AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಆತ್ಮಹತ್ಯೆಗೆ ಹೊಸ ಟ್ವಿಸ್ಟ್; ರಮೇಶ್ ಜಾರಕಿಹೊಳಿ‌ ಬೆಂಬಲದಿಂದ ಕಾಮಗಾರಿ ಮಾಡಿಸಿದ್ದಾರೆಂದು ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷ ಹೇಳಿಕೆ

ಶಾಸಕ ರಮೇಶ್ ಜಾರಕಿಹೊಳಿ‌ ಬೆಂಬಲದಿಂದ ಸಂತೋಷ್ ಕಾಮಗಾರಿ ಮಾಡಿಸಿದ್ದಾರೆಂದು ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಆರೋಪ ಮಾಡಿದ್ದಾರೆ

ಸಂತೋಷ್ ಆತ್ಮಹತ್ಯೆಗೆ ಹೊಸ ಟ್ವಿಸ್ಟ್; ರಮೇಶ್ ಜಾರಕಿಹೊಳಿ‌ ಬೆಂಬಲದಿಂದ ಕಾಮಗಾರಿ ಮಾಡಿಸಿದ್ದಾರೆಂದು ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷ ಹೇಳಿಕೆ
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
TV9 Web
| Edited By: |

Updated on:Apr 13, 2022 | 7:07 AM

Share

ಬೆಳಗಾವಿ: ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ‌ ಬೆಂಬಲದಿಂದ ಸಂತೋಷ್ ಕಾಮಗಾರಿ ಮಾಡಿಸಿದ್ದಾರೆಂದು ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.

ಮೃತ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ. ಸ್ಥಳೀಯ ಮಟ್ಟದ ನಾಯಕರು ಯಾರಾದರೂ ಪ್ರಕರಣದಲ್ಲಿ ಇನ್ವಾಲ್ವ್ ಅದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಹೆಬ್ಬಾಳ್ಕರ್, ಖಂಡಿತವಾಗಿ ಸ್ಥಳೀಯ ಮಟ್ಟದ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ. ಆ ಟೈಮ್‌ನಲ್ಲಿ ಯಾರು ಮಂತ್ರಿಗಳಿದ್ದರು? ಯಾರ ಜೊತೆ ಒಡನಾಟ ಇತ್ತು? ಸಂತೋಷ್ ಪಾಟೀಲ್‌ರವರು ಬಿಜೆಪಿ ಕಾರ್ಯಕರ್ತರು. ಮೊನ್ನೆ ನಡೆದ ಎಂಎಲ್‌ಸಿ ಎಲೆಕ್ಷನ್‌ನಲ್ಲಿ ಯಾರ ಪರವಾಗಿ ಕೆಲಸ ಮಾಡಿದ್ದಾರೆ ಗೊತ್ತಾಗುತ್ತದೆ. ಯಾರ ಪರವಾಗಿ ಓಡಾಡಿದ್ದಾರೆ, ಯಾರ ಜೊತೆ ಒಡನಾಟ ಇತ್ತು? ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಗಾಡ್‌ಫಾದರ್ ಯಾರು? ಯಾರ ಧೈರ್ಯದಿಂದ ನಾಗೇಶ್ ಮನ್ನೋಳ್ಕರ್ ಕೆಲಸ ಮಾಡಿಸಿದ್ದಾರೆ? ಅದೆಲ್ಲಾ ಕೂಲಂಕುಷವಾಗಿ ತನಿಖೆಯಿಂದ ಹೊರಬರಬೇಕಾಗುತ್ತೆ.

ಇಲ್ಲಿ ಒಂದು ಜೀವ ಹೋಗಿದೆ ಇದರಲ್ಲಿ ರಾಜಕಾರಣ ಮಾಡೋದು ಬೇಡ. ಇಡೀ ಹಿಂಡಲಗಾ ಗ್ರಾಮದ ಎಲ್ಲಾ ಜನರಿಗೂ ಗೊತ್ತಿದೆ. 14 ಸಾವಿರ ವೋಟರ್ಸ್ ಇದ್ದಾರೆ, ಸುಮಾರು 20 ರಿಂದ 25 ಸಾವಿರ ಜನಸಂಖ್ಯೆ ಇರೋ ಈ ಊರಿನಲ್ಲಿ ಎಲ್ಲರಿಗೂ ಗೊತ್ತು. ಯಾರಿಂದ ಇವತ್ತು ಜೀವ ಹೋಗಿದೆ ಅಂತಾ. ಯಾರೋ ಒಬ್ಬರು ಯೂ ಗೋ ಅಹೆಡ್ ಅಂತಾ ಧೈರ್ಯ ನೀಡಿದ್ದಕ್ಕೆ, ನಾನೀದಿನಿ ನಾ ಮಾಡ್ತೀನಿ ಅಂದಿದ್ದಕ್ಕೆ ಆಗಿದೆ. ಈಗ ನಾವು ಕೂಡ 25 ರಿಂದ 30 ಲಕ್ಷ ರೂಪಾಯಿ ಕೆಲಸ ಯಾವುದೋ ಪ್ರವಾಹ ಬಂದಾಗ ಮಾಡಬೇಕಾದ್ರೆ ಆಯ್ತಪಾ ನೀನು ಮಾಡಪ್ಪಾ ಅಂತಾ ಹೇಳ್ತೀವಿ. ನಾವು ನಿಲ್ತೀವಿ, ಅಡ್ವಾನ್ಸ್‌ನಲ್ಲಿ ಕೆಲಸ ಮಾಡಿಸಿದರೂ ಅದನ್ನ ನಾವು ಸರಿ ಮಾಡಿಸಿಕೊಡ್ತೀವಿ. ಈ ನಾಲ್ಕು ಕೋಟಿ ಕಾಮಗಾರಿಗೆ ಯಾರಾದರೂ ಒಬ್ಬರು ಹೇಳಿರಬೇಕಲ್ಲ. ಅದನ್ನ ತಗೆಯುವಂತಹ ಕೆಲಸ ಇಲಾಖೆಯವರು ಮಾಡಲಿ ಎಂದು ರಮೇಶ್ ಜಾರಕಿಹೊಳಿ‌ ಅವರ ಬೆಂಬಲದಿಂದ ಸಂತೋಷ್ ಪಾಟೀಲ್ ಕೆಲಸ ಮಾಡಿರುವುದಾಗಿ ಪರೋಕ್ಷವಾಗಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ; ಸಿಎಂ ಬೊಮ್ಮಾಯಿ ಇದ್ದ ಹೋಟೆಲ್​ಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

Published On - 7:00 am, Wed, 13 April 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್