AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಬಿಗುವಿನ ವಾತಾವರಣ ನಿರ್ಮಾಣ

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿಸಿಪಿ ವಿಕ್ರಂ ಆಮಟೆ ಸ್ಥಳಕ್ಕೆ ಆಗಮಿಸಿದ್ದಾರೆ. ಪ್ರತಿಭಟನಾಕಾರರಿಂದ ಪೊಲೀಸರ ಮೇಲೆ‌ ಕೂಡ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ. ಡಿಸಿಪಿ ಮುಂದೆಯೇ ಕಿಡಗೇಡಿಗಳು ಕಲ್ಲು ತೂರಿದ್ದಾರೆ.

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಬಿಗುವಿನ ವಾತಾವರಣ ನಿರ್ಮಾಣ
ಎಂಇಎಸ್​ ಪುಂಟಾಟಿಕೆ ಖಂಡಿಸಿ ಪ್ರತಿಭಟನೆ
TV9 Web
| Edited By: |

Updated on: Dec 17, 2021 | 11:04 PM

Share

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂಪರ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ಕಂಡುಬಂದಿದೆ. ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಆರೋಪ ಕೇಳಿಬಂದಿತ್ತು. ಈ ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಇದೀಗ ದಿಢೀರ್ ಪ್ರತಿಭಟನೆ ನಡೆಸಲಾಗಿದೆ. ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ತಿಳಿದುಬಂದಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಪ್ರತಿಭಟನೆ ನಡುವೆ ಮಣ್ಣಿಕೇರಿ ಗ್ರಾಮಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಕಲ್ಲೂತೂರಾಟ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶುಭಂ ಶಳಕೆ, ಮಾಜಿ ಮೇಯರ್ ಸರಿತಾ ಪಾಟೀಲ ಸೇರಿ ಎಂಇಎಸ್ ಪುಂಡರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ಪ್ರತಿಭಟನೆ ನಡೆಯುತ್ತಿರುವಲ್ಲಿ ಎಂಇಎಸ್ ಕಾರ್ಯಕರ್ತರು ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ನೀಡುತ್ತಿಲ್ಲ ಎಂದೂ ತಿಳಿದುಬಂದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿಸಿಪಿ ವಿಕ್ರಂ ಆಮಟೆ ಸ್ಥಳಕ್ಕೆ ಆಗಮಿಸಿದ್ದಾರೆ. ಪ್ರತಿಭಟನಾಕಾರರಿಂದ ಪೊಲೀಸರ ಮೇಲೆ‌ ಕೂಡ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ. ಡಿಸಿಪಿ ಮುಂದೆಯೇ ಕಿಡಗೇಡಿಗಳು ಕಲ್ಲು ತೂರಿದ್ದಾರೆ.

ಇದನ್ನೂ ಓದಿ: ಎಂಇಎಸ್ ಮಹಾಮೇಳ ಆಯೋಜಕರ ವಿರುದ್ಧ ಬೆಳಗಾವಿ ಪಾಲಿಕೆ ಅಧಿಕಾರಿ ದೂರು

ಇದನ್ನೂ ಓದಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ