Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರ ರಕ್ಷಣೆ

ಎನ್​ಡಿಆರ್​ಎಫ್​ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ.

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರ ರಕ್ಷಣೆ
ಸವದಿ ಗ್ರಾಮದ ಜನರನ್ನು ಪ್ರವಾಹದಿಂದ ರಕ್ಷಿಸಲಾಗಿದೆ
Follow us
TV9 Web
| Updated By: sandhya thejappa

Updated on:Jul 29, 2021 | 2:04 PM

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್​ಡಿಆರ್​ಎಫ್​ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು.

ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ ಸಿಎಂ ಭಾರೀ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಒಟ್ಟು 123 ಗ್ರಾಮಗಳಲ್ಲಿ ಹಾನಿಯಾಗಿದೆ. 19,421 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಪ್ರವಾಹದಿಂದ 6 ಜನರ ಸಾವನ್ನಪ್ಪಿದ್ದಾರೆ. 15 ಜನರಿಗೆ ಗಾಯವಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ ಒಬ್ಬರು ಕಾಣೆಯಾಗಿದ್ದಾರೆ. 294 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಜಿಲ್ಲೆಯಲ್ಲಿ 705 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, 139 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಕಾಳಜಿ ಕೇಂದ್ರಗಳಿಗೆ 16,322 ಜನ ಸ್ಥಳಾಂತರವಾಗಿದ್ದರು. ಸದ್ಯ 40 ಕಾಳಜಿ ಕೇಂದ್ರಗಳಲ್ಲಿ 6,943 ಜನರು ಇದ್ದಾರೆ. 487.74 ಹೆಕ್ಟೇರ್​ನಷ್ಟು ಕೃಷಿ ಭೂಮಿ ಹಾನಿಯಾಗಿದೆ. 406 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗೆ ಹಾನಿ, ಜಿಲ್ಲೆಯಲ್ಲಿ 264.93 ಕಿಲೋ ಮೀಟರ್ ರಸ್ತೆ ಹಾನಿಯಾಗಿದೆ. 52 ಸೇತುವೆ, 39 ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ.

ಮಲಪ್ರಭಾ ನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಲಪ್ರಭಾ ನದಿ ನೀರು ನುಗ್ಗಿ ಬಾಗಲಕೋಟೆ ಜಿಲ್ಲೆಯ ಹುನಗುಂದ ಭಾಗದ ಬಿಸನಾಳ, ಇದ್ದಲಗಿ, ಕಮದತ್ತ, ಆಡಿಹಾಳ ಸೇರಿ 10ಕ್ಕೂ ಹೆಚ್ಚು ಹಳ್ಳಿಗಳಿಗೆ ಹಾನಿಯಾಗಿದೆ. ಜಲಾವೃತವಾದ ಜಮೀನಿನಲ್ಲಿ ನಿಂತು ಬಿಸನಾಳ ಗ್ರಾಮದ ರೈತ ಮಹಿಳೆ ದ್ಯಾಮವ್ವ ಕಣ್ಣೀರು ಹಾಕಿದ್ದಾರೆ. ವೋಟ್ ಕೇಳಲು ಬರುತ್ತಾರೆ, ಆಮೇಲೆ ಯಾರೂ ಬರೋದಿಲ್ಲ. ಪ್ರತಿ ವರ್ಷ ಹೀಗಾದ್ರೆ ಏನು ತಿನ್ನಬೇಕು ಅಂತ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

Kerala Lockdown: ಕೇರಳದಲ್ಲಿ ಕೊರೊನಾ ಮತ್ತೆ ಹೆಚ್ಚಳ; ವಾರಾಂತ್ಯದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರಿನ ಆರ್​​ಟಿ ನಗರದ ಈ ರಸ್ತೆಯಿಂದ ಮೂವರಿಗೆ ಕರ್ನಾಟಕದ ಮುಖ್ಯಮಂತ್ರಿ ಭಾಗ್ಯ! ಏನಿದು ವಾಸ್ತು ಲೆಕ್ಕಾಚಾರ?

(NDRF team rescued 54 people who were caught in the Krishna River floods at Belagavi)

Published On - 1:33 pm, Thu, 29 July 21

KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?