AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ

ಸುದ್ದಿಗೋಷ್ಠಿಯಲ್ಲಿ ಮಹಾನಾಯಕನ ಷಡ್ಯಂತ್ರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಾಖಲೆ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದ್ದರು. ಸದ್ಯ ಬಿಜೆಪಿ ವರಿಷ್ಠರು ಸೂಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ
ರಮೇಶ್ ಜಾರಕಿಹೊಳಿ
TV9 Web
| Edited By: |

Updated on:Apr 18, 2022 | 8:38 AM

Share

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santhosh Patil Suicide) ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು (ಏಪ್ರಿಲ್ 18) ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದ್ದರು. ಆದರೆ ತನಿಖಾ ಹಂತದಲ್ಲಿ ಸುದ್ದಿಗೋಷ್ಠಿ ನಡೆಸದಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ಮುಂದೂಡಿದ್ದಾರೆ. ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಮಹಾನಾಯಕನ ಷಡ್ಯಂತ್ರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಾಖಲೆ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದ್ದರು. ಸದ್ಯ ಬಿಜೆಪಿ ವರಿಷ್ಠರು ಸೂಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಜಾರಕಿಹೊಳಿ ಸಿಡಿಸಿದ್ದ ಹೊಸ ಬಾಂಬ್: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದರು.

ನಂತರ ಸೋಮವಾರ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ಹೈಕಮಾಂಡ್ ಅನುಮತಿ ಪಡೆದು ಸುದ್ದಿಗೋಷ್ಠಿ ನಡೆಸುತ್ತೇನೆ. ಸುದ್ದಿಗೋಷ್ಠಿ ನಡೆಸಿ ಷಡ್ಯಂತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವೆ. ಸಿಡಿ ಕೇಸ್, ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಲಿ. ಎರಡೂ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಯಲಿ. ನಾನು ಕಾಂಗ್ರೆಸ್‌ನಲ್ಲಿದ್ದಾಗಲೂ ಸಂತೋಷ್ ನನ್ನ ಜತೆಯಲ್ಲಿದ್ರು ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಮಾಡಿದ್ದರು. ಹೆಸರು ಹೇಳದೇ ‘ಮಹಾನ್‌ ನಾಯಕ’ನೆಂದು ಹೇಳಿ ಆರೋಪ ಮಾಡಿದ್ದರು. ನನ್ನ ಸಿಡಿ ತಯಾರಿಸಿದ ‘ಮಹಾನ್‌ ನಾಯಕ’ನೇ ಇದರಲ್ಲೂ ಭಾಗಿಯಾಗಿದ್ದಾರೆ. ಸಂತೋಷ್ ಕೇಸ್‌ನಲ್ಲೂ ‘ಮಹಾನ್‌ ನಾಯಕ’ ಭಾಗಿಯಾಗಿದ್ದಾರೆ ಎಂದಿದ್ದರು. ಆದರೆ ಆ ಮಹಾನ್ ನಾಯಕ ಯಾರು ಎನ್ನುವುದು ಸುದ್ದಿಗೋಷ್ಠಿ ನಡೆಸಿದ ಬಳಿಕವಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ

ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?

ಕಹಿ ಬೇವು ಸಿಹಿಯಾಗುವ ಪವಾಡಕ್ಕೆ ಸಾಕ್ಷಿಯಾಗಲು ಮುಗಿಬಿದ್ದು ಹೆಜ್ಜೇನು ಹಿಂಡಿನಿಂದ ಕಚ್ಚಿಸಿಕೊಂಡ ಭಕ್ತರು, ಮಹೇಶ್ವರಮ್ಮನ ಜಾತ್ರೆಯಲ್ಲಿ ಘಟನೆ

Published On - 8:34 am, Mon, 18 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?