Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಮನ್ನ ಆಸೆಗೆ ಬರಗಾಲ ಬರಲಿ ಎನ್ನುತ್ತಾರೆ ರೈತರು: ಶಿವಾನಂದ ಪಾಟೀಲ್

ರೈತರ ಕುರಿತು ಸಚಿವ ಶಿವಾನಂದ ಪಾಟೀಲ್​​ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ. ಪದೇ ಪದೆ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ರೈತರ ವಿಚಾರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ.

ಸಾಲಮನ್ನ ಆಸೆಗೆ ಬರಗಾಲ ಬರಲಿ ಎನ್ನುತ್ತಾರೆ ರೈತರು: ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ವಿವೇಕ ಬಿರಾದಾರ

Updated on:Dec 25, 2023 | 10:10 AM

ಚಿಕ್ಕೋಡಿ, ಡಿಸೆಂಬರ್​ 25: ರೈತರ (Farmers) ಕುರಿತು ಸಚಿವ ಶಿವಾನಂದ ಪಾಟೀಲ್ (Shivand Patil)​​ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ. ಪದೇ ಪದೆ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾ ನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್‌ ಕೂಡ ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ರೈತರ ವಿಚಾರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ.

ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರಗಳು ಸಾಲಮನ್ನಾ ಮಾಡಿವೆ. ಆದರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ರೈತರ ಸಾಲಮನ್ನ ಕಷ್ಟ ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: ನೇಕಾರರಿಗೆ ದಸರಾ ಉಡುಗೊರೆ ನೀಡಿದ ಸರ್ಕಾರ: ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ‌ಪಾಟೀಲ್‌

ಪರಿಹಾರಕ್ಕೆ ರೈತರು ಆತ್ಮಹತ್ಯೆ

ಕುಡಿದು ಕುಡಿದು ಸತ್ತರೂ, ಹೃದಯಾಘಾತದಿಂದ ಸತ್ತರೂ ಆತ್ಮಹತ್ಯೆ ಅಂತ ದೂರು ಕೊಟ್ಟರೇ ಪರಿಹಾರ ಸಿಗುತ್ತೆ ಎನ್ನೋದು ದುರಾಸೆ ಸಂಬಂಧಿಕರದ್ದು. ರೈತರು ಇಂದಿನಿಂದಲ್ಲ ಹಿಂದಿನಿಂದಲೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ನಾವು 2015 ರಲ್ಲಿ ಐದು ಲಕ್ಷ ಪರಿಹಾರ ಕೊಡಲು ಶುರು ಮಾಡಿದ್ದೇವೆ. ಅವತ್ತಿನಿಂದ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ನಿಜವಾಗಿ ರೈತರಿಗೆ ಅನ್ಯಾಯ ಆಗಿದ್ದರೇ ಪರಿಹಾರ ವಿಳಂಬ ಮಾಡುವುದಿಲ್ಲ. ಜನಪ್ರತಿನಿಧಿಗಳ ಮೇಲೆ ಜನ ಸಾಮಾನ್ಯರು ಒತ್ತಡ ತರುತ್ತಾರೆ. ಪರಿಹಾರ ಸಿಗಬಹುದು ಎಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಈ ಹಿಂದೆ ಸಚಿವ ಶಿವಾನಂದ ಪಾಟೀಲ್​ ಹೇಳಿದ್ದರು.

ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ವರದಿ ಹೆಚ್ಚಳವಾಗುತ್ತಿದೆ. 2014 ರ ಹಿಂದೆ ಎಷ್ಟು, 2015 ರ ನಂತರ ಎಷ್ಟು ಜನರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನೀವೆ ನೋಡಿ. ಆ ವೇಳೆ ಇಷ್ಟೊಂದು ವರದಿ ಆಗುತ್ತಿರಲ್ಲಿ. ಇವಾಗ ಹೆಚ್ಚು ವರದಿ ಆಗುತ್ತಿವೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 am, Mon, 25 December 23

ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ