AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದ ಮಗನಿಗೆ ಮೆದುಳು ಜ್ವರ! ದಿಕ್ಕು ತೋಚದೆ ತನ್ನ ಮಗನನ್ನು ದೇವರ ಮುಂದೆ ಮಲಗಿಸಿ ಕಣ್ಣೀರಾಕಿದ ತಾಯಿ

ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ (Holy Cross) ಬಳಿ ತನ್ನ ಮಗನನ್ನು ಮಲಗಿಸಿ ಮಗನನ್ನು ಕಾಪಾಡು ಎಂದು ತಾಯಿ ಪ್ರಾರ್ಥಿಸಿದ್ದಾಳೆ.

7 ವರ್ಷದ ಮಗನಿಗೆ ಮೆದುಳು ಜ್ವರ! ದಿಕ್ಕು ತೋಚದೆ ತನ್ನ ಮಗನನ್ನು ದೇವರ ಮುಂದೆ ಮಲಗಿಸಿ ಕಣ್ಣೀರಾಕಿದ ತಾಯಿ
ದೇವರ ಮುಂದೆ ಮಗನನ್ನು ಮಲಗಿಸಿದ್ದಾರೆ
TV9 Web
| Edited By: sandhya thejappa|

Updated on:Jun 22, 2022 | 9:14 AM

Share

ಬೆಳಗಾವಿ: ಇಡೀ ಬದುಕನ್ನೇ ತನ್ನ ಮಗುವಿಗಾಗಿ ಮೀಸಲಿಡುವ ಕಣ್ಣಿಗೆ ಕಾಣುವ ದೇವರು ಅಂದರೆ ಅದು ತಾಯಿ (Mother). ಜನ್ಮ ನೀಡಿದ ದಿನದಿಂದ ಮಗುವಿನ (Baby) ಬಗ್ಗೆ ಕನಸು ಕಾಣುತ್ತಾಳೆ. ಕಷ್ಟ – ಸುಖನೋ ಚೆನ್ನಾಗಿ ಓದಿಸಬೇಕು ಅಂತ ಪರದಾಡುತ್ತಾಳೆ. ಹೀಗೆ ಮಕ್ಕಳ ಏಳಿಗೆಗಾಗಿ ಸದಾ ಶ್ರಮಿಸುವ ಜಗನ್ಮಾತೆ ತನ್ನ ಕಂದನ ಜೀವಕ್ಕೆ ಏನಾದರೂ ತೊಂದರೆಯಾದರೆ ಅಕ್ಷರಶಃ ಕೊರಗುತ್ತಾಳೆ. ಮಗುವನ್ನು ಉಳಿಸಿಕೊಳ್ಳಲು ಇಲ್ಲಸಲ್ಲದ ಕಷ್ಟಗಳನ್ನ ಎದುರಿಸುತ್ತಾಳೆ. ಯಾವುದು ಪ್ರಯೋಜನಕ್ಕೆ ಬಾರದಿದ್ದಾಗ ದೇವರೇ ನೀನು ಕಾಪಾಡು ಅಂತ ಕಣ್ಣೀರು ಹಾಕುತ್ತಾಳೆ. ಹೀಗೆ ಜಿಲ್ಲೆಯಲ್ಲಿ ತಾಯಿಯೊಬ್ಬರು ತನ್ನ ಮಗನನ್ನು ಉಳಿಸಿಕೊಳ್ಳಲು ದೇವರ ಮೊರೆ ಹೋಗಿರುವ ಘಟನೆ ನಡೆದಿದೆ.

ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ (Holy Cross) ಬಳಿ ತನ್ನ ಮಗನನ್ನು ಮಲಗಿಸಿ ಮಗನನ್ನು ಕಾಪಾಡು ಎಂದು ತಾಯಿ ಪ್ರಾರ್ಥಿಸಿದ್ದಾಳೆ. ಕಳೆದ ಕೆಲ ತಿಂಗಳಿಂದ ಏಳು ವರ್ಷದ ಶೈಲೇಶ್ ಎಂಬ ಬಾಲಕ ಮೆದುಳು ಜ್ವರದಿಂದ ಬಳಲುತ್ತಿದ್ದಾನೆ. ಎರಡು ತಿಂಗಳು ಕಳೆದರೂ ಗುಣಮುಖನಾಗಿಲ್ಲ. ಹೀಗಾಗಿ ದಿಕ್ಕೇ ತೋಚದ ತಾಯಿ ದೇವರ ಮುಂದೆ ನಿಂತು ಕಣ್ಣೀರು ಹಾಕಿದ್ದಾಳೆ.

ಇದನ್ನೂ ಓದಿ: ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?

ಇದನ್ನೂ ಓದಿ
Image
Presidential Elections 2022: ರಾಷ್ಟ್ರಪತಿ ಚುನಾವಣೆ; ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಜೂ. 27ಕ್ಕೆ ನಾಮಪತ್ರ ಸಲ್ಲಿಕೆ
Image
ಬಳ್ಳಾರಿ: ನಾನು ಮನಸ್ಸು ಮಾಡಿದ್ರೆ ಮುಂದೊಂದು ದಿನ ಸಿಎಂ ಆಗುತ್ತೇನೆ: ಮಾಜಿ ಸಚಿವ ಜನಾರ್ದನ ರೆಡ್ಡಿ
Image
Draupadi Murmu: ಒಡಿಶಾದ ದೇಗುಲದಲ್ಲಿ ಕಸ ಗುಡಿಸಿ, ಪೂಜೆ ಸಲ್ಲಿಸಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
Image
ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?

ಶೈಲೇಶ್ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ದಂಪತಿ ಪುತ್ರ. ಕೃಷ್ಣಾ, ಸುತ್ರಾವಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಏಳು ವರ್ಷದ ಮಗನಿಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಸುಸ್ತಾಗಿದ್ದಾರೆ. ಸುಮಾರು ಎರಡು ತಿಂಗಳು ಕಳೆದರೂ ಶೈಲೇಶ್ ಗುಣಮುಖನಾಗಿಲ್ಲ. ಹೀಗಾಗಿ ಮನೆಗೆ ಕರೆದೊಯ್ಯಲು ವೈದ್ಯರು ತಿಳಿಸಿದ್ದಾರೆ. ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ವೈದ್ಯರು ಹೇಳಿದ್ದಾರಂತೆ.

ಕುಟುಂಬಸ್ಥರು ಆರು ದಿನ ಮನೆಯಲ್ಲಿ ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಈ ವೇಳೆ ಶಿಲುಬೆ ಎದುರು ಮಗುವನ್ನು ಮಲಗಿಸಿ ಮಗನನ್ನು ಬದುಕಿಸಿಕೊಡುವಂತೆ ಕುಟುಂಬಸ್ಥರು ಪ್ರಾರ್ಥಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:10 am, Wed, 22 June 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ