AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಪ್ರಸಾದ ಸೇವಿಸಿ 46 ಜನ ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on:May 22, 2024 | 6:55 AM

Share

ಬೆಳಗಾವಿ, ಮೇ.22: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ (Prasadam) ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ತವ್ಯಸ್ಥಗೊಂಡವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ (Belagavi) ಜಿಲ್ಲಾಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗ್ರಾಮದಲ್ಲಿನ ಪರಿಸ್ಥಿತಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಾಲೂಕು ವೈದ್ಯರು ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ಶಾಸಕ ವಿಶ್ವಾಸ್ ವೈದ್ಯ ಆಸ್ಪತ್ರೆಗೆ ದೌಡಾಯಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಯಾರು ಇಲ್ಲದಿದ್ದಾಗ ಅಣ್ಣ-ತಂಗಿ ಲೈಂಗಿಕ ಕ್ರಿಯೆ: ಗರ್ಭಿಣಿಯಾದ ಸಹೋದರಿ!

ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಪಾಕ್ ನಾಣ್ಯ

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಪಾಕಿಸ್ತಾನದ ನಾಣ್ಯ ಪತ್ತೆಯಾಗಿದೆ. ನಿನ್ನೆ ಕೊಪ್ಪಳದ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ನಿನ್ನೆ ಹುಂಡಿ ಎಣಿಕೆ ಕಾರ್ಯ ನಡೆಯಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ನಾಣ್ಯ ಸಂಗ್ರಹವಾಗಿದೆ. ಇದ್ರ ಜೊತೆಗೆ ಅಮೆರಿಕ ಸೇರಿ ಐದು ವಿದೇಶಿ ನಾಣ್ಯಗಳು ಹುಂಡಿಯಲ್ಲಿ ಸಂಗ್ರಹವಾಗಿವೆ. ಕಳೆದ 2ತಿಂಗಳಲ್ಲಿ ಹುಂಡಿಯಲ್ಲಿ 30 ಲಕ್ಷದ 21 ಸಾವಿರದ 252 ರೂಪಾಯಿ ಸಂಗ್ರಹವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:51 am, Wed, 22 May 24

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ