AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರ ಕಾರ್ಮಿಕ ಮಹಿಳೆಗೆ ಒಲಿದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ

ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್‌, ಉಪ ಮೇಯರ್‌ ಆಯ್ಕೆಯಾಗಿದೆ. ಈ ಬಾರಿಯೂ ಸಹ ಬಿಜೆಪಿಗೆ ಒಲಿದಿದ್ದು, ಬಿಜೆಪಿಯಿಂದ ಕನ್ನಡ ಹಾಗೂ ಮರಾಠಾ ಸಮುದಾಯಗಳ ಓಲೈಕೆ ಮಾಡಲಾಗಿದೆ. ಈ ಬಾರಿ ಪಾಲಿಕೆಯ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆಗೆ ಮೇಯರ್ ಪಟ್ಟ ಒಲಿದುಬಂದಿರುವುದು ವಿಶೇಷ.

ಪೌರ ಕಾರ್ಮಿಕ ಮಹಿಳೆಗೆ ಒಲಿದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ
TV9 Web
| Edited By: |

Updated on: Feb 15, 2024 | 2:45 PM

Share

ಬೆಳಗಾವಿ, (ಫೆಬ್ರವರಿ 15): ಬೆಳಗಾವಿ ಮಹಾನಗರ ಪಾಲಿಕೆಯನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಪೌರ ಕಾರ್ಮಿಕ ಮಹಿಳೆ, ಕನ್ನಡತಿ ಸವಿತಾ ಕಾಂಬಳೆ ಅವರಿಗೆ  ಮೇಯರ್ ಪಟ್ಟ ಒಲಿದುಬಂದಿದೆ. ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಯಿಂದ ಕನ್ನಡ ಹಾಗೂ ಮರಾಠಾ ಸಮುದಾಯಗಳ ಓಲೈಕೆ ಮಾಡಲಾಗಿದೆ. ಬಿಜೆಪಿಯ‌ ಆನಂದ್ ಚವ್ಹಾಣ್​ 39 ಮತ ಹಾಗೂ ಕಾಂಗ್ರೆಸ್‌‌ನ ಜ್ಯೋತಿ ಕಡೋಲ್ಕರ್‌ 20 ಮತಗಳು ಪಡೆದುಕೊಂಡಿದ್ದಾರೆ. ಇದರೊಂದಿಗೆ ಆನಂದ್ ಗೆಲುವುಸಾಧಿಸಿದ್ದಾರೆ.

ಪೌರಕಾರ್ಮಿಕರಾಗಿದ್ದ ಸವಿತಾ ಕಾಂಬಳೆ

ಬೆಳಗಾವಿ ಮೇಯರ್​ ಆಗಿ ಆಯ್ಕೆಯಾಗಿರುವ ಸವಿತಾ ಕಾಂಬಳೆ ಅವರು ಕೆಲ ವರ್ಷಗಳ ಹಿಂದೆ ಇದೇ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದಾರೆ. ನಂತರ ಹೆಲ್ಮೆಟ್​ ಕಂಪನಿಯೊಂದರಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು. ತದನಂತರ ಅವರು ಊದುಬತ್ತಿ ತಯಾರಿಕಾ ಘಟಕ ಶುರು ಮಾಡಿದ್ದರು. ಆದ್ರೆ, 2021ರಲ್ಲಿ ಅವರಿಗೆ ಒಲಿದು ಬಂದ ಅವಕಾಶ ಬಳಸಿಕೊಂಡು ಬಿಜೆಪಿಯಿಂದ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ ಪೌರಕಾರ್ಮಿಕ ಆಗಿ ಕೆಲಸ ಮಾಡಿದ್ದ ಸವಿತಾ ಕಾಂಬಳೆ ಬೆಳಗಾವಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ವರ್ಷದ ಹಿಂದೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ಉತ್ತರ ಕ್ಷೇತ್ರದ ಶಾಸಕರಾಗಿದ್ದ ಅನಿಲ್ ಬೆನಕೆ ಅವರ ಕೃಪಕಟಾಕ್ಷದಿಂದ ಮಹಾನಗರ ಪಾಲಿಕೆ ಮರಾಠಿ ಭಾಷಿಕರಿಗೆ ಒಲಿದಿತ್ತು. ವಿಧಾನಸಭಾ ಚುನಾವಣೆಯಲ್ಲಿ ಮರಾಠಿ ಮತಗಳನ್ನು ಸೆಳೆಯುವ ಉದ್ದೇಶದಿಂದ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮರಾಠಿ ಭಾಷಿಕ ಸದಸ್ಯರಿಗೆ ನೀಡಲಾಗಿತ್ತು. ಆದ್ರೆ, ಈ ಬಾರಿ ಮೇಯರ್ ಹುದ್ದೆ ಕನ್ನಡಗರಿಗೆ ಒಲಿದಿದ್ದರೆ, ಉಪಮೇಯರ್ ಮಾರಾಠಿಗೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕನ್ನಡ ಹಾಗೂ ಮರಾಠಿ ಓಲೈಕೆ ಮಾಡಿದೆ ಎನ್ನುವ ಚರ್ಚೆ ಶುರುವಾಗಿದೆ.

21ನೇ ಅವಧಿಗೆ 2023ರ ಫೆಬ್ರವರಿಯಲ್ಲಿ ನಡೆದ ಚುನಾವಣೆಯಲ್ಲಿ ಮೇಯರ್‌ ಆಗಿ ಶೋಭಾ ಸೋಮನಾಚೆ ಹಾಗೂ ಉಪಮೇಯರ್‌ ಆಗಿ ರೇಷ್ಮಾ ಪಾಟೀಲ ಆಯ್ಕೆಯಾಗಿದ್ದರು. ಅವರ ಅಧಿಕಾರಾವಧಿ ಫೆ.5ಕ್ಕೆ ಪೂರ್ಣಗೊಂಡಿದ್ದರಿಂದ ಪಾಲಿಕೆಯ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಇಂದು ಫೆ.15ರಂದು ಮೇಯರ್‌ – ಉಪ ಮೇಯರ್‌ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ್ದರು.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ