AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್​ಪಿ

ಕೆರಗೋಡು ಬಳಿಕ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಹಾರಿಸಿದ್ದ ಭಗವಾ ಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದು ಎಸ್​ಪಿ ಭೀಮಾಶಂಕರ ಗುಳೇದ್ ಹೇಳಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಈ ಧ್ವಜ ಇರುವುದು‌‌ ಗೊತ್ತಾಗಿರುವ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಟ್ಟಣ‌ ಪಂಚಾಯಿತಿ ಮುಖ್ಯಾಧಿಕಾರಿ ರವಿ ಬಾಗಲಕೋಟೆ ಹೇಳಿದ್ದಾರೆ.

ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್​ಪಿ
ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್​ಪಿ
Sahadev Mane
| Edited By: |

Updated on: Feb 04, 2024 | 1:45 PM

Share

ಬೆಳಗಾವಿ, ಫೆ.4: ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ ಎಂದು ಬೆಳಗಾವಿ (Belagavi) ಎಸ್​ಪಿ ಭೀಮಾಶಂಕರ ಗುಳೇದ್ ಹೇಳಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದ ಸಂಬಂಧ ಮಾತನಾಡಿದ ಅವರು, ಸರ್ಕಾರ, ಅಧಿಕಾರಿಗಳ ತೀರ್ಮಾನದಂತೆ ನಾವು ನಡೆಯುತ್ತೇವೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣವಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣ ಮೇಲೆ ನಿಗಾ ಇಟ್ಟಿದ್ದೇವೆ. ಯಾರೇ ತಪ್ಪು ಮಾಡಿದರೂ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಗ್ರಾಮದಲ್ಲಿ ಎಲ್ಲರೂ ಒಂದೇ. ಹೊರಗಿನ ಜನರ ಬರೋದು ಬೇಡ ಅಂತಾ ಗ್ರಾಮಸ್ಥರು ಹೇಳಿದ್ದಾಗಿ ತಿಳಿಸಿದರು.

ಗ್ರಾಮಸ್ಥರ ಮಾತಿಗೆ ಬೆಲೆ ಕೊಡುತ್ತೇವೆ. ಧ್ವಜದ ಕಟ್ಟೆ ಸಾರ್ವಜನಿಕ ಸ್ಥಳದಲ್ಲಿ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ, ಸುಪ್ರೀಂ ಕೋರ್ಟ್ ಆದೇಶ ಇದೆ. ಅಧಿಕಾರಿಗಳ ತೀರ್ಮಾನ, ಸರ್ಕಾರದ ತಿರ್ಮಾನದಂತೆ ನಾವು ನಡೆಯುತ್ತೆವೆ. ಅನುಮತಿ‌ ಕೇಳಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೇ ಇಷ್ಟೆಲ್ಲ ಸಮಸ್ಯೆಗೆ ಕಾರಣ ಎಂದರು.

ಇದನ್ನೂ ಓದಿ: ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ

ಜವಾಬ್ದಾರಿ ಇದ್ದವರು ಯುವಕರು ಇದನ್ನ ಸರಿಯಾಗಿ ಮಾಡಿಕೊಂಡರೆ ಏನೂ ಆಗಲ್ಲ. 10 ದಿನದಿಂದ ಇದು ನಡೆಯುತ್ತಿದೆ. ಪೊಲೀಸರು ಇಲ್ಲಿ ಇದ್ದಾರೆ, ಸಾಮಾಜಿಕ ಜಾಲತಾಣದ ನಿಗಾ ಇಟ್ಟಿದ್ದೇವೆ. ದ್ವೇಷಮಯ ಪೊಸ್ಟ್ ಹಾಕಿದ್ದಕ್ಕೆ ನಾವು ಎಚ್ಚರಿಕೆ ಕೊಡಲಾಗಿದೆ, ಅದಕ್ಕೆ ಕ್ರಮ ಆಗಲಿದೆ ಎಂದರು.

ಧ್ವಜ ಹಾರಿಸಲು ಮನವಿ ಮಾಡಿದ್ದ ಗ್ರಾಮಸ್ಥರು

ನಮಗೆ ಧ್ವಜ ಹಾರಿಸಲು ಗ್ರಾಮಸ್ಥರು ಮನವಿ‌ ಮಾಡಿದ್ದರು. ಆದರೆ ಸಾರ್ವಜನಿಕ ಸ್ಥಳದಲ್ಲಿ ಈ ಧ್ವಜ ಇರುವುದು‌‌ ಗೊತ್ತಾಗಿದೆ ಎಂದು ಎಂಕೆ ಹುಬ್ಬಳ್ಳಿ ಪಟ್ಟಣ‌ ಪಂಚಾಯಿತಿ ಮುಖ್ಯಾಧಿಕಾರಿ ರವಿ ಬಾಗಲಕೋಟೆ ಹೇಳಿದ್ದಾರೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುತ್ತೇವೆ. ಈ ಹಿಂದೆ ಇಲ್ಲಿ ಧ್ವಜ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಕಾನೂನು ರೀತಿ ಮೇಲಧಿಕಾರಿ ಗಮನಕ್ಕೆ ತಂದು ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು