AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು

ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ನದಿಯ ಪ್ರವಾಹಕ್ಕೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು
ಜಲಾವೃತವಾದ ಸೇತುವೆ
TV9 Web
| Edited By: sandhya thejappa|

Updated on:Jul 26, 2021 | 10:29 AM

Share

ಬೆಳಗಾವಿ: ಕೃಷ್ಣಾ ನದಿ (Krishna River) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ನೀರು ನುಗ್ಗಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಜಿಲ್ಲೆಯ ರಾಯಬಾಗ ತಾಲೂಕಿನ ಮೊಳವಾಡ ಮತ್ತು ಕುಸಲಾಳ ಸೇರಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಊರು ಮುಳುಗಡೆಯಾದ ಹಿನ್ನೆಲೆ ಪಿಕ್ಅಪ್ ವಾಹನ ಜಾನುವಾರುಗಳನ್ನು ಹೊತ್ತು ತರುತ್ತಿತ್ತು. ಈ ವೇಳೆ ನೀರಿನ ರಭಸಕ್ಕೆ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಎರಡು ಎಮ್ಮೆ ಒಂದು ಎತ್ತು ವಾಹನದಲ್ಲೇ ಒದ್ದಾಡಿ ಜೀವ ಬಿಟ್ಟಿವೆ. ಸ್ಥಳೀಯರು ಜೆಸಿಬಿಯಿಂದ ವಾಹನವನ್ನು ಹೊರತೆಗೆದಿದ್ದಾರೆ. ಆದರೆ ಮೃತಪಟ್ಟ ಜಾನುವಾರುಗಳು ಕೃಷ್ಣಾ ನದಿಯಲ್ಲಿ ತೇಲಿ ಹೋಗಿವೆ.

ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ನದಿಯ ಪ್ರವಾಹಕ್ಕೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ಸೇತುವೆ ಮುಳುಗಡೆಯಿಂದ ಮಹಾರಾಷ್ಟ್ರದ ಜತ್ತ, ಜಾಂಬೋಟಿ ಸಂಪರ್ಕ ಕೂಡ ಕಟ್ ಆಗಿದೆ. ನದಿಯ ಹೊರ ಹರಿವು 4 ಲಕ್ಷದ 10 ಸಾವಿರ ಕ್ಯೂಸೆಕ್ ಇದೆ.

ಹಿರಣ್ಯಕೇಶಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಹಿರಣ್ಯಕೇಶಿ ನದಿ ನೀರು ನುಗ್ಗಿ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮ ಮುಳುಗಡೆಯಾಗಿದೆ. ಕಾಳಜಿ ಕೇಂದ್ರಕ್ಕೆ ಬಡಕುಂದ್ರಿ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಾಗಿದೆ. ಗ್ರಾಮದಲ್ಲಿರುವ ಎಲ್ಲಾ ಮನೆಗಳು ಮುಳುಗಡೆಯಾದ ಹಿನ್ನೆಲೆ ರಾತ್ರೋರಾತ್ರಿ ಊರು ಬಿಟ್ಟು ಗ್ರಾಮಸ್ಥರು ಕಾಳಜಿ ಕೇಂದ್ರಕ್ಕೆ ಹೋಗಿದ್ದಾರೆ. ಗ್ರಾಮದಲ್ಲಿರುವ ಪ್ರಸಿದ್ಧ ಹೊಳೆಮ್ಮಾ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.

ರೋಗಿಗಳ ರಕ್ಷಣೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಕೃಷ್ಣಾ ನದಿಯ ನೀರು ನುಗ್ಗಿದೆ. ಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯ ಯುವಕರು‌ ರೋಗಿಗಳನ್ನ ಹೆಗಲ ಮೇಲೆ ಹೊತ್ತು ತಂದು ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಇದನ್ನೂ ಓದಿ

Karnataka Dams Water Level: ಮಳೆನಾಡು ಕರ್ನಾಟಕ, ಶೇ 20ರಷ್ಟು ಅಧಿಕ ಮಳೆ, 12 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಬಿಳಿ ನೊರೆಯ ಹಾಲಿನಂತೆ ಧುಮ್ಮಿಕ್ಕುತ್ತಿದ್ದಾಳೆ ಕಾವೇರಿ, ಪ್ರವಾಸಿಗರನ್ನು ಮೋಡಿ ಮಾಡುತ್ತಿದೆ ಭರಚುಕ್ಕಿ

(More than 30 villages have been inundated by water from the Krishna River at Belagavi)

Published On - 8:40 am, Mon, 26 July 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು