AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ತಾಯಿಯನ್ನು ಕಳೆದುಕೊಂಡ ಶಾಸಕ ಪಿ. ರಾಜೀವ್, ಫೇಸ್​ಬುಕ್​ನಲ್ಲಿ ಮನ ಮಿಡಿಯುವ ಸಂದೇಶ

ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ.

ಕೊರೊನಾಗೆ ತಾಯಿಯನ್ನು ಕಳೆದುಕೊಂಡ ಶಾಸಕ ಪಿ. ರಾಜೀವ್, ಫೇಸ್​ಬುಕ್​ನಲ್ಲಿ ಮನ ಮಿಡಿಯುವ ಸಂದೇಶ
ಕುಡಚ್ಚಿ ಶಾಸಕ ಪಿ.ರಾಜೀವ್ ತನ್ನ ತಾಯಿ ಜೊತೆಗಿನ ಕೊನೆ ಕ್ಷಣ
ಆಯೇಷಾ ಬಾನು
|

Updated on: May 20, 2021 | 12:16 PM

Share

ಬೆಳಗಾವಿ: ಕೊರೊನಾ ಮಹಾಮಾರಿ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಜನರ ದೇಹ ಸೇರಿ ಹಿಂಸಿಸಿ ಬಲಿ ಪಡೆಯುತ್ತಿದೆ. ಇದೇ ಸೋಂಕಿಗೆ ಕುಡಚಿ ಬಿಜೆಪಿ ಶಾಸಕ ಪಿ. ರಾಜೀವ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ರಾಜೀವ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದು ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಸಾಂತ್ವನಕ್ಕೆ ಯಾರೂ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಶಾಸಕ ಪಿ. ರಾಜೀವ್  ಫೇಸ್​ಬುಕ್ ಸಂದೇಶ ಹೀಗಿದೆ: ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕೊರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ.

ತಲೆಯ ಮೇಲೆ ಕೈಹೊತ್ತು ಕುಳಿತ ರಾಜೀವ ನಾನು, ನನ್ನ ಹೆಂಡತಿ, ಎರಡು ಮಕ್ಕಳು, ಇಬ್ಬರು ಆಪ್ತ ಸಹಾಯಕರು ಕರೊನಾದಿಂದ ಚೇತರಿಸಿಕೊಳ್ಳುವಷ್ಟರಲ್ಲಿ ತಾಯಿಯವರು ಸೋಂಕಿಗೆ ಒಳಗಾಗಿದ್ದರಿಂದ ಅವರ ಆರೈಕೆಯಲ್ಲಿ ನಾನೇ ತೊಡಗಿದ್ದರಿಂದ ಮತ್ತು ನನ್ನಕ್ಕ ಹಾಗೂ ಅಕ್ಕನ ಮಗ ಚಿಕಿತ್ಸೆಯನ್ನು ಮನೆಯಲ್ಲಿಯೇ ಪಡೆಯುತ್ತಿರುವುದರಿಂದ ಯಾರಿಗೂ ತಿಳಿಸದೆ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರವನ್ನು ನೆರವೇರಿಸಿರುತ್ತೇನೆ. ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಯಾರೂ ಸಹ ಸಾಂತ್ವನ ಹೇಳುವುದಕ್ಕಾಗಿ ಆಗಮಿಸ ಬಾರದೆಂದು ವಿನಂತಿಸುತ್ತೇನೆ.

ಆದಷ್ಟು ಬೇಗ ನನ್ನ ನನ್ನ ಸಾಮಾಜಿಕ ಕರ್ತವ್ಯಕ್ಕೆ ಹಾಜರಾಗುತ್ತೇನೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ಪಿ.ರಾಜೀವ್.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ