AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು

ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ನದಿಯ ಪ್ರವಾಹಕ್ಕೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು
ಜಲಾವೃತವಾದ ಸೇತುವೆ
TV9 Web
| Edited By: |

Updated on:Jul 26, 2021 | 10:29 AM

Share

ಬೆಳಗಾವಿ: ಕೃಷ್ಣಾ ನದಿ (Krishna River) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ನೀರು ನುಗ್ಗಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಜಿಲ್ಲೆಯ ರಾಯಬಾಗ ತಾಲೂಕಿನ ಮೊಳವಾಡ ಮತ್ತು ಕುಸಲಾಳ ಸೇರಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಊರು ಮುಳುಗಡೆಯಾದ ಹಿನ್ನೆಲೆ ಪಿಕ್ಅಪ್ ವಾಹನ ಜಾನುವಾರುಗಳನ್ನು ಹೊತ್ತು ತರುತ್ತಿತ್ತು. ಈ ವೇಳೆ ನೀರಿನ ರಭಸಕ್ಕೆ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಎರಡು ಎಮ್ಮೆ ಒಂದು ಎತ್ತು ವಾಹನದಲ್ಲೇ ಒದ್ದಾಡಿ ಜೀವ ಬಿಟ್ಟಿವೆ. ಸ್ಥಳೀಯರು ಜೆಸಿಬಿಯಿಂದ ವಾಹನವನ್ನು ಹೊರತೆಗೆದಿದ್ದಾರೆ. ಆದರೆ ಮೃತಪಟ್ಟ ಜಾನುವಾರುಗಳು ಕೃಷ್ಣಾ ನದಿಯಲ್ಲಿ ತೇಲಿ ಹೋಗಿವೆ.

ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ನದಿಯ ಪ್ರವಾಹಕ್ಕೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ಸೇತುವೆ ಮುಳುಗಡೆಯಿಂದ ಮಹಾರಾಷ್ಟ್ರದ ಜತ್ತ, ಜಾಂಬೋಟಿ ಸಂಪರ್ಕ ಕೂಡ ಕಟ್ ಆಗಿದೆ. ನದಿಯ ಹೊರ ಹರಿವು 4 ಲಕ್ಷದ 10 ಸಾವಿರ ಕ್ಯೂಸೆಕ್ ಇದೆ.

ಹಿರಣ್ಯಕೇಶಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಹಿರಣ್ಯಕೇಶಿ ನದಿ ನೀರು ನುಗ್ಗಿ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮ ಮುಳುಗಡೆಯಾಗಿದೆ. ಕಾಳಜಿ ಕೇಂದ್ರಕ್ಕೆ ಬಡಕುಂದ್ರಿ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಾಗಿದೆ. ಗ್ರಾಮದಲ್ಲಿರುವ ಎಲ್ಲಾ ಮನೆಗಳು ಮುಳುಗಡೆಯಾದ ಹಿನ್ನೆಲೆ ರಾತ್ರೋರಾತ್ರಿ ಊರು ಬಿಟ್ಟು ಗ್ರಾಮಸ್ಥರು ಕಾಳಜಿ ಕೇಂದ್ರಕ್ಕೆ ಹೋಗಿದ್ದಾರೆ. ಗ್ರಾಮದಲ್ಲಿರುವ ಪ್ರಸಿದ್ಧ ಹೊಳೆಮ್ಮಾ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.

ರೋಗಿಗಳ ರಕ್ಷಣೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಕೃಷ್ಣಾ ನದಿಯ ನೀರು ನುಗ್ಗಿದೆ. ಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯ ಯುವಕರು‌ ರೋಗಿಗಳನ್ನ ಹೆಗಲ ಮೇಲೆ ಹೊತ್ತು ತಂದು ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಇದನ್ನೂ ಓದಿ

Karnataka Dams Water Level: ಮಳೆನಾಡು ಕರ್ನಾಟಕ, ಶೇ 20ರಷ್ಟು ಅಧಿಕ ಮಳೆ, 12 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಬಿಳಿ ನೊರೆಯ ಹಾಲಿನಂತೆ ಧುಮ್ಮಿಕ್ಕುತ್ತಿದ್ದಾಳೆ ಕಾವೇರಿ, ಪ್ರವಾಸಿಗರನ್ನು ಮೋಡಿ ಮಾಡುತ್ತಿದೆ ಭರಚುಕ್ಕಿ

(More than 30 villages have been inundated by water from the Krishna River at Belagavi)

Published On - 8:40 am, Mon, 26 July 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್