AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮೆರವಣಿಗೆ ಮುಂದೂಡಿ ಸೌಹಾರ್ದತೆ ಮೆರೆದ ಮುಸ್ಲಿಂ ಮುಖಂಡರು

ಈದ್ ಮಿಲಾದ್ ಮೆರವಣಿಗೆ ಸೆ.16ಕ್ಕೆ ಇದೆ. ಇದೇ ದಿನ ಗಣೇಶ ಮೂರ್ತಿ ನಿಮಜ್ಜನ ಮೆರವಣಿಗೆ ಕೂಡ ನಡೆಯಬೇಕಿದೆ. ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನ ಮೆರವಣಿಗೆ ಬಹಳ ಅದ್ಧೂರಿಯಾಗಿ ನಡೆಯಲಿದ್ದು, ಲಕ್ಷಾಂತರ ಜನ ಸೇರುತ್ತಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಸ್ಲಿಂ ಮುಖಂಡರು ಸಭೆ ನಡೆಸಿ ಈದ್ ಮೆರವಣಿಗೆ ಮುಂದೂಡಲು ತೀರ್ಮಾನಿಸಿದ್ದಾರೆ.

ಬೆಳಗಾವಿ: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮೆರವಣಿಗೆ ಮುಂದೂಡಿ ಸೌಹಾರ್ದತೆ ಮೆರೆದ ಮುಸ್ಲಿಂ ಮುಖಂಡರು
ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮೆರವಣಿಗೆ ಮುಂದೂಡಿಕೆ
Sahadev Mane
| Updated By: ಆಯೇಷಾ ಬಾನು|

Updated on:Sep 08, 2024 | 12:03 PM

Share

ಬೆಳಗಾವಿ, ಸೆ.08: ಬೆಳಗಾವಿಯಲ್ಲಿ ಮುಸ್ಲಿಂ ಮುಖಂಡರು ಮತ್ತೊಮ್ಮೆ ಸೌಹಾರ್ದತೆ ಸಾರಿದ್ದಾರೆ. ಸೆಪ್ಟೆಂಬರ್16 ರಂದು ಅದ್ಧೂರಿ ಗಣೇಶ ವಿಸರ್ಜನೆ (Ganesha Visarjan) ಮೆರವಣಿಗೆ ಹಿನ್ನೆಲೆ ಸೆಪ್ಟೆಂಬರ್ 16ರಂದು ನಡೆಯಬೇಕಿದ್ದ ಈದ್ (Eid Milad) ಮೆರವಣಿಗೆಯನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 22ರಂದು ಈದ್ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಬೆಳಗಾವಿಯಲ್ಲಿ ಸಭೆ ನಡೆಸಿದ ಮುಸ್ಲಿಂ ಸಮಾಜದ ಧರ್ಮಗುರು ಹಾಗೂ ಮುಖಂಡರು ಒಮ್ಮತದಿಂದ ತೀರ್ಮಾನಿಸಿದ್ದಾರೆ.

ಸೆ. 16 ರಂದು ಸರಳವಾಗಿ ಮನೆಯಲ್ಲಿ ಈದ್ ಮೀಲಾದ್ ಹಬ್ಬ ಆಚರಣೆ ಮಾಡಿ ಸೆ.22ರಂದು ಅದ್ದೂರಿಯಾಗಿ ಮೆರವಣಿಗೆ ಮೂಲಕ ಹಬ್ಬ ಆಚರಣೆಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸಭೆಯಲ್ಲಿ ಶಾಸಕ ಆಸೀಫ್ ಸೇಠ್ ಸೇರಿ ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದರು.

ಇದನ್ನೂ ಓದಿ: ಪೊಲೀಸ್​ ಠಾಣೆ ಒಳಗೆ ಎಎಸ್​ಐ ಮೇಲೆ ಹಲ್ಲೆ ನಡೆಸಿದ ಯುವಕರು

ಕ್ಯಾಲೆಂಡರ್ ಪ್ರಕಾರ ಈದ್ ಮಿಲಾದ್ ಮೆರವಣಿಗೆ ಸೆ.16ಕ್ಕೆ ಇದೆ. ಇದೇ ದಿನ ಗಣೇಶ ಮೂರ್ತಿ ನಿಮಜ್ಜನ ಮೆರವಣಿಗೆ ಕೂಡ ನಡೆಯಬೇಕಿದೆ. ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನ ಮೆರವಣಿಗೆ ಬಹಳ ಅದ್ಧೂರಿಯಾಗಿ ನಡೆಯಲಿದ್ದು, ಲಕ್ಷಾಂತರ ಜನ ಸೇರುತ್ತಾರೆ. ಈ ವೇಳೆ ಯಾವುದೇ ರೀತಿ ಅಹಿತಕರ ಘಟನೆಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ಶುಕ್ರವಾರ ಸಭೆ ಸೇರಿದ್ದ ಮುಸ್ಲಿಂ ಸಮಾಜದ ಹಿರಿಯರು, ವಿವಿಧ ಕಮಿಟಿಗಳ ಪದಾಧಿಕಾರಿಗಳು ಹಾಗೂ ಧರ್ಮಗುರುಗಳು ಈದ್ ಮಿಲಾದ್ ಮೆರವಣಿಗೆಯನ್ನು ಮುಂದೂಡಲು ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ.

ಕಳೆದ ವರ್ಷ ಕೂಡ ಈದ್ ಮಿಲಾದ್ ಮತ್ತು ಗಣೇಶೋತ್ಸವ ಮೆರವಣಿಗೆ ಎರಡೂ ಒಟ್ಟಿಗೆ ಬಂದಿದ್ದವು. ಆಗಲೂ ಮುಸ್ಲಿಂ ಮುಖಂಡರು ಈದ್ ಮಿಲಾದ್ ಮೆರವಣಿಗೆ ಮುಂದೂಡಿ ಕೋಮು ಸಾಮರಸ್ಯದ ಸಂದೇಶ ಸಾರಿದ್ದರು. ಈ ವರ್ಷವೂ ಕೂಡ ಅದೇ ನಿರ್ಧಾರ ಕೈಗೊಳ್ಳುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:01 pm, Sun, 8 September 24

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್