AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ

ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ ಎಂದು

ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ
ಸಕ್ಕರೆ ಸಚಿವ ಶಿವನಾಂದ್​ ಪಾಟೀಲ್​
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Dec 25, 2023 | 3:42 PM

Share

ಬೆಳಗಾವಿ, ಡಿ.25: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್(Shivanand Patil) ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ ಹಾಗೂ ಮಂಜುನಾಥ ಪರಗೌಡ  ಮಾತನಾಡಿ ‘ನೀವು ರೈತನ ಮಕ್ಕಳು ಎಂದು ಚುನಾವಣೆ ಸಂದರ್ಭದಲ್ಲಿ ಹೇಳುತ್ತೀರಿ, ನೀವು ರೈತರ ಮಕ್ಕಳಲ್ಲ, ಬರಗಾಲ ಬರಲಿ ಎಂದು ನಿಮ್ಮ ತಂದೆ ಬಯಸಿದ್ರಾ ಎಂದು ಕೇಳಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಉಡಾಫೆ ಹೇಳಿಕೆ ಕೊಟ್ರೆ ತಕ್ಕ ಪಾಠ ಕಲಿಸುತ್ತೇವೆ ಎಂದ ಮುಖಂಡರು

ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನೀವು ಎಂಎಲ್‌ಎ ಎಲೆಕ್ಷನ್‌ಗೆ ನಿಲ್ಲು ಎಂದು ಯಾರಾದರೂ ಹೇಳ್ತಾರಾ?, ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ. ಹೇಳಿಕೆ ಹಿಂದೆ ತಗೆದುಕೊಳ್ಳದಿದ್ರೆ ಉಗ್ರ ಹೋರಾಟ ಮಾಡ್ತೀವಿ ಎಂದು ರೈತ ಮುಖಂಡ ಮಹಾದೇವ ಮಡಿವಾಳ ವಾರ್ನ್​ ಕೊಟ್ಟಿದ್ದಾರೆ.

ಇದನ್ನೂ ಓದಿ:ಸಾಲಮನ್ನ ಆಸೆಗೆ ಬರಗಾಲ ಬರಲಿ ಎನ್ನುತ್ತಾರೆ ರೈತರು: ಶಿವಾನಂದ ಪಾಟೀಲ್​ ಹೇಳಿಕೆಗೆ ಬಿಜೆಪಿ ನಾಯಕರ ಆಕ್ರೋಶ

ರಾಜ್ಯದಲ್ಲಿ ಬರ ತಾಂಡವವಾಡಿ ರೈತರ ಸ್ಥಿತಿ ಚಿಂತಾಜನಕ ಆಗಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ರೈತರನ್ನು ಕಡೆಗಣಿಸುವ ಮಾತು ಆಡಿದ್ದಾರೆ. ಈ ಹಿಂದೆ ರೈತರ ಆತ್ಮಹತ್ಯೆ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ರು, ಸಚಿವರು ಜನ, ರೈತರ ಪರ ಕೆಲಸ ಮಾಡಬೇಕು. ರೈತರ ಕಷ್ಟ ಆಲಿಸಬೇಕು, ನಿಮಗೆ ನಾವೆಲ್ಲರೂ ಸೇರಿ ದುಡ್ಡು ಕೊಡ್ತೀವಿ ಆತ್ಮಹತ್ಯೆ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದು, ಸ್ವಲ್ಪ ಆದರೂ ನಾಚಿಕೆ ಎನ್ನುವುದು ಇರಬೇಕು ನಿಮಗೆ ಎಂದು ರೈತ ಮುಖಂಡ ಮಂಜುನಾಥ ಪರಗೌಡ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು