AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ; ಪುತ್ರ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್

ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ.

ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ; ಪುತ್ರ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್
ಶಾಸಕ ಲಕ್ಷ್ಮಣ್ ಸವದಿ ಪುತ್ರ ಸುಮಿತ್ ಸವದಿ
Follow us
TV9 Web
| Updated By: ಆಯೇಷಾ ಬಾನು

Updated on:Oct 27, 2023 | 1:41 PM

ಚಿಕ್ಕೋಡಿ, ಅ.27: ಹುಲಿ ಉಗುರಿನ ಪೆಂಡೆಂಟ್ (Tiger Claw Pendant) ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ಮೃಣಾಲ್​ನನ್ನು ವಿಚಾರಣೆ ನಡೆಸಿದ್ದಾರೆ. ಇದೀಗ ಶಾಸಕ ಲಕ್ಷ್ಮಣ ಸವದಿ (Laxman Savadi) ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದೆ.

ಹೌದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಈಗ ಲಕ್ಷಣ್ ಸವದಿ ಕುಟುಂಬಕ್ಕೆ ಹುಲಿ ಉಗುರು ಕಂಟಕವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲೂ ಹುಲಿ ಉಗುರು ಮಾದರಿಯ ಪೆಂಡೆಂಟ್ ಕಂಡು ಬಂದಿದೆ. ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭ ವೇಳೆ ಸುಮಿತ್ ಅವರು ಎರಡು ಹುಲಿ ಉಗುರುಗಳಿರುವ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಹುಲಿ ಉಗರು ಪ್ರಕರಣ: ಪಕ್ಕಾ ಸಸ್ಯಾಹಾರಿಯಾಗಿರುವ ನನ್ನ ಮನೆಯಲ್ಲಿ ಹುಲಿಯುಗುರು ಹೇಗೆ ಬಂದೀತು? ಲಕ್ಷ್ಮಿ ಹೆಬ್ಬಾಳ್ಕರ್

ಲಕ್ಷ್ಮೀ ಹೆಬ್ಬಾಳ್ಕರ್ ಮನೆಯಲ್ಲಿ ಶೋಧ

ಹುಲಿ ಉಗುರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಸಂಕಷ್ಟ ಎದುರಾಗಿದೆ. ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ಮೃಣಾಲ್​ನನ್ನು ವಿಚಾರಣೆ ನಡೆಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಫೋಟೋ ವೈರಲ್ ಆಗಿತ್ತು. ಬೆಳಗಾವಿಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಡಿಸಿಎಫ್ ಶಂಕರ್ ಕಲ್ಲೋಳಕರ್ ನೇತೃತ್ವದಲ್ಲಿ 24 ಅಧಿಕಾರಿಗಳ ತಂಡ ಆಗಮಿಸಿ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನನ್ನ ಪುತ್ರ ಧರಿಸಿರುವ ಪೆಂಡೆಂಟ್ ಪ್ಲಾಸ್ಟಿಕ್​ದು ಮದುವೆ ಟೈಮ್​ನಲ್ಲಿ ಅದು ಯಾರೋ ಗಿಫ್ಟ್ ಕೊಟ್ಟಿದ್ದು ಅಂತ ಸ್ಪಷ್ಟನೆ ಕೊಟ್ಟಿದ್ದಾರೆ. ಅರಣ್ಯಾಧಿಕಾರಿಗಳಿಂದ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್​ ವಿಚಾರಣೆ ನಡೆಸಿದ್ದು, ಲಾಕೆಟ್ ಎಲ್ಲಿಂದ ಬಂತು ಯಾರು ಕೊಟ್ಟಿದ್ದು ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:28 pm, Fri, 27 October 23

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್