AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಲಕ್ಷ್ಮಣ ಸವದಿ ಪುತ್ರ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ ಆರೋಪ: ಹಿರಿಯ ಮಗ ಹೇಳಿದ್ದಿಷ್ಟು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನೆಲ್ಲೇ ಇದೀಗ ಲಕ್ಷಣ್ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ಶುರುವಾಗಿದೆ. ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್​​ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಕುರಿತಾಗಿ ಮಾತನಾಡಿರುವ ಹಿರಿಯ ಪುತ್ರ ಚಿದಾನಂದ, ನನ್ನ ಸಹೋದರನ ಬಳಿ ಇರೋದು ಪ್ಲಾಸ್ಟಿಕ್ ಉಗುರು ಎಂದಿದ್ದಾರೆ.

ಶಾಸಕ ಲಕ್ಷ್ಮಣ ಸವದಿ ಪುತ್ರ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ ಆರೋಪ: ಹಿರಿಯ ಮಗ ಹೇಳಿದ್ದಿಷ್ಟು
ಕಾಂಗ್ರೆಸ್ ಶಾಸಕ ಲಕ್ಷಣ್ ಸವದಿ, ಹಿರಿಯ ಪುತ್ರ ಚಿದಾನಂದ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Oct 27, 2023 | 3:30 PM

Share

ಬೆಳಗಾವಿ, ಅಕ್ಟೋಬರ್​​​​ 27: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಪುತ್ರ ಸುಮಿತ್​ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ ಆರೋಪ ಕೇಳಿಬಂದಿದೆ. ಸದ್ಯ ಈ ಕುರಿತಾಗಿ ಸವದಿ ಹಿರಿಯ ಪುತ್ರ ಚಿದಾನಂದ ಹೇಳಿಕೆ ನೀಡಿದ್ದು, ನನ್ನ ಸಹೋದರನ ಬಳಿ ಇರೋದು ಪ್ಲಾಸ್ಟಿಕ್ ಉಗುರು. ಮದುವೆ ಸಮಾರಂಭದಲ್ಲಿ ಸುಮಿತ್ ಗೆಳೆಯರು ಉಡುಗೊರೆ ಕೊಟ್ಟಿದ್ದಾರೆ. ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಿಲ್ಲೆಯ ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ, ತನಿಖೆಗೆ ಸಹಕರಿಸುತ್ತೇವೆ. ಈ ಭಾಗದಲ್ಲಿ ಹುಲಿ ಉಗುರೆಂದು ಧರಿಸುವುದು ಒಂದು ರೀತಿ ಶೋಕಿ. ಇದು ಪ್ಲಾಸ್ಟಿಕ್​ನಿಂದ ಮಾಡಿರುವ ಹುಲಿ ಉಗುರಿನ ಆಕೃತಿ ಆಗಿದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನೆಲ್ಲೇ ಇದೀಗ ಲಕ್ಷಣ್ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ಶುರುವಾಗಿದೆ. ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ಇದನ್ನೂ ಓದಿ: ಹುಲಿ ಉಗರು ಪ್ರಕರಣ; ವ್ಯಕ್ತಿಯೊಬ್ಬನಿಂದ ವಶಪಡಿಸಿಕೊಂಡ ಪೆಂಡೆಂಟ್ ಅಸಲಿ ಹುಲಿ ಉಗುರು ಅಂತ ಖಾತ್ರಿಯಾದರೆ ಮಾತ್ರ ಕೂಡಲೇ ಬಂಧಿಸಲಾಗುವುದು: ಅರಣ್ಯಾಧಿಕಾರಿ

ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭ ವೇಳೆ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ ಫೋಟೋ ಇದೀಗ ವೈರಲ್ ಆಗಿದೆ. ಹಾಗಾಗಿ ಲಕ್ಷ್ಮಣ್ ಸವದಿ ನಿವಾಸಕ್ಕೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಬಹುದು.

ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಸ್ಪಷ್ಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗಿತ್ತು. ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ, ನನ್ನ ಕಡೆ ಇರುವುದು ಸಿಂಥೆಟಿಕ್ ಮಾದರಿಯ ಹುಲಿ ಉಗುರು. ಮದುವೆ ಸಮಯದಲ್ಲಿ ಫೋಟೋ ಶೂಟ್​​ಗಾಗಿ ನಾನು ಹಾಕೊಂಡಿದ್ದು ನಿಜ. ಇದುವರೆಗೂ ಯಾವ ಅಧಿಕಾರಿಗಳು ನನ್ನ ಸಂಪರ್ಕ ಮಾಡಿಲ್ಲ. ಆಕಸ್ಮಾತ್ ಅರಣ್ಯ ಅಧಿಕಾರಿಗಳು ಕೇಳಿದರೆ ನಾನು ಹುಲಿ ಉಗುರು ಕೊಡಲು ಸಿದ್ದ ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಷನ್​ಗಾಗಿ ಹುಲಿ ಉಗುರು, ಇತರೆ ವಸ್ತು ಬಳಕೆ ಸರಿಯಲ್ಲ: ಎಂಎಲ್​ಸಿ ಬಿಕೆ ಹರಿಪ್ರಸಾದ್

ನನಗೆ ನೋಟಿಸ್ ಸರ್ವ್ ಆಗಿಲ್ಲ, ಆಕಸ್ಮಾತ್ ನೋಟಿಸ್ ಕೊಟ್ಟರೆ ನಾನು ತನಿಖೆಗೆ ಸಹಕರಸುತ್ತೇನೆ. ಕಾನೂನು ಬಾಹಿರ ನಡುವಳಿಕೆ ಮಾಡಿಲ್ಲ. ಮದುವೆ ಸಮಯದಲ್ಲಿ ಸಿಂಥೆಟಿಕ್ ಹಾಕಿಕೊಂಡಿದ್ದು ಗೊತ್ತಿದ್ದೋ ಗೊತ್ತಿಲ್ಲದೋ ತಪ್ಪಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahantesh Kurbet
Mahantesh Kurbet
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?