AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಮುಂದಾದ ‌ನಾಡದ್ರೋಹಿ‌ MES: ಅನುಮತಿ ಇಲ್ಲದಿದ್ದರೂ ಕರಾಳದಿನ ಆಚರಣೆಗೆ ಸಿದ್ಧತೆ

ಬೆಳಗಾವಿ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ ಕೆಲವು ಮುಖಂಡರು ಸಭೆ ನಡೆಸಿದರು. ನವೆಂಬರ್‌ 1ರಂದು ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.

ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಮುಂದಾದ ‌ನಾಡದ್ರೋಹಿ‌ MES: ಅನುಮತಿ ಇಲ್ಲದಿದ್ದರೂ ಕರಾಳದಿನ ಆಚರಣೆಗೆ ಸಿದ್ಧತೆ
ಎಂಇಎಸ್​ ಸಭೆ
Sahadev Mane
| Edited By: |

Updated on: Oct 15, 2024 | 9:26 AM

Share

ಬೆಳಗಾವಿ, ಅ.15: ನವೆಂಬರ್ ತಿಂಗಳು ಬಂದ್ರೆ ಸಾಕು ನಾಡದ್ರೋಹಿ ಎಂಇಎಸ್​ (MES) ಪುಂಡರ ಅಟ್ಟಹಾಸ ಹೆಚ್ಚಾಗುತ್ತೆ. ಗಡಿಯಲ್ಲಿ ಮತ್ತೆ ಕಿರಿಕ್​ ಮಾಡಲು ಎಂಇಎಸ್ ಸಿದ್ಧತೆ ನಡೆಸುತ್ತಿದೆ. ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕೆಲವು ಮುಖಂಡರು ಸಭೆ ನಡೆಸಿದರು. ಸಭೆಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ‌ನಿರ್ಧಾರ ಮಾಡಲಾಗಿದೆ.

ಸಭೆಯಲ್ಲಿ ಕರಾಳ ದಿನದ ಮೆರವಣಿಗೆ ನಡೆಸಲು ಎಂಇಎಸ್ ನಿರ್ಧಾರ ಮಾಡಿದೆ. ನವೆಂಬರ್‌ 1ರಂದು ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ. ಮೆರವಣಿಗೆ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಡಿಸಿ ರೋಷನ್ ಎಚ್ಚರಿಕೆ ನೀಡಿದ್ದಾರೆ. ಡಿಸಿ ಹೇಳಿಕೆ ಬೆನ್ನಲ್ಲೇ ಸಭೆ ಮಾಡಿ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. ನ.1ರಂದು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ‌ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು ಮತ್ತೊಂದೆಡೆ ‌ಬೆಳಗಾವಿಯಲ್ಲಿ ಕರಾಳ ದಿನ ಆಚರಣೆಗೆ MES ನಿರ್ಧಾರ ಮಾಡಿದೆ. ಮಹಾರಾಷ್ಟ್ರ ನಾಯಕರ ಆಹ್ವಾನಿಸಿ ಶಾಂತಿಗೆ ಭಂಗ ತರಲು‌ MES ಯತ್ನ ಮಾಡುತ್ತಿದೆ. ಮಹಾರಾಷ್ಟ್ರ ವಿಧಾನಸಭೆ ‌ಚುನಾವಣೆ ಘೋಷಣೆಗೆ ದಿನಗಣನೆ ಹಿನ್ನೆಲೆ MES ಮುಖಂಡರ ಆಹ್ವಾನಕ್ಕೆ ಮಹಾರಾಷ್ಟ್ರ ನಾಯಕರು ಕಾಯ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಾಭ ಪಡೆಯಲು ಮಹಾ ನಾಯಕರು ಹುನ್ನಾರ ಮಾಡ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ

ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖಂಡರು ಒಕ್ಕೊರಲಿನಿಂದ ಅವಕಾಶಕ್ಕೆ ಒತ್ತಾಯಿಸಿದರು. ಒಕ್ಕೂಟ ವ್ಯವಸ್ಥೆಗೆ ಕರ್ನಾಟಕ ಸರ್ಕಾರ ಬೆಲೆ ಕೊಡುತ್ತಿಲ್ಲ. ಗಡಿಯಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ಮುಂದುವರಿಸಿದೆ. ಗಡಿ ವಿಷಯ ಸುಪ್ರೀಂಕೋರ್ಟ್‌ನಲ್ಲಿ ಇರುವಾಗ ಗಡಿ ಭಾಗದ ಎರಡೂ ಕಡೆಯ ಜನರಿಗೆ ಸಮಾನ ಹಕ್ಕು, ಅವಕಾಶಗಳು ಇರುತ್ತವೆ. ಈ ದೃಷ್ಟಿಯಿಲ್ಲಿ ಕರಾಳ ದಿನಾಚರಣೆಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sahadev Mane
Sahadev Mane
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ