AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಲಗಿಯಲ್ಲಿ ಏಳು ಭ್ರೂಣಗಳು ಪತ್ತೆ ವಿಚಾರ: ಏಳು ಭ್ರೂಣಗಳ ಪೈಕಿ ಆರು ಗಂಡು ಭ್ರೂಣಗಳು

ಭ್ರೂಣಗಳು ಹೇಗೆ ಸಂಗ್ರಹಿಸಲಾಯಿತು, ಇದು ಕಾನೂನು ಬಾಹಿರ ಆಗಿದ್ದರಿಂದ ಸಮಗ್ರ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ನೀಡಿದ್ದಾರೆ.

ಮೂಡಲಗಿಯಲ್ಲಿ ಏಳು ಭ್ರೂಣಗಳು ಪತ್ತೆ ವಿಚಾರ: ಏಳು ಭ್ರೂಣಗಳ ಪೈಕಿ ಆರು ಗಂಡು ಭ್ರೂಣಗಳು
ಭ್ರೂಣಗಳು ಪತ್ತೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 26, 2022 | 9:29 AM

ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು (Embryos) ಪತ್ತೆ ವಿಚಾರ ಹಿನ್ನೆಲೆ ಹಳ್ಳದಲ್ಲಿ ಸಿಕ್ಕ ಏಳು ಭ್ರೂಣ ಪೈಕಿ ಆರು ಭ್ರೂಣಗಳು ಗಂಡು ಭ್ರೂಣಗಳಾಗಿವೆ ಎಂದು ನಿನ್ನೆ ನಡೆದ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಆರು ಗಂಡು ಭ್ರೂಣ, ಒಂದು ಸ್ಥೂಲ ಜನ್ಮಜಾತ ಬೆಳವಣಿಗೆ ವೈಪರೀತ್ಯ ಹೊಂದಿರುವ ಭ್ರೂಣವಾಗಿದೆ. ಈ ಭ್ರೂಣಗಳು ಫಾರ್ಮಾಲಿನ್ ಬಳಸಿ ವಸ್ತು ಸಂಗ್ರಹಾಲಯದಲ್ಲಿ ಶೇಖರಿಸಲ್ಪಡುವ ಮಾದರಿಯದ್ದಾಗಿವೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ಭ್ರೂಣಗಳ ಸತ್ಯಾಂಶ ಬಯಲಾಗಿದೆ. ಭ್ರೂಣಗಳು ಹೇಗೆ ಸಂಗ್ರಹಿಸಲಾಯಿತು, ಇದು ಕಾನೂನು ಬಾಹಿರ ಆಗಿದ್ದರಿಂದ ಸಮಗ್ರ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ನೀಡಿದ್ದಾರೆ.

ಘಟನೆ ಬಗ್ಗೆ ಮಾತಿಹಿ ಪಡೆದುಕೊಂಡ ಆರೋಗ್ಯ ಸಚಿವ ಡಾ. ಕೆ ಸುಧಾಕರ್:​

ಇಡೀ ಘಟನೆಯ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿಗೆ (ಡಿಹೆಚ್​ಒ ಡಾ. ಮಹೇಶ್ ಕೋಣಿ) ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಆ ವೇಳೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಯಾರದ್ದೇ ಒತ್ತಡ ಬಂದರು ತಲೆಕೆಡಿಸಿಕೊಳ್ಳದೆ ನೀವು ಕ್ರಮ ಕೈಗೊಳ್ಳಿ ಎಂದು ಬೆಳಗಾವಿ ಡಿಹೆಚ್​ಒಗೆ ಆರೋಗ್ಯ ಸಚಿವ ಡಾ. ಸುಧಾಕರ್​ ಸೂಚಿಸಿದ್ದಾರೆ. ಸ್ವತಃ ಆರೋಗ್ಯ ಸಚಿವರಿಂದಲೇ ಈ ಸೂಚನೆ ಹೊರಬೀಳುತ್ತಿದ್ದಂತೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಬೆಳಗಾವಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಕಾರ್ಯಾಚರಣೆ ನಡೆಸಿದ್ದಾರೆ.

185ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ರೇಡ್:

ಬೆಳಗಾವಿ ಜಿಲ್ಲೆಯಾದ್ಯಂತ ನಿನ್ನೆ ಒಂದೇ ದಿನ 185ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ರೇಡ್ ಮಾಡಲಾಗಿದೆ. ಬೆಳಗಾವಿ ತಾಲೂಕು 64, ಅಥಣಿ 24, ಸವದತ್ತಿ 8, ರಾಯಬಾಗ 8, ಚಿಕ್ಕೋಡಿ 18, ಖಾನಾಪುರ 8, ರಾಮದುರ್ಗ 6, ಗೋಕಾಕ್ 40, ಬೈಲಹೊಂಗಲ 6 ಮತ್ತು ಹುಕ್ಕೇರಿ ಪಟ್ಟಣದಲ್ಲಿ 3 ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ಮಾಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಗೆ ವಿವಿಧ ಮಠಗಳ ಸ್ವಾಮೀಜಿಗಳಿಂದ ಆಕ್ಷೇಪ! ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಪತ್ರ ಬರೆದ ಕನಕ ಗುರುಪೀಠದ ಶ್ರೀಗಳು

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್