AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ವರ್ಷದಲ್ಲಿ ಮಥುರಾ, ಕಾಶಿ ದೇಗುಲದ ಪಕ್ಕದಲ್ಲಿರುವ ಮಸೀದಿ ಧ್ವಂಸವಾಗುತ್ತದೆ: ಕೆಎಸ್ ಈಶ್ವರಪ್ಪ

ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿತ್ತು. ಈಗ ಅದನ್ನು ಕೆಡವಿ ರಾಮ ಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಮಥರಾ ಹಾಗೂ ಕಾಶಿ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಧ್ವಂಸಗೊಳ್ಳುತ್ತದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ವಿಶ್ವದಲ್ಲಿ ಮುಸ್ಲಿಮರಿಗೆ ತಾಕತ್ತಿದ್ದರೆ ದೇಗುಲ ಕೆಡವಿ ಮಸೀದಿ ಕಟ್ಟಲಿ ನೋಡೋಣ ಎಂದು ಸವಾಲು ಹಾಕಿದರು.

ಇನ್ನೊಂದು ವರ್ಷದಲ್ಲಿ ಮಥುರಾ, ಕಾಶಿ ದೇಗುಲದ ಪಕ್ಕದಲ್ಲಿರುವ ಮಸೀದಿ ಧ್ವಂಸವಾಗುತ್ತದೆ: ಕೆಎಸ್ ಈಶ್ವರಪ್ಪ
ಬೆಳಗಾವಿಯ ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಕೆಎಸ್ ಈಶ್ವರಪ್ಪ
TV9 Web
| Edited By: Rakesh Nayak Manchi|

Updated on: Jan 07, 2024 | 8:26 PM

Share

ಬೆಳಗಾವಿ, ಜ.7: ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಿ ಬಾಬರ್ ಮಸೀದಿ ಅಂತಾನೆ. ಸದ್ಯ ವಿಶ್ವದಲ್ಲಿ ಮುಸ್ಲಿಮರಿಗೆ ತಾಕತ್ತಿದ್ದರೆ ದೇಗುಲ ಕೆಡವಿ ಮಸೀದಿ ಕಟ್ಟಲಿ ನೋಡೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eeshwarappa) ಸವಾಲು ಹಾಕಿದ್ದಾರೆ. ಅಲ್ಲದೆ, ನಾನು ಯಾಕೆ ಹೀಗೆ ಹೇಳುತ್ತಿದ್ದೇನೆ ಎಂದರೆ, ಅಂದು ಹಿಂದೂ ಸಂಘಟನೆಗಳು ಇರಲಿಲ್ಲ. ಆದರೆ ಈಗ ಅಂದಿನ ಸ್ಥಿತಿ ಇಲ್ಲ. ಇನ್ನೊಂದು ವರ್ಷದಲ್ಲಿ ಮಥರಾ ಹಾಗೂ ಕಾಶಿ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಧ್ವಂಸಗೊಳ್ಳುತ್ತದೆ ಎಂದಿದ್ದಾರೆ.

ಬೆಳಗಾವಿಯ ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಮಾಡಿದ ಅವರು, ಅರ್ಧ ವಿಶ್ವನಾಥನ ದೇವಸ್ಥಾನ, ಇನ್ನು ಅರ್ಧ ಭಾಗದಲ್ಲಿ ಮಸೀದಿ ಹೇಗೆ ನಿರ್ಮಾಣವಾಯಿತು? ಮಂದಿರದಲ್ಲಿ ಹಿಂದೂಗಳ ಜೀವವಿದೆ ಎಂದು ಮುಸ್ಲಿಂ ದೊರೆಗಳಿಗೆ ಗೊತ್ತಿತ್ತು. ಮಂದಿರ ಹೊಡೆದಾಕಿದರೆ ಭಾರತ ನಮ್ಮದಾಗುತ್ತೆಂದು ಮುಸ್ಲಿಂ ದೊರೆಗಳು ಭಾವಿಸಿದ್ದರು. ಹಾಗಾಗಿಯೇ ಕಾಶಿ ವಿಶ್ವನಾಥ, ಶ್ರೀಕೃಷ್ಣನ ದೇವಸ್ಥಾನ ಹೊಡೆದು ಹಾಕಿದರು ಎಂದರು.

ಇದನ್ನೂ ಓದಿ: ದತ್ತಪೀಠ ಹೋರಾಟಗಾರರು, ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಮುಸ್ಲಿಂ ಭಯೋತ್ಪಾದಕರನ್ನ ರಕ್ಷಿಸಲಾಗುತ್ತಿದೆ-ಪ್ರಮೋದ್ ಮುತಾಲಿಕ್

ರಾಮ ಮಂದಿರವಲ್ಲೇ ಕಟ್ಟುತ್ತೇವೆ ಎಂದು ಹೇಳುತ್ತಿದ್ದೆವು. ಅದರಂತೆ ಅಯೋಧ್ಯೆಯಲ್ಲಿ ಇಂದು ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ಇನ್ನೆರಡು ದೇವಸ್ಥಾನಕ್ಕೆ ಕೋರ್ಟ್ ಆದೇಶಿಸಿದೆ. ಇನ್ನೊಂದು ವರ್ಷದಲ್ಲಿ ಮಥುರಾ, ಕಾಶಿ ದೇಗುಲದ ಪಕ್ಕದಲ್ಲಿರುವ ಮಸೀದಿ ಧ್ವಂಸವಾಗುತ್ತದೆ. ಆ ಜಾಗದಲ್ಲಿ ದೇವಸ್ಥಾನ ಪೂರ್ಣವಾಗುತ್ತದೆ, ಯಾವುದೇ ಅನುಮಾನ ಬೇಡ ಎಂದರು.

ಹಿಂದೂ, ಮುಸ್ಲಿಂ ಅಣ್ಣತಮ್ಮರ ರೀತಿಯಲ್ಲಿ ಇರಬೇಕು ಎಂಬುದು ನಮ್ಮ ಆಸೆ. ಹೀಗಾಗಿ ಎಲ್ಲೆಲ್ಲಿ ದೇವಸ್ಥಾನ ಕೆಡವಿ ಮಸೀದಿ ಕಟ್ಟಿದ್ದೀರೋ ಅದನ್ನು ಕಿತ್ತು ಬಿಸಾಕಿ. ಇಲ್ಲವಾದರೆ ರಾಮಭಕ್ತರೆಲ್ಲರೂ ನಿಮ್ಮೆಲ್ಲಾ ಮಸೀದಿಗಳನ್ನು ಕಿತ್ತುಹಾಕುತ್ತಾರೆ. ಅಲ್ಲಿ ಮಂದಿರ ಕಟ್ಟೇ ಕಟ್ಟುತ್ತೇವೆ ಎಂದು ದೇಶದಲ್ಲಿ ಇರುವ ಮುಸಲ್ಮಾನರಿಗೆ ಹೇಳಲು ಇಷ್ಟ ಪಡುತ್ತೇನೆ ಎಂದರು.

ವರದಿ: ಪ್ರತಾಪ್, ಟಿವಿ9 ಬೆಳಗಾವಿ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ