AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Sep 12, 2023 | 9:20 AM

Share

ಬೆಳಗಾವಿ ಸೆ.12: ಚೆನ್ನಮ್ಮನ ನಾಡು ಬೆಳಗಾವಿ (Belagavi) ಮಹಾನಗರದಲ್ಲಿ ಪಾರ್ಕಿಂಗ್​ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ನಗರದಲ್ಲಿನ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್ (Multi level Car Parking) ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಬೆಳಗಾವಿ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಟ್ (Asif Raju Sait) ಅವರು ಶಂಕು ಸ್ಥಾಪನೆ ನೆರವೇರಿಸಿದರು.

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ. ಬಾಪಟ್​​ ಗಲ್ಲಿಯಲ್ಲಿ ಈ ಹಿಂದೆ ಹಲವು ಬಾರಿ ಮಲ್ಟಿ ಲೇವಲ್​ ಪಾರ್ಕಿಂಗ್​ ಕಟ್ಟಡ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದೆ.

ಇದನ್ನೂ ಓದಿ: IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ

6.5 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಕಟ್ಟಡವನ್ನು ಪಿಪಿಪಿ ಮತ್ತು ಬಿವಿಜಿ ಕಂಪನಿಯ ಸಹಭಾಗಿತ್ವದಲ್ಲಿ ಈ ಕಟ್ಟಡ ನಿರ್ಮಿಸಲಾಗುತ್ತಿದೆ. ಒಂದು ಅಂತಸ್ತಿನಲ್ಲಿ 30 ಕಾರುಗಳನ್ನು ಪಾರ್ಕ್ ಮಾಡಬಹುದಾಗಿದೆ. ಐದು ಅಂತಸ್ತುಗಳಲ್ಲಿ ಒಟ್ಟು 120 ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. 2006 ರಲ್ಲಿ ರಾಜ್ಯ ಸರ್ಕಾರದ ನೂರು ಕೋಟಿ ರೂ. ವಿಶೇಷ ಅನುದಾನದಲ್ಲಿ ಇದನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿತ್ತು. ಆದರೆ ಜಿಎಸ್​ಟಿ ಜಾರಿಯಾಗಿದ್ದರಿಂದ ಗುತ್ತಿಗೆದಾರ ಕಾಮಗಾರಿ ಆರಂಭಿಸಲು ಹಿಂದೇಟು ಹಾಕಿದ್ದನು ಹೀಗಾಗಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ