AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ; ಸಚಿವ ಸ್ಥಾನಕ್ಕೆ ಆಗ್ರಹ

ಬಣ ರಾಜಕೀಯದ ಕುರಿತು ಫಡ್ನವಿಸ್​ಗೆ ಜೊತೆ ಮಾತನಾಡಿದ ರಮೇಶ್, ಸಚಿವ ಸ್ಥಾನ ಕೊಡಿಸುವಂತೆ ಫಡ್ನವಿಸ್ಗೆ ಮನವಿ ಮಾಡಿದರು. ನನಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ; ಸಚಿವ ಸ್ಥಾನಕ್ಕೆ ಆಗ್ರಹ
ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ
TV9 Web
| Edited By: sandhya thejappa|

Updated on:Feb 03, 2022 | 2:36 PM

Share

ಬೆಳಗಾವಿ: ಗೋವಾದ ಪಣಜಿಯ ಖಾಸಗಿ ಹೋಟೆಲ್ನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ (Devendra Fadnavis) ಜೊತೆ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ. ರಾಜಕೀಯವಾಗಿ ತಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಸುಖಾಸುಮ್ಮನೆ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ನಾಯಕರ ನಡವಳಿಕೆ ಬೇಸರ ಮೂಡಿಸುತ್ತಿದೆ. ಪಕ್ಷಕ್ಕಾಗಿ ನಾನು ಮಾಡಿದ ತ್ಯಾಗವನ್ನು ಪರಿಗಣಿಸುತ್ತಿಲ್ಲ. ನಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್ ಜೊತೆ ಮಾತುಕತೆ ನಡೆಸಿದ್ದಾರೆ.

ಎಮ್ಎಲ್​ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆಯೂ ರಮೇಶ್ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಜತೆ ಕೆಲ ನಾಯಕರು ಒಪ್ಪಂದ ಮಾಡಿಕೊಂಡಿದ್ದರು. ಈ ಒಳ ಒಪ್ಪಂದದಿಂದ ಬಿಜೆಪಿ ಅಭ್ಯರ್ಥಿಗೆ ಸೋಲಾಗಿದೆ. ಇದನ್ನು ನಮ್ಮ ತಲೆಗೆ ಕಟ್ಟುವಂತಹ ಕೆಲಸ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್​ಗೆ ಮಾಹಿತಿ ನೀಡಿದ್ದಾರೆ.

ಬಣ ರಾಜಕೀಯದ ಕುರಿತು ಫಡ್ನವಿಸ್​ಗೆ ಜೊತೆ ಮಾತನಾಡಿದ ರಮೇಶ್, ಸಚಿವ ಸ್ಥಾನ ಕೊಡಿಸುವಂತೆ ಫಡ್ನವಿಸ್​ಗೆ ಮನವಿ ಮಾಡಿದರು. ನನಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತೇನೆ. ಈ ಬಗ್ಗೆ ಹೈಕಮಾಂಡ್​ಗೆ ನೀವು ಮನವರಿಕೆ ಮಾಡಿಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಪಂಚರಾಜ್ಯ ಚುನಾವಣೆ ನಂತರ ಎಲ್ಲವನ್ನೂ ಸರಿಪಡಿಸುವುದಾಗಿ ಫಡ್ನವಿಸ್ ಭರವಸೆ ನೀಡಿದ್ದಾರೆ.

ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಇಂದು ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠದಿಂದ ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಲಾಗಿದೆ.

ಇದನ್ನೂ ಓದಿ

ಆ ಟೀಕೆಗಳನ್ನು ಅನುಮೋದಿಸುವುದಿಲ್ಲ: ರಾಹುಲ್ ಗಾಂಧಿ ಆರೋಪ ಬಗ್ಗೆ ಯುಎಸ್ ವಕ್ತಾರರ ಪ್ರತಿಕ್ರಿಯೆ 

Axar Patel Covid Positive: ಅಕ್ಷರ್ ಪಟೇಲ್​ಗೆ ಕೊರೊನಾ ದೃಢ: ಟೀಮ್ ಇಂಡಿಯಾದಲ್ಲಿ ಹೆಚ್ಚಿದ ಆತಂಕ

Published On - 2:23 pm, Thu, 3 February 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು