AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ

ಎಂಇಎಸ್ ಅಭ್ಯರ್ಥಿಗಳ ಚುನಾವಣಾ ಪ್ರಚಾರ ನಾಮಫಲಕ ತೆರವುಗೊಳಿಸಿದ್ದಕ್ಕೂ ಕಿಡಿಕಾರಿದ್ದು, ಭಾಷೆಯ ಹೆಸರಿನಲ್ಲಿ ಸಾಮಾಜಿಕ ನೆಮ್ಮದಿ ಹದಗೆಡಿಸುತ್ತಿರುವವರನ್ನು ಲಕ್ಷ್ಮೀ ನಿಪ್ಪಾಣಿಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ
ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ
Follow us
TV9 Web
| Updated By: preethi shettigar

Updated on: Sep 21, 2021 | 12:01 PM

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್‌ನಿಂದ (Maharashtra Ekikaran Samiti -MES) ದಿನಕ್ಕೊಂದು ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕವೂ ಪದೇಪದೇ ಸಾಮಾಜದ ಸ್ವಾತ್ಯವನ್ನು ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಗಳು ಕೇಳಿ ಬಂದಿವೆ.

ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ ಗಣೇಶ ವಿಸರ್ಜನೆ ವೇದಿಕೆ ಮೇಲೆ ಕನ್ನಡ ನಾಮಫಲಕವಷ್ಟೇ ಇದ್ದಿದ್ದಕ್ಕೆ ಎಂಇಎಸ್ ಖ್ಯಾತೆ ತೆಗೆದಿದೆ. ಇಷ್ಟೇ ಅಲ್ಲದೆ ಎಂಇಎಸ್ ಪುಂಡರ ವಿರುದ್ಧ ಕಿಡಿಕಾರಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಮಾಡಿ ಮರಾಠಿ ಭಾಷಿಕರ ಪ್ರಚೋದನೆಗೆ ಯತ್ನಿಸಲಾಗಿದೆ ಎಂದು ಕನ್ನಡ ಸಂಘಟನೆಗಳ ಪರ ಮುಖಂಡರು ಆರೋಪಿಸಿದ್ದಾರೆ.

ಮೊನ್ನೆ ರಾತ್ರಿ ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆ ಮೇಲೆ ಕನ್ನಡದ ಬೋರ್ಡ್ ಮಾತ್ರ ಇದ್ದಿದ್ದಕ್ಕೆ ಆವಾಜ್ ಹಾಕಿದ್ದ ಎಂಇಎಸ್ ಪುಂಡರು, ಮಹಾನಗರ ಪಾಲಿಕೆ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಿಕರ್‌ಗೆ ಗದರಿದ್ದಾರೆ. ಅಷ್ಟೇ ಅಲ್ಲದೆ ಮರಾಠಿ ಭಾಷಿಕರ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ಧಮ್ಕಿ ಹಾಕಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಎಂಇಎಸ್ ಪುಂಡರನ್ನು ತರಾಟೆಗೆ ತಗೆದುಕೊಂಡಿದ್ದ ಲಕ್ಷ್ಮೀ ನಿಪ್ಪಾಣಿಕರ್ ಎಂಇಎಸ್ ಅಭ್ಯರ್ಥಿಗಳ ಚುನಾವಣಾ ಪ್ರಚಾರ ನಾಮಫಲಕ ತೆರವುಗೊಳಿಸಿದ್ದಕ್ಕೂ ಕಿಡಿಕಾರಿದ್ದು, ಭಾಷೆಯ ಹೆಸರಿನಲ್ಲಿ ಸಾಮಾಜಿಕ ನೆಮ್ಮದಿ ಹದಗೆಡಿಸುತ್ತಿರುವವರನ್ನು ಲಕ್ಷ್ಮೀ ನಿಪ್ಪಾಣಿಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ವಾರ್ಡ್ ನಂಬರ್ 15ರ ಎಂಇಎಸ್ ಅಭ್ಯರ್ಥಿ ಚುನಾವಣಾ ಪ್ರಚಾರದ ನಾಮಫಲಕ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆಯೂ ಎಂಇಎಸ್ ಯುವ ಸಮಿತಿ ಫೇಸ್‌ಬುಕ್‌ ಪೇಜ್​ನಲ್ಲಿ ಪೋಸ್ಟ್ ಹಾಕಿದ್ದು, ಅಂದು ಮರಾಠಿ ಬೋರ್ಡ್ ಇಂದು ಮರಾಠಿ ಬೋರ್ಡ್ ತೆರವು ಎಂದು ಹೇಳಿದ್ದಾರೆ. ಹೀಗಾಗಿ ಪದೇಪದೇ ಭಾಷಾ ರಾಜಕಾರಣ ವಿಷಬೀಜ ಬಿತ್ತಿ ಮರಾಠಿಗರನ್ನು ಒಕ್ಕಲೆಬ್ಬಿಸುವ ಎಂಇಎಸ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕನ್ನಡ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ಗೆ ಬಿಜೆಪಿಗಿಂತ ಹೆಚ್ಚು ಮತ, ಆದರೆ ಗೆದ್ದ ಅಭ್ಯರ್ಥಿಗಳಲ್ಲಿ ಅವರ ಸಂಖ್ಯೆ ಹೆಚ್ಚು: ಡಿಕೆ ಶಿವಕುಮಾರ್

ಬೆಳಗಾವಿಯಲ್ಲಿ ಐತಿಹಾಸಿಕ ಸೋಲುಂಡ ಬಳಿಕ ನಡುರಾತ್ರಿ ಕ್ಯಾತೆ ತೆಗೆದ ಎಂಇಎಸ್‌! ಪಾಲಿಕೆ ಮರು ಚುನಾವಣೆ ನಡೆಸಬೇಕಂತೆ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?