AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆಯಲ್ಲಿ ಹೇಳಿದ್ದಿಷ್ಟು

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆಯವ ಸಂಭಾವ್ಯ ಪಟ್ಟಿಯಲ್ಲಿ ಅಥಣಿ ಸಾಹುಕಾರ ಲಕ್ಷ್ಮಣ ಸವದಿ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಇದು ಹುಸಿಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆಯಲ್ಲಿ ಹೇಳಿದ್ದಿಷ್ಟು
ಶಾಸಕ ಲಕ್ಷ್ಮಣ ಸವದಿ
ವಿವೇಕ ಬಿರಾದಾರ
| Updated By: ರಮೇಶ್ ಬಿ. ಜವಳಗೇರಾ|

Updated on:May 29, 2023 | 12:55 PM

Share

ಬೆಂಗಳೂರು: ಅಥಣಿ​ (Athani) ಶಾಸಕ ಲಕ್ಷ್ಮಣ ಸವದಿಗೆ (Laxman Savadi) ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದಲ್ಲಿ ಸ್ಥಾನ ಪಡೆಯವ ಸಂಭಾವ್ಯ ಪಟ್ಟಿಯಲ್ಲಿ ಅಥಣಿ ಸಾಹುಕಾರ ಲಕ್ಷ್ಮಣ ಸವದಿ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಇದು ಹುಸಿಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ ಎಂದಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ ಎಂದರು.

ಇದನ್ನೂ ಓದಿ: ಖಾತೆ ಹಂಚಿಕೆ ಬೆನ್ನಲ್ಲೇ ಮುನಿಸಿಕೊಂಡಿದ್ದ ನೂತನ ಸಚಿವ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ

ಇನ್ನು ಎರಡುವರೆ ವರ್ಷ ಮಾತ್ರ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದನ್ನ ಸಿದ್ದರಾಮಯ್ಯ ಅವರನ್ನೇ ಕೇಳಬೇಕು ಹೈಕಮಾಂಡ್​ದಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು ನಾಲ್ಕು ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಿಲ್ಲ. ಹೊರಗಡೆ ಕೇವಲ ಊಹಾಪೂಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಮೊದಲು ಸರ್ವ ಕಾರ್ಯ ಮುಗಿಯಲಿ ಸರ್ವೆ ಆದ ಮೇಲೆ ಗೈಡ್ ಲೈನ್ಸ್ ಬರುತ್ತೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತೆ ಎಂದು ತಿಳಿಸಿದರು.

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಲಕ್ಷ್ಮಣ ಸವದಿಯವರಿಗೆ ಸಿಎಂ ಸಿದ್ದರಾಮಯ್ಯ ಒಂದು ಟಾಸ್ಕ್​​ ನೀಡಿದ್ದರು. ತಾವು ಗೆಲ್ಲವುದು ಮಾತ್ರವಲ್ಲದೇ ಅಕ್ಕಪಕ್ಕದ ಕ್ಷೇತ್ರಗಳಾದ ಕಾಗವಾಡ ಮತ್ತು ಕುಡುಚಿ ಕ್ಷೇತ್ರಗಳನ್ನು ಗೆದ್ದುಕೊಂಡು ಬರಬೇಕು ಎಂದಿದ್ದರು. ಈ ಮಾತಿನಂತೆ ಲಕ್ಷ್ಮಣ ಸವದಿ ಕಾಗವಾಡದಲ್ಲಿ ರಾಜು ಕಾಗೆ ಹಾಗೂ ಕುಡಚಿಯಲ್ಲಿ ಮಹೇಂದ್ರ ತಮ್ಮಣ್ಣವರ್ ಅವರನ್ನ ಗೆಲ್ಲಿಸಿ ತಾವು ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Mon, 29 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ