AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ

ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ ಎಂದು

ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ
ಸಕ್ಕರೆ ಸಚಿವ ಶಿವನಾಂದ್​ ಪಾಟೀಲ್​
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 25, 2023 | 3:42 PM

Share

ಬೆಳಗಾವಿ, ಡಿ.25: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್(Shivanand Patil) ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ ಹಾಗೂ ಮಂಜುನಾಥ ಪರಗೌಡ  ಮಾತನಾಡಿ ‘ನೀವು ರೈತನ ಮಕ್ಕಳು ಎಂದು ಚುನಾವಣೆ ಸಂದರ್ಭದಲ್ಲಿ ಹೇಳುತ್ತೀರಿ, ನೀವು ರೈತರ ಮಕ್ಕಳಲ್ಲ, ಬರಗಾಲ ಬರಲಿ ಎಂದು ನಿಮ್ಮ ತಂದೆ ಬಯಸಿದ್ರಾ ಎಂದು ಕೇಳಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಉಡಾಫೆ ಹೇಳಿಕೆ ಕೊಟ್ರೆ ತಕ್ಕ ಪಾಠ ಕಲಿಸುತ್ತೇವೆ ಎಂದ ಮುಖಂಡರು

ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನೀವು ಎಂಎಲ್‌ಎ ಎಲೆಕ್ಷನ್‌ಗೆ ನಿಲ್ಲು ಎಂದು ಯಾರಾದರೂ ಹೇಳ್ತಾರಾ?, ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ. ಹೇಳಿಕೆ ಹಿಂದೆ ತಗೆದುಕೊಳ್ಳದಿದ್ರೆ ಉಗ್ರ ಹೋರಾಟ ಮಾಡ್ತೀವಿ ಎಂದು ರೈತ ಮುಖಂಡ ಮಹಾದೇವ ಮಡಿವಾಳ ವಾರ್ನ್​ ಕೊಟ್ಟಿದ್ದಾರೆ.

ಇದನ್ನೂ ಓದಿ:ಸಾಲಮನ್ನ ಆಸೆಗೆ ಬರಗಾಲ ಬರಲಿ ಎನ್ನುತ್ತಾರೆ ರೈತರು: ಶಿವಾನಂದ ಪಾಟೀಲ್​ ಹೇಳಿಕೆಗೆ ಬಿಜೆಪಿ ನಾಯಕರ ಆಕ್ರೋಶ

ರಾಜ್ಯದಲ್ಲಿ ಬರ ತಾಂಡವವಾಡಿ ರೈತರ ಸ್ಥಿತಿ ಚಿಂತಾಜನಕ ಆಗಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ರೈತರನ್ನು ಕಡೆಗಣಿಸುವ ಮಾತು ಆಡಿದ್ದಾರೆ. ಈ ಹಿಂದೆ ರೈತರ ಆತ್ಮಹತ್ಯೆ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ರು, ಸಚಿವರು ಜನ, ರೈತರ ಪರ ಕೆಲಸ ಮಾಡಬೇಕು. ರೈತರ ಕಷ್ಟ ಆಲಿಸಬೇಕು, ನಿಮಗೆ ನಾವೆಲ್ಲರೂ ಸೇರಿ ದುಡ್ಡು ಕೊಡ್ತೀವಿ ಆತ್ಮಹತ್ಯೆ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದು, ಸ್ವಲ್ಪ ಆದರೂ ನಾಚಿಕೆ ಎನ್ನುವುದು ಇರಬೇಕು ನಿಮಗೆ ಎಂದು ರೈತ ಮುಖಂಡ ಮಂಜುನಾಥ ಪರಗೌಡ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ