AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಲಕ್ಷ್ಮಣ ಸವದಿ ಪುತ್ರ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ ಆರೋಪ: ಹಿರಿಯ ಮಗ ಹೇಳಿದ್ದಿಷ್ಟು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನೆಲ್ಲೇ ಇದೀಗ ಲಕ್ಷಣ್ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ಶುರುವಾಗಿದೆ. ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್​​ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಕುರಿತಾಗಿ ಮಾತನಾಡಿರುವ ಹಿರಿಯ ಪುತ್ರ ಚಿದಾನಂದ, ನನ್ನ ಸಹೋದರನ ಬಳಿ ಇರೋದು ಪ್ಲಾಸ್ಟಿಕ್ ಉಗುರು ಎಂದಿದ್ದಾರೆ.

ಶಾಸಕ ಲಕ್ಷ್ಮಣ ಸವದಿ ಪುತ್ರ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ ಆರೋಪ: ಹಿರಿಯ ಮಗ ಹೇಳಿದ್ದಿಷ್ಟು
ಕಾಂಗ್ರೆಸ್ ಶಾಸಕ ಲಕ್ಷಣ್ ಸವದಿ, ಹಿರಿಯ ಪುತ್ರ ಚಿದಾನಂದ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Oct 27, 2023 | 3:30 PM

Share

ಬೆಳಗಾವಿ, ಅಕ್ಟೋಬರ್​​​​ 27: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಪುತ್ರ ಸುಮಿತ್​ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ ಆರೋಪ ಕೇಳಿಬಂದಿದೆ. ಸದ್ಯ ಈ ಕುರಿತಾಗಿ ಸವದಿ ಹಿರಿಯ ಪುತ್ರ ಚಿದಾನಂದ ಹೇಳಿಕೆ ನೀಡಿದ್ದು, ನನ್ನ ಸಹೋದರನ ಬಳಿ ಇರೋದು ಪ್ಲಾಸ್ಟಿಕ್ ಉಗುರು. ಮದುವೆ ಸಮಾರಂಭದಲ್ಲಿ ಸುಮಿತ್ ಗೆಳೆಯರು ಉಡುಗೊರೆ ಕೊಟ್ಟಿದ್ದಾರೆ. ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಿಲ್ಲೆಯ ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ, ತನಿಖೆಗೆ ಸಹಕರಿಸುತ್ತೇವೆ. ಈ ಭಾಗದಲ್ಲಿ ಹುಲಿ ಉಗುರೆಂದು ಧರಿಸುವುದು ಒಂದು ರೀತಿ ಶೋಕಿ. ಇದು ಪ್ಲಾಸ್ಟಿಕ್​ನಿಂದ ಮಾಡಿರುವ ಹುಲಿ ಉಗುರಿನ ಆಕೃತಿ ಆಗಿದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನೆಲ್ಲೇ ಇದೀಗ ಲಕ್ಷಣ್ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ಶುರುವಾಗಿದೆ. ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ಇದನ್ನೂ ಓದಿ: ಹುಲಿ ಉಗರು ಪ್ರಕರಣ; ವ್ಯಕ್ತಿಯೊಬ್ಬನಿಂದ ವಶಪಡಿಸಿಕೊಂಡ ಪೆಂಡೆಂಟ್ ಅಸಲಿ ಹುಲಿ ಉಗುರು ಅಂತ ಖಾತ್ರಿಯಾದರೆ ಮಾತ್ರ ಕೂಡಲೇ ಬಂಧಿಸಲಾಗುವುದು: ಅರಣ್ಯಾಧಿಕಾರಿ

ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭ ವೇಳೆ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ ಫೋಟೋ ಇದೀಗ ವೈರಲ್ ಆಗಿದೆ. ಹಾಗಾಗಿ ಲಕ್ಷ್ಮಣ್ ಸವದಿ ನಿವಾಸಕ್ಕೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಬಹುದು.

ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಸ್ಪಷ್ಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗಿತ್ತು. ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ, ನನ್ನ ಕಡೆ ಇರುವುದು ಸಿಂಥೆಟಿಕ್ ಮಾದರಿಯ ಹುಲಿ ಉಗುರು. ಮದುವೆ ಸಮಯದಲ್ಲಿ ಫೋಟೋ ಶೂಟ್​​ಗಾಗಿ ನಾನು ಹಾಕೊಂಡಿದ್ದು ನಿಜ. ಇದುವರೆಗೂ ಯಾವ ಅಧಿಕಾರಿಗಳು ನನ್ನ ಸಂಪರ್ಕ ಮಾಡಿಲ್ಲ. ಆಕಸ್ಮಾತ್ ಅರಣ್ಯ ಅಧಿಕಾರಿಗಳು ಕೇಳಿದರೆ ನಾನು ಹುಲಿ ಉಗುರು ಕೊಡಲು ಸಿದ್ದ ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಷನ್​ಗಾಗಿ ಹುಲಿ ಉಗುರು, ಇತರೆ ವಸ್ತು ಬಳಕೆ ಸರಿಯಲ್ಲ: ಎಂಎಲ್​ಸಿ ಬಿಕೆ ಹರಿಪ್ರಸಾದ್

ನನಗೆ ನೋಟಿಸ್ ಸರ್ವ್ ಆಗಿಲ್ಲ, ಆಕಸ್ಮಾತ್ ನೋಟಿಸ್ ಕೊಟ್ಟರೆ ನಾನು ತನಿಖೆಗೆ ಸಹಕರಸುತ್ತೇನೆ. ಕಾನೂನು ಬಾಹಿರ ನಡುವಳಿಕೆ ಮಾಡಿಲ್ಲ. ಮದುವೆ ಸಮಯದಲ್ಲಿ ಸಿಂಥೆಟಿಕ್ ಹಾಕಿಕೊಂಡಿದ್ದು ಗೊತ್ತಿದ್ದೋ ಗೊತ್ತಿಲ್ಲದೋ ತಪ್ಪಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು