AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಂಡಾ-ಕ್ಯಾಸಲ್​ ರಾಕ್​ ನಡುವೆ ರೈಲು ಸಂಚಾರ 1 ತಿಂಗಳು ಭಾಗಶಃ ರದ್ದು

ಮಳೆಗಾಲದ ಸಮಯದಲ್ಲಿ ಲೋಂಡಾ ಮತ್ತು ಕ್ಯಾಸಲ್​ ರಾಕ್​​ ನಡುವೆ ರೈಲಿನಲ್ಲಿ ಪ್ರಯಾಣ ಮಾಡಬೇಕು ಅಂತ ಅಂದುಕೊಂಡವರಿಗೆ ನೈಋತ್ಯ ರೈಲ್ವೆ ವಲಯ ಕಹಿ ಸುದ್ದಿ ನೀಡಿದೆ. ಲೋಂಡಾ ಮತ್ತು ಕ್ಯಾಸಲ್​ ರಾಕ್​ ನಡುವೆ ರೈಲು ಸಂಚಾರ ಒಂದು ತಿಂಗಳು ಭಾಗಶಃ ರದ್ದಾಗಲಿದೆ. ಇಲ್ಲಿದೆ ಮಾಹಿತಿ.

ಲೋಂಡಾ-ಕ್ಯಾಸಲ್​ ರಾಕ್​ ನಡುವೆ ರೈಲು ಸಂಚಾರ 1 ತಿಂಗಳು ಭಾಗಶಃ ರದ್ದು
ಲೋಂಡಾ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on: Oct 23, 2024 | 7:38 AM

Share

ಬೆಳಗಾವಿ, ಅಕ್ಟೋಬರ್​ 23: ಉತ್ತರ ಕನ್ನಡ (Uttar Kannada) ಜಿಲ್ಲೆಯ ಕ್ಯಾಸಲ್ ರಾಕ್ (Castle Rock) ಮತ್ತು ಬೆಳಗಾವಿ (Belagavi) ಜಿಲ್ಲೆಯ ಲೋಂಡಾ (Londa) ರೈಲು ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿ ನಡೆಯಲಿದೆ. ಹೀಗಾಗಿ ಈ ಎರಡು ನಿಲ್ದಾಣಗಳ ನಡುವೆ ರೈಲು (Train) ಸಂಚಾರ ಒಂದು ತಿಂಗಳು ರದ್ದಾಗಲಿದೆ.

ಕ್ಯಾಸಲ್ ರಾಕ್ ಮತ್ತು ಲೋಂಡಾ ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 17333/17334 ಭಾಗಶಃ ರದ್ದಾಗಲಿವೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರೈಲು ರದ್ದು

  1. ರೈಲು ಸಂಖ್ಯೆ: 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಲೋಂಡಾ ಮತ್ತು ಕ್ಯಾಸಲ್ ರಾಕ್ ನೆಲಾಣಗಳ ನಡುವೆ ನವೆಂಬರ್ 1 ರಿಂದ 30 ರವರೆಗೆ ಭಾಗಶಃ ರದ್ದಾಗಲಿದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ಕೊನೆಗೊಳ್ಳುತ್ತದೆ.
  2. ರೈಲು ಸಂಖ್ಯೆ: 17334 ಕ್ಯಾಸಲ್ ರಾಕ್-ಮೀರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಕ್ಯಾಸಲ್ ರಾಕ್ ಮತ್ತು ಲೋಂಡಾ ನಿಲ್ದಾಣಗಳ ನಡುವೆ ನವೆಂಬರ್ 1 ರಿಂದ 30ರವರೆಗೆ ಭಾಗಶಃ ರದ್ದಾಗಲಿದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ಹೊರಡಲಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬ: ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

ಟ್ವಿಟರ್​ ಪೋಸ್ಟ್​​

ಗುಂತಕಲ್​ ಮತ್ತು ಕದಿರಿದೇವರ ನಿಲ್ದಾಣಗಳ ನಡುವೆ ರೈಲು ಸಂಚಾರ ಸ್ಥಗಿತ

ರಾಯದುರ್ಗ ಮತ್ತು ಕದಿರಿದೇವರಪಲ್ಲಿ ನಿಲ್ದಾಣಗಳ ನಡುವೆ ಯಾರ್ಡ್ ಮಾರ್ಪಾಡು ಮತ್ತು ಅಗತ್ಯ ಸುರಕ್ಷತಾ ಸಂಬಂಧಿತ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗುಂತಕಲ್ ಮತ್ತು ಕದಿರಿದೇವರ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 07589/07590 ಭಾಗಶಃ ರದ್ದಾಗಲಿವೆ.

  1. ರೈಲು ಸಂಖ್ಯೆ: 07589 ತಿರುಪತಿ-ಕದಿರಿದೇವರಪಲ್ಲಿ ಡೈಲಿ ಪ್ಯಾಸೆಂಜರ್​ ವಿಶೇಷ ರೈಲು ಸಂಚಾರ ನವೆಂಬರ್​ 1 ರಿಂದ 30ರವರೆಗೆ ಗುಂತಕಲ್ ಮತ್ತು ಕದಿರಿದೇವರಪಲ್ಲಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಗುಂತಕಲ್ ನಿಲ್ದಾಣದಲ್ಲಿ ಕೊನೆಗೊಳ್ಳುಲಿದೆ.
  2. ರೈಲು ಸಂಖ್ಯೆ: 07590 ಕದಿರಿದೇವರಪಲ್ಲಿ-ತಿರುಪತಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ಸಂಚಾರ ನವೆಂಬರ್ 2 ರಿಂದ ಡಿಸೆಂಬರ್ 1ರವರೆಗೆ ಕದಿರಿದೇವರಪಲ್ಲಿ ಮತ್ತು ಗುಂತಕಲ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಗುಂತಕಲ್ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ