕನ್ನಡಪರ ಹೋರಾಟಗಾರರಿಗೆ ನಾಲಾಯಕ್ ಅಂತ ಶುಭಂ ಶಳಕೆ ಕರೆದಿದ್ದನು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗುವಂತೆ ಶುಭಂ ಶಳಕೆ ಪರಾರಿಯಾಗಿದ್ದನು. ಇದೀಗ, ಮಾಳಮಾರುತಿ ಠಾಣೆ ಪೊಲೀಸರು ಸೋಮವಾರ ಎಂಇಎಸ್ ಪುಂಡ ಶುಭಂ ಶಳಕೆ ಬಂಧಿಸಿದ್ದಾರೆ.

ಏನಿದು ಘಟನೆ

ಕಳೆದ ತಿಂಗಳು, ಬೆಳಗಾವಿಯಿಂದ ಬಾಳೇಕುಂದ್ರಿಗೆ ಚಲಿಸುತ್ತಿದ್ದ ಬಸ್ಸಿನ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಮರಾಠಿ ಪರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆಸಿದ್ದರು. ಈ ಘಟನೆಯ ನಂತರ, ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಅಂತರರಾಜ್ಯ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಕಂಡಕ್ಟರ್ ಮೇಲಿನ ದಾಳಿಯು ಎರಡು ರಾಜ್ಯಗಳ ನಡುವಿನ ಭಾಷಾ ವಿವಾದಗಳ ಬಗ್ಗೆ ಮತ್ತೆ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಮರಾಠಿ ಪರ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟವು ಪ್ರತಿಭಟನೆ ನಡೆಸಿತ್ತು.

ಇದನ್ನೂ ಓದಿ: ಮರಾಠಿ ಯುವಕನಿಂದ ಗೂಂಡಾಗಿರಿ, ಪಿಡಿಒ ಮೇಲೆ ಹಲ್ಲೆ ನಡೆಸುವ ಬೆದರಿಕೆ ಮತ್ತು ನಿಂದನೆ

ಈ ವೇಳೆ ಎಂಇಎಸ್ ಪುಂಡ ಶುಭಂ ಶಳಕೆ ಕನ್ನಡಪರ ಹೋರಾಟಗಾರರಿಗೆ ನಾಲಾಯಕ್​ ಎಂದಿದ್ದನು. ಈ ಹಿನ್ನೆಲೆಯಲ್ಲಿ ಶುಭಂ ಶಳಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಬಲೆ ಬೀಸಿದ್ದರು. ಕೊನೆಗೂ ಬೆಳಗಾವಿ ಪೊಲೀಸರು ಸೋಮವಾರ ಆರೋಪ ಶುಭಂ ಶಳಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Tue, 25 March 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್