AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ವಿಳಂಬದಿಂದ ಹಲವು ಜಿಲ್ಲೆಗಳಲ್ಲಿ ಸಂಕಷ್ಟ: ಮೋಡ ಬಿತ್ತನೆಗೆ ಕಾದು ನೋಡುವ ತಂತ್ರ

ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ. ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಿದ್ದಾರೆ.

ಮುಂಗಾರು ವಿಳಂಬದಿಂದ ಹಲವು ಜಿಲ್ಲೆಗಳಲ್ಲಿ ಸಂಕಷ್ಟ: ಮೋಡ ಬಿತ್ತನೆಗೆ ಕಾದು ನೋಡುವ ತಂತ್ರ
ಕೃಷಿ ಸಚಿವ ಎನ್ ಚಲುವರಾಯಸ್ವಾಮಿ
Rakesh Nayak Manchi
Rakesh Nayak Manchi|

Updated on: Jun 12, 2023 | 10:04 PM

Share

ಬೆಳಗಾವಿ: ಮುಂಗಾರು (Monsoon Rain) ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದ್ದು, ಮೋಡ ಬಿತ್ತನೆಗೆ (Cloud seeding) ಜೂನ್ 15ರ ವರೆಗೆ ಕಾದುನೋಡುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಈ ಬಗ್ಗೆ ಬೆಳಗಾವಿಯಲ್ಲಿ (Belagavi) ಮಾತನಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Chaluvarayaswamy), ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಮಳೆಯಾಗದ ಹಿನ್ನೆಲೆ ಬೆಳಗಾವಿ ತಾಲೂಕಿನಲ್ಲಿ ಭತ್ತ ಬಿತ್ತನೆ‌ ಮಾಡಿದ ರೈತರಿಗೆ ಸಂಕಷ್ಟ ಎದುರಾಗಿದೆ. ಒಂದು ವೇಳೆ ಮಳೆಯಾಗದಿದ್ದರೆ ಅವರ ಸಹಾಯಕ್ಕೆ ಸರ್ಕಾರ ಬರುತ್ತದೆಯೇ ಎಂದು ಸುದ್ದಿಗಾರರು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ನೋಡೋಣ ನಾನು ಬೆಂಗಳೂರು ತಲುಪುವುದರೊಳಗೆ ಮಳೆ ಬರುತ್ತದೆ ಅಂತ ಅಂದುಕೊಂಡಿದ್ದೇನೆ, ವಿಶ್ವಾಸ ಇಡೋಣ ಅಂತ ಹೇಳಿದ್ದಾರೆ.

ಇದನ್ನೂ ಓದಿ: ಕೈ ಕೊಟ್ಟ ಮುಂಗಾರು; ಆಕಾಶದತ್ತ ರೈತರ ಚಿತ್ತ, ಉತ್ತಮ ಮಳೆಯಾಗದಿದ್ದರೆ ಕೃಷಿ ಚಟುವಟಿಕೆ ಕಷ್ಟ

ಎಫ್​ಆರ್​​ಪಿ ದರ ಕೇಂದ್ರದಿಂದಲೇ‌ ಜಾರಿ ಆಗುತ್ತಿದೆ. ನಾವೇನೆನೋ ಚಿಂತನೆ ಮಾಡುತ್ತೇವೆ, ಇದಕ್ಕೆ ಸ್ವಲ್ಪ ಸಮಯ ಕೊಡಬೇಕು. ಕಾಲಾವಕಾಶ ತಗೆದುಕೊಂಡು ಎಲ್ಲವನ್ನೂ ಸರಿ ಮಾಡುತ್ತೇವೆ ಎಂದರು. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರೈತವಿರೋಧಿ ಮೂರು ಕಾಯ್ದೆಗಳ ಕುರಿತು ಚರ್ಚಿಸಿ ಪರಿಶೀಲನೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ನಿಗದಿತ ಸಮಯಕ್ಕಿಂತ ಬೇಗ ಕಬ್ಬು ‌ಕಟಾವು ಮಾಡಲು ಮುಂದಾಗಿದ್ದಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಇಲ್ಲೂ ಸಹ ಕಮೀಟಿ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಸಕ್ಕರೆ ಸಚಿವರ ನೇತೃತ್ವದಲ್ಲಿ ಕಮೀಟಿ ಇದೆ. ರೈತರು ಸ್ವಯಂಪ್ರೇರಿತವಾಗಿ ಕಬ್ಬು ಕಟಾವಿಗೆ ಬೇಗ ಹೋಗುತ್ತಾರೆ. ಕಾರ್ಖಾನೆಯವರು ಸಫಿಷಿಯಂಟ್ ಕಬ್ಬು ಸಿಗದಿದ್ದಾಗ ಈ ರೀತಿ ಅನ್ಯಾಯ ಆಗುತ್ತದೆ, ಅದರ ಬಗ್ಗೆ ವಿಚಾರಣೆ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!