AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು

ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಘಟಕ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಪೋಸ್ಟ್ ಕಾರ್ಡ್ ಅಭಿಯಾನ ಶುರು ಮಾಡಿದೆ. ಬೆಳಗಾವಿ ಸೇರಿ 865 ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು
ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು
TV9 Web
| Edited By: ಆಯೇಷಾ ಬಾನು|

Updated on: Aug 10, 2021 | 9:24 AM

Share

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಗಡಿ ವಿಚಾರಕ್ಕೆ ಮತ್ತೆ ಖ್ಯಾತೆ ಶುರುವಾಗಿದೆ. ಗಡಿ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲು ಎಂಇಎಸ್ ಮುಂದಾಗಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಘಟಕ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಪೋಸ್ಟ್ ಕಾರ್ಡ್ ಅಭಿಯಾನ ಶುರು ಮಾಡಿದೆ. ಬೆಳಗಾವಿ ಸೇರಿ 865 ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ಭಾಷಾವಾರು ಪ್ರಾಂತ ರಚನೆಯಾದ ದಿನದಿಂದ ಮರಾಠಿ ಭಾಷಿಕರ ಮೇಲೆ ಅನ್ಯಾಯವಾಗುತ್ತಿದೆ ಎಂದು ಪತ್ರದಲ್ಲಿ ಆರೋಪ ಮಾಡಿದ್ದಾರೆ. 1956 ರಿಂದ ಗಡಿ ಪ್ರದೇಶಗಳನ್ನ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಹೋರಾಟ ನಡೆಸುತ್ತಿದ್ದೇವೆ.

65 ವರ್ಷಗಳಿಂದ ಕನ್ನಡ ಭಾಷಿಕ ರಾಜ್ಯದಲ್ಲಿ ಗಡಿಭಾಗದ ಮರಾಠಿಗರ ಮೇಲೆ ಅನ್ಯಾಯವಾಗುತ್ತಿದೆ. ಗಡಿ ವಿವಾದವನ್ನ ಪ್ರಧಾನಿ ಮೋದಿ ವೈಯಕ್ತಿಕವಾಗಿ ಲಕ್ಷ್ಯ ವಹಿಸಿ ಇತ್ಯರ್ಥ ಪಡಿಸಬೇಕು. ಗಡಿಭಾಗದ 40 ಲಕ್ಷ ಮರಾಠಿಗರನ್ನು ಮಹಾರಾಷ್ಟ್ರಕ್ಕೆ ಸೇರಿಸಿ ನ್ಯಾಯ ಕೊಡಿಸಬೇಕು ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಎಂಇಎಸ್, ಪ್ರಧಾನಿ ಮೋದಿಗೆ ಪತ್ರ ಬರೆಯುವ ಅಭಿಯಾನ ಆರಂಭಿಸಿದ್ದು ಈವರೆಗೂ 11 ಸಾವಿರ ಪತ್ರಗಳನ್ನು ಪೋಸ್ಟ್ ಮಾಡಿರುವುದಾಗಿ ಮಾಹಿತಿ ಸಿಕ್ಕಿದೆ.

MES wrotes letter to pm modi

ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರ

MES wrotes letter to pm modi

ಪತ್ರ ಬರೆದು ಪೋಸ್ಟ್ ಮಾಡುತ್ತಿರುವ ಎಂಇಎಸ್

ಇದನ್ನೂ ಓದಿ: ಹಳದಿ, ಕೆಂಪು ಶಾಲು ಹಾಕಿದವರನ್ನು ಕಂಡಲ್ಲೇ ಹೊಡೀತಾರೆ ಮರಾಠಿಗರು.. ಎಂಇಎಸ್ ಪುಂಡನ ಗೊಡ್ಡು ಬೆದರಿಕೆ

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!