AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಪತ್ನಿ ವ್ರತಸ್ಥ: ಬಾಯಿ ತೆಗೆದರೆ ರಾಮನ ಪಕ್ಷದವರು ಅಂತಾರೆ.. ಆದ್ರೆ ಅವರ ಬಾಯಲ್ಲಿ ಇಂತಹ ಮಾತುಗಳು ಬರುತ್ತಿವೆ -ಲಕ್ಷ್ಮೀ‌ ಹೆಬ್ಬಾಳ್ಕರ್

ಸುಧಾಕರ್, ನಮ್ಮೆಲ್ಲರ ಹೆಸರನ್ನ ತೆಗೆದುಕೊಂಡಿದ್ದಾರೆ. ಅವರ ಬಳಿ ಯಾವ ಸಾಕ್ಷಿಗಳಿವೆ ಕೋರ್ಟ್​ಗೆ ಕೊಡಲಿ. ಸಾಕ್ಷ್ಯಗಳನ್ನ ಪ್ರೋಡ್ಯೂಸ್ ಮಾಡೋಕೆ ಅವಕಾಶವಿದೆ. ಹಿಂದೂ ರಾಷ್ಟ್ರ, ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನ ಮಾಡಿದ್ದಾರೆ. ರಾಜಕಾರಣಕ್ಕೆ ಮಹಿಳೆಯರೇ ಬರುವುದು ವಿರಳ. ಬಂದವರನ್ನ ಸಂಶಯದಿಂದ ನೋಡುವಂತೆ ಮಾಡಿದ್ದಾರೆ.

ಏಕಪತ್ನಿ ವ್ರತಸ್ಥ: ಬಾಯಿ ತೆಗೆದರೆ ರಾಮನ ಪಕ್ಷದವರು ಅಂತಾರೆ.. ಆದ್ರೆ ಅವರ ಬಾಯಲ್ಲಿ ಇಂತಹ ಮಾತುಗಳು ಬರುತ್ತಿವೆ -ಲಕ್ಷ್ಮೀ‌ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Mar 25, 2021 | 1:41 PM

ಬೆಳಗಾವಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೀಡಿರುವ ‘ಏಕಪತ್ನಿ ವ್ರತಸ್ಥ‘ ಎಂಬ ಹೇಳಿಕೆಗೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈಗ ಈ ಬಗ್ಗೆ ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಮಾತನಾಡಿದ್ದು ಸಚಿವ ಸುಧಾಕರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಾಯಿ ತೆಗೆದರೆ ರಾಮನ ಪಕ್ಷದವರು ಅಂತಾರೆ. ಆದರೆ ಅವರ ಬಾಯಲ್ಲಿ ಇಂತಹ ಮಾತುಗಳು ಬರುತ್ತಿವೆ. ಮಾತಿನ ಭರದಲ್ಲಿ ಎಲ್ಲರ ಮೇಲೆ ಬೆಟ್ಟು ಮಾಡಿದ್ದಾರೆ. ಬಿಜೆಪಿಯಲ್ಲೂ ಶೋಭಾ, ರೂಪಾಲಿ, ಪೂರ್ಣಿಮಾ ಇದ್ದಾರೆ. ಶಶಿಕಲಾ ಜೊಲ್ಲೆಯವರು ಸಚಿವೆಯಾಗಿದ್ದಾರೆ. ಇವರೆಲ್ಲರನ್ನೂ ಸುಧಾಕರ್ ಅಪಮಾನಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸುಧಾಕರ್ ಹೇಳಿಕೆಯನ್ನ ನಾವು ಪ್ರಧಾನಿಯವರಿಗೆ ಕಳಿಸ್ತೇವೆ ಸುಧಾಕರ್, ನಮ್ಮೆಲ್ಲರ ಹೆಸರನ್ನ ತೆಗೆದುಕೊಂಡಿದ್ದಾರೆ. ಅವರ ಬಳಿ ಯಾವ ಸಾಕ್ಷಿಗಳಿವೆ ಕೋರ್ಟ್​ಗೆ ಕೊಡಲಿ. ಸಾಕ್ಷ್ಯಗಳನ್ನ ಪ್ರೋಡ್ಯೂಸ್ ಮಾಡೋಕೆ ಅವಕಾಶವಿದೆ. ಹಿಂದೂ ರಾಷ್ಟ್ರ, ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನ ಮಾಡಿದ್ದಾರೆ. ರಾಜಕಾರಣಕ್ಕೆ ಮಹಿಳೆಯರೇ ಬರುವುದು ವಿರಳ. ಬಂದವರನ್ನ ಸಂಶಯದಿಂದ ನೋಡುವಂತೆ ಮಾಡಿದ್ದಾರೆ. ಸುಧಾಕರ್ ಹೇಳಿಕೆಯನ್ನ ನಾವು ಪ್ರಧಾನಿಯವರಿಗೆ ಕಳಿಸ್ತೇವೆ. ಅವರ ಸಂಸ್ಕೃತಿ ಎಂತದ್ದು ಎನ್ನುವುದನ್ನ ಅವರು ನೋಡಲಿ. ಇಡೀ ಮಹಿಳಾ ಕುಲಕ್ಕೆ ಸುಧಾಕರ್ ಅಪಮಾನಿಸಿದ್ದಾರೆ. ಇದು ಸಾರ್ವಜನಿಕ ಬದುಕಿನಲ್ಲಿರುವವರ ಬಗ್ಗೆ ಮಾಡಿದ ಅಪಮಾನ ಎಂದು ಲಕ್ಷ್ಮೀ‌ ಹೆಬ್ಬಾಳ್ಕರ್ ಸುಧಾಕರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬಾಯಿ ಬಿಟ್ರೆ ರಾಮನ ಬಗ್ಗೆ ಜಪ ಮಾಡುವವರು ಈ ರೀತಿಯಲ್ಲಿ ಮಾತಾಡುವುದಕ್ಕೆ ಯಾರು ಅನುವು ಮಾಡಿಕೊಟ್ರು. ಅವರ ಪಕ್ಷದ ಶಾಸಕರು ಒಪ್ಪಿಸಿಕೊಳ್ಳುವುದಕ್ಕೆ ಸಾಧ್ಯನಾ. ಅವರು ಒಬ್ಬ ಮಂತ್ರಿ. ಪ್ರಮಾಣ ವಚನ ಸ್ವೀಕಾರ ಮಾಡುವಾಗ ರಾಗ ದ್ವೇಷದಿಂದ ಪ್ರಮಾಣ ವಚನ ಸ್ವೀಕಾರ ಮಾಡಿರುತ್ತಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಹೆಸರು ತೆಗೆದುಕೊಂಡಿದ್ದಾರೆ. ಅವರ ಬಳಿ ಸಾಕ್ಷಿಗಳು ಇದ್ರೆ ಪ್ರೊಡ್ಯೂಸ್ ಮಾಡಲಿ. ಪ್ರಧಾನಿ, ಹೋಮ್ ಮಿನಿಸ್ಟರ್​ಗೆ ಇದನ್ನು ಕಳಿಸಿಕೊಡುತ್ತೇವೆ ಎಂದು ಗರಂ ಆಗಿದ್ದಾರೆ.

ಸಚಿವ ಸುಧಾಕರ್ ಹೇಳಿದ್ದೇನು? ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದರು.

ಮುಖ್ಯಮಂತ್ರಿ ಆಗಿದ್ದಾಗ ಯಾರು ಯಾರು ಏನೇನು ಮಾಡಿದ್ದರು? ಎಂದು ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಎಂದು ಡಾ.ಕೆ.ಸುಧಾಕರ್ ಪ್ರಶ್ನೆ ಎತ್ತಿದ್ದಾರೆ. ಹೀಗಾಗಿ 224 ಶಾಸಕರ ಬಗ್ಗೆ ಕೂಡ ತನಿಖೆಯಾಗಲಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗ್ರಹಿಸಿದ್ದರು.

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದರು.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ಪ್ರಶ್ನೆ: ಬಿದ್ದು ಬಿದ್ದು ನಕ್ಕ ಸೌಮ್ಯಾರೆಡ್ಡಿ; ನಾನು ನೂರಕ್ಕೆ ನೂರರಷ್ಟು ಏಕ ಪತ್ನಿವ್ರತಸ್ಥ ಎಂದ ಶಿವಲಿಂಗೇಗೌಡ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್