AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ

ಸುದ್ದಿಗೋಷ್ಠಿಯಲ್ಲಿ ಮಹಾನಾಯಕನ ಷಡ್ಯಂತ್ರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಾಖಲೆ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದ್ದರು. ಸದ್ಯ ಬಿಜೆಪಿ ವರಿಷ್ಠರು ಸೂಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ
ರಮೇಶ್ ಜಾರಕಿಹೊಳಿ
TV9 Web
| Edited By: sandhya thejappa|

Updated on:Apr 18, 2022 | 8:38 AM

Share

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santhosh Patil Suicide) ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು (ಏಪ್ರಿಲ್ 18) ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದ್ದರು. ಆದರೆ ತನಿಖಾ ಹಂತದಲ್ಲಿ ಸುದ್ದಿಗೋಷ್ಠಿ ನಡೆಸದಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ಮುಂದೂಡಿದ್ದಾರೆ. ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಮಹಾನಾಯಕನ ಷಡ್ಯಂತ್ರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಾಖಲೆ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದ್ದರು. ಸದ್ಯ ಬಿಜೆಪಿ ವರಿಷ್ಠರು ಸೂಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಜಾರಕಿಹೊಳಿ ಸಿಡಿಸಿದ್ದ ಹೊಸ ಬಾಂಬ್: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದರು.

ನಂತರ ಸೋಮವಾರ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ಹೈಕಮಾಂಡ್ ಅನುಮತಿ ಪಡೆದು ಸುದ್ದಿಗೋಷ್ಠಿ ನಡೆಸುತ್ತೇನೆ. ಸುದ್ದಿಗೋಷ್ಠಿ ನಡೆಸಿ ಷಡ್ಯಂತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವೆ. ಸಿಡಿ ಕೇಸ್, ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಲಿ. ಎರಡೂ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಯಲಿ. ನಾನು ಕಾಂಗ್ರೆಸ್‌ನಲ್ಲಿದ್ದಾಗಲೂ ಸಂತೋಷ್ ನನ್ನ ಜತೆಯಲ್ಲಿದ್ರು ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಮಾಡಿದ್ದರು. ಹೆಸರು ಹೇಳದೇ ‘ಮಹಾನ್‌ ನಾಯಕ’ನೆಂದು ಹೇಳಿ ಆರೋಪ ಮಾಡಿದ್ದರು. ನನ್ನ ಸಿಡಿ ತಯಾರಿಸಿದ ‘ಮಹಾನ್‌ ನಾಯಕ’ನೇ ಇದರಲ್ಲೂ ಭಾಗಿಯಾಗಿದ್ದಾರೆ. ಸಂತೋಷ್ ಕೇಸ್‌ನಲ್ಲೂ ‘ಮಹಾನ್‌ ನಾಯಕ’ ಭಾಗಿಯಾಗಿದ್ದಾರೆ ಎಂದಿದ್ದರು. ಆದರೆ ಆ ಮಹಾನ್ ನಾಯಕ ಯಾರು ಎನ್ನುವುದು ಸುದ್ದಿಗೋಷ್ಠಿ ನಡೆಸಿದ ಬಳಿಕವಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ

ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?

ಕಹಿ ಬೇವು ಸಿಹಿಯಾಗುವ ಪವಾಡಕ್ಕೆ ಸಾಕ್ಷಿಯಾಗಲು ಮುಗಿಬಿದ್ದು ಹೆಜ್ಜೇನು ಹಿಂಡಿನಿಂದ ಕಚ್ಚಿಸಿಕೊಂಡ ಭಕ್ತರು, ಮಹೇಶ್ವರಮ್ಮನ ಜಾತ್ರೆಯಲ್ಲಿ ಘಟನೆ

Published On - 8:34 am, Mon, 18 April 22

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು