AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ, ಅಚ್ಚರಿ ಎನ್ನಿಸಿದರೂ ಸತ್ಯ

ಸಾಮಾನ್ಯವಾಗಿ ಫ್ಯಾನ್, ಮರ, ಕಿಟಕಿ, ಮನೆಯ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನ ನೋಡಿದ್ದೇವೇ. ಕೇಳಿದ್ದೇವೆ ಕೂಡ. ಆದ್ರೆ, ಇಲ್ಲೊಂದು ಜೋಡಿ ಮೂರು ಗಾಲಿ ಆಟೋದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಅರೇ ಇದೇನಿದು ಸಣ್ಣ ಆಟೋದಲ್ಲಿ ಅದ್ಹೇಗೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯ ಎಂದು ಅಚ್ಚರಿ ಎನ್ನಿಸಿದರೂ ಸತ್ಯ.

ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ, ಅಚ್ಚರಿ ಎನ್ನಿಸಿದರೂ ಸತ್ಯ
ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26)
ಸಹದೇವ್​ ಮಾನೆ
| Edited By: |

Updated on:Jul 01, 2025 | 2:58 PM

Share

ಬೆಳಗಾವಿ, (ಜುಲೈ 01): ಪ್ರೇಮಿಗಳು (Lovers) ಆಟೋದಲ್ಲೇ (Auto Rickshaw ) ನೇಣುಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಗಳಾದ ಇವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, 15 ದಿನದ ಹಿಂದೆಯಷ್ಟೇ ಮೃತ ರಂಜೀತಾಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಿತಾರ್ಥವಾಗಿತ್ತು. ಇದರಿಂದ ರಾಘವೇಂದ್ರ ಹಾಗೂ ರಂಜೀತಾ ಇಂದು (ಜುಲೈ 01) ಆಟೋದಲ್ಲಿ ಒಟ್ಟಿಗೆ ನೇಣಿಗೆ ಶರಣಾಗಿದ್ದಾರೆ.

ಮುನವಳ್ಳಿ ಪಟ್ಟಣದ ರಾಘವೇಂದ್ರ, ರಂಜೀತಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಮದುವೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದರು. ಆದರೆ, ಮನೆಯಲ್ಲಿ ರಂಜೀತಾ 15 ದಿನಗಳ ಹಿಂದೆ ಅಷ್ಟೇ ಬೇರೊಬ್ಬ ಹುಡುಗನ ಜೊತೆ ಮದುವೆ ನಿಶ್ಚಿತಾರ್ಥ ಮಾಡಿ ಮುಗಿಸಿದ್ದಾರೆ. ಇದರಿಂದ ಮನನೊಂದ ರಂಜೀತ, ಈ ವಿಚಾರವನ್ನು ಆಟೋ ಓಡಿಸಿಕೊಂಡಿದ್ದ ಪ್ರಿಯಕರ ರಾಘವೇಂದ್ರಗೆ ತಿಳಿಸಿದ್ದಾಳೆ.

ಇದನ್ನೂ ಓದಿ: ಅಣ್ಣನ ಕೊಂದು ನಾಟಕವಾಡಿದ್ದ ತಮ್ಮ: ಮಾಲೀಕನ ಕೊಲೆ ಸುಳಿವು ಕೊಟ್ಟ ನಾಯಿ, ಕುರಿಗಳು

ಇದರಿಂದ ಮನನೊಂದು ಇಬ್ಬರು ಒಟ್ಟಿಗೆ ಸಾಯಲು ತೀರ್ಮಾನಿಸಿ, ಇಂದು ಬೆಳಗ್ಗೆ ಇಬ್ಬರೂ ಆಟೋದಲ್ಲಿ ಚಿಕ್ಕನಂದಿ ಗ್ರಾಮದ ಹೊರ ವಲಯದ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಬಳಿಕ ಪ್ರಿಯಕರ ಓಡಿಸುತ್ತಿದ್ದ ಆಟೋದಲ್ಲೇ ಇಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಆಟೋದ ಹಿಂದಿನ ಸೀಟಿನ ಮೇಲಿನ ಕಬ್ಬಿಣದ ರಾಡ್​ ಗೆ ಅಗ್ಗ ಕಟ್ಟಿ ನೇಣಿಗೆ ಶರಣಾಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Tue, 1 July 25

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ