AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಕೊಲೆ ಪ್ರಕರಣ: 3 ತಿಂಗಳ ಹಿಂದೆ ತಂದೆಯ ಮೇಲೆಯೇ ಹಲ್ಲೆ ಮಾಡಿದ್ದ ಆರೋಪಿ ಫಯಾಜ್

ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ ಬಗ್ಗೆ ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಇದೀಗ ಆರೋಪಿ ಫಯಾಜ್​ ಕುರಿತು ಸ್ಫೋಟಕ ಮಾಹಿತಿ ತಿಳಿದು ಬಂದಿದೆ.

ನೇಹಾ ಕೊಲೆ ಪ್ರಕರಣ: 3 ತಿಂಗಳ ಹಿಂದೆ ತಂದೆಯ ಮೇಲೆಯೇ ಹಲ್ಲೆ ಮಾಡಿದ್ದ ಆರೋಪಿ ಫಯಾಜ್
ಆರೋಪಿ ಫಯಾಜ್​
Follow us
Sahadev Mane
| Updated By: ವಿವೇಕ ಬಿರಾದಾರ

Updated on:Apr 20, 2024 | 1:16 PM

ಬೆಳಗಾವಿ, ಏಪ್ರಿಲ್​ 20: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ (Neha Hiremath Murder) ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ನೇಹಾ ಹಿರೇಮಠರನ್ನು ಕೊಲೆ ಮಾಡಿದ್ದ ಆರೋಪಿ ಫಯಾಜ್ (Fayaz)​ ಕುರಿತು ಸ್ಫೋಟಕ ವಿಚಾರವೊಂದು ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆ ಆಸ್ತಿ ವಿಚಾರವಾಗಿ ಆರೋಪಿ ಫಯಾಜ್ ತಂದೆ-ತಾಯಿ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ಆರೋಪಿ ಫಯಾಜ್​ ತಾಯಿ ಪರವಾಗಿ ನಿಂತು, ತಂದೆಯೊಂದಿಗೆ ಜಗಳವಾಡಿದ್ದನು.

​ಜಗಳ ತಾರಕಕ್ಕೆ ಏರಿದ್ದು, ಆರೋಪಿ ಫಯಾಜ್​ ತಂದೆ ಬಾಬಾಸಾಹೇಬ್ ಕೊಂಡುನಾಯ್ಕ್ ಮೇಲಯೇ ಹಲ್ಲೆ ಮಾಡಿದ್ದನು ಎಂಬ ಅಂಶ ಟಿವಿ9ಗೆ ತಿಳಿದು ಬಂದಿದೆ. ಆಗ ಬಾಬಾಸಾಹೇಬ್ ಕೊಂಡುನಾಯ್ಕ್ ಮಗನಿಂದ ರಕ್ಷಣೆ ಕೊಡಿಸಿ ಅಂತ ಸವದತ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಈ ವೇಳೆ ಸವದತ್ತಿ ಪೊಲೀಸ್​ ಠಾಣೆ ಪಿಎಸ್ಐ ಆನಂದ ಆರೋಪಿ ಕುಟುಂಬವನ್ನು ಪೊಲೀಸ್​ ಠಾಣೆಗೆ ಕರೆಸಿ ಬುದ್ದಿವಾದ ಹೇಳಿದ್ದರು. ಆರೋಪಿ ಫಯಾಜ್​ ಬುದ್ದಿವಾದ ಹೇಳಿ, ಮುಚ್ಚಳಿಕೆ ಬರೆಯಿಸಿಕೊಂಡು ಕಳಸಿದ್ದರು. ಮತ್ತೆನಾದರೂ ತಂದೆ ಮೇಲೆ ಹಲ್ಲೆ ಮಾಡಿದರೆ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದ್ದರು ಎಂಬ ಮಾಹಿತಿ ಟಿವಿ9ಗೆ ಸವದತ್ತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಮದುವೆಗಾಗಿ ಫಯಾಜ್ ನಮಗೆ ಪೀಡಿಸುತ್ತಿದ್ದ, ಮಗಳಿಗೆ ಜೀವ ಬೆದರಿಕೆ ಹಾಕಿದ್ದ: ನೇಹಾ ತಂದೆ​

ಆರೋಪಿ ಫಯಾಜ್​ ತಂದೆ ಕಾಣೆ

ಇನ್ನು ಆರೋಪಿ ಫಯಾಜ್​ ತಂದೆ ಬಾಬಾಸಾಬ್ ಕಾಣೆಯಾಗಿದ್ದಾರೆ. ಬಾಬಾಸಾಬ್​ ನಿನ್ನೆ (ಏ.19) ಸಂಜೆಯಿಂದ ಕಾಣೆಯಾಗಿದ್ದು, ಬೆಳಗಾವಿ ಮತ್ತು ಹುಬ್ಬಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬಾಬಾಸಾಬ್​ ಪೋನ್ ಸ್ವಿಚ್ ಆಫ್ ಮಾಡಿಕೊಂಡು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.

ನೇಹಾ ಹಿರೇಮಠ, ತಂದೆ ನಿರಂಜನ ಹಿರೇಮಠ, ಆರೋಪಿ ಫಯಾಜ್​

ನನ್ನ ಮಗಳು ಹೊಲಸು ಕೆಲಸ ಮಾಡಲ್ಲ: ನೇಹಾ ತಾಯಿ

ನನ್ನ ಮಗಳು ನೇಹಾ ಹೊಲಸು ಕೆಲಸ ಮಾಡಲ್ಲ. ಕ್ಷಮೆ ತೆಗೆದುಕೊಂಡು ಏನು ಮಾಡಲಿ. ಮಗಳು ಕಾಲೇಜಿಗೆ ಹೋಗುತ್ತಿದ್ದಳು, ಮದುವೆ ಬಗ್ಗೆ ಮಾತಾಡಿಲ್ಲ. ಫೋಟೋವನ್ನು ಹೇಗೆ ಬೇಕು ಹಾಗೆ ಎಡಿಟ್​ ಮಾಡುತ್ತಾರೆ. ಮಗಳಿಗೆ ಶಾಂತಿ ಸಿಗಬೇಕು ಅಂದರೆ ಅವನು ಬದುಕಬಾರದು. ನನ್ನ ಮಗಳ ಕೊಲೆ ಮಾಡಿದವನನ್ನು ಜನರ ಕೈಗೆ ಕೊಡಿ. ಕಾಲೇಜಿಗೆ 3 ಗೇಟ್​ ಇದೆ, ಯಾರಾದರೂ ಸಹ ಬರುತ್ತಾರೆ. ನನ್ನ ಕಣ್ಣ ಮುಂದೆ ಘಟನೆ ನಡೆದಿದೆ. ಕಲಿಯೋಕೆ ಕಳುಹಿಸಿದರೆ ಹೆಣ ಆಗಿ ಬರ್ತಾರೆ ಅಂದರೆ ಹೇಗೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಎಂದು ನೇಹಾ ತಾಯಿ ಗೀತಾ ಅಳಲು ತೋಡಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Sat, 20 April 24

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್