AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಬರದ ಛಾಯೆ, ಜಿಲ್ಲೆಯ 9 ತಾಲೂಕಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ

ಒಂಬತ್ತು ತಾಲೂಕುಗಳಲ್ಲಿ 75 ಗ್ರಾಮ ಪಂಚಾಯಿತಿಗಳು ಮತ್ತು ಒಂಬತ್ತು ನಗರ ಸ್ಥಳೀಯ ಸಂಸ್ಥೆಗಳು ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿವೆ. ಬೆಳಗಾವಿ ಜಿಲ್ಲೆಯ 75 ಗ್ರಾಮ ಪಂಚಾಯತಿಗಳ ನೀರಿನ ಅಗತ್ಯತೆಗಳನ್ನು ಪೂರೈಸಲು, ಒಟ್ಟು 88 ಟ್ಯಾಂಕರ್‌ಗಳನ್ನು ಬಳಸಲಾಗುತ್ತಿದ್ದು, ಇವುಗಳು ಪ್ರತಿದಿನ 270 ಟ್ರಿಪ್‌ಗಳ ಲೆಕ್ಕದಲ್ಲಿ ಪೂರೈಸುತ್ತಿದೆ.

ಬೆಳಗಾವಿಯಲ್ಲಿ ಬರದ ಛಾಯೆ, ಜಿಲ್ಲೆಯ 9 ತಾಲೂಕಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jul 03, 2023 | 1:27 PM

Share

ಬೆಳಗಾವಿ: ಮುಂಗಾರು(Monsoon) ಮಳೆ ಶುರುವಾಗಿ ಹತ್ತು ದಿನಗಳು ಕಳೆದಿವೆ. ಮಳೆಯಾದರೂ ವಾಡಿಕೆಯಷ್ಟು ಮಳೆಯಾಗುತ್ತಿಲ್ಲ(Karnataka Rain). ಬೆಳಗಾವಿಯಲ್ಲಿ(Belagavi) ಕಳೆದ ವಾರದಿಂದ ಮೋಡ ಕವಿದ ವಾತಾವರಣ ವಿದ್ದು ತುಂತುರು ಮಳೆಯಾಗುತ್ತಿದೆ. ಆದ್ರೆ ಇದುವರೆಗೂ ಜಲಾಶಯದ ಮಟ್ಟದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನೆಲದ ಮಟ್ಟದಲ್ಲಿ ನೀರಿನ ಬಿಕ್ಕಟ್ಟು ಬದಲಾಗಿಲ್ಲ. ಹೀಗಾಗಿ ಕುಡಿಯುವ ನೀರಿಗೆ ಪರಿತಪಿಸುವ ಸ್ಥಿತಿ ಇದೆ. ಜಿಲ್ಲೆಯ ಹಲವಾರು ನಗರಗಳು ಸ್ಥಳೀಯ ಸಂಸ್ಥೆಗಳ ಟ್ಯಾಂಕರ್ ನೀರಿನ ಮೇಲೆ ಅವಲಂಬಿತವಾಗಿವೆ.

ಜಿಲ್ಲಾಡಳಿತದ ಮೂಲಗಳ ಪ್ರಕಾರ, ಒಂಬತ್ತು ತಾಲೂಕುಗಳಲ್ಲಿ 75 ಗ್ರಾಮ ಪಂಚಾಯಿತಿಗಳು ಮತ್ತು ಒಂಬತ್ತು ನಗರ ಸ್ಥಳೀಯ ಸಂಸ್ಥೆಗಳು ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿವೆ. ಅವುಗಳು ಸ್ಥಳೀಯ ಆಡಳಿತವು ಪೂರೈಸುವ ಟ್ಯಾಂಕರ್ ನೀರನ್ನು ಅವಲಂಬಿಸಿವೆ. ಬೆಳಗಾವಿ ವಿಭಾಗದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆ ಬೆಳಗಾವಿ. ಇದು ಉತ್ತರ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

ಉತ್ತರ ಕನ್ನಡವು ನೀರಿನ ಸಮಸ್ಯೆಯಿಂದ ತೀವ್ರವಾಗಿ ಹಾನಿಗೊಳಗಾದ ಎರಡನೇ ಜಿಲ್ಲೆಯಾಗಿದ್ದು, ಆರು ತಾಲೂಕುಗಳ 26 ಗ್ರಾಮಗಳು ತೀವ್ರ ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿವೆ, ನಂತರ ಬಾಗಲಕೋಟೆ, ಹಾವೇರಿ ಮತ್ತು ವಿಜಯಪುರದಲ್ಲಿ ತಲಾ ನಾಲ್ಕು ತಾಲೂಕುಗಳು ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿವೆ. ಬೆಳಗಾವಿ ಜಿಲ್ಲೆಯ ಒಂಬತ್ತು ನಗರ ಸಂಸ್ಥೆಗಳ 40 ವಾರ್ಡ್‌ಗಳಲ್ಲಿ ನೀರು ಪೂರೈಕೆಗೆ ಸಂಬಂಧಿಸಿದಂತೆ, 26 ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದ್ದು, ಪ್ರತಿದಿನ ಸರಾಸರಿ 53 ಟ್ರಿಪ್‌ಗಳ ಲೆಕ್ಕದಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಮುಂಗಾರು ಮಳೆ ವಿಳಂಬ; ರಾಜ್ಯದಲ್ಲಿ ಎದುರಾಗಲಿದೆ ನೀರಿಗಾಗಿ ಹಾಹಾಕಾರ

ಬೆಳಗಾವಿ ಜಿಲ್ಲೆಯ 75 ಗ್ರಾಮ ಪಂಚಾಯತಿಗಳ ನೀರಿನ ಅಗತ್ಯತೆಗಳನ್ನು ಪೂರೈಸಲು, ಒಟ್ಟು 88 ಟ್ಯಾಂಕರ್‌ಗಳನ್ನು ಬಳಸಲಾಗುತ್ತಿದ್ದು, ಇವುಗಳು ಪ್ರತಿದಿನ 270 ಟ್ರಿಪ್‌ಗಳ ಲೆಕ್ಕದಲ್ಲಿ ಪೂರೈಸುತ್ತಿದೆ. ಅಲ್ಲದೆ 45 ಗ್ರಾಮಗಳಿಗೆ 57 ಖಾಸಗಿ ಬೋರ್ ನೀರು ಪೂರೈಕೆ ಮಾಡಲಾಗುತ್ತಿದೆ.

ತೀವ್ರ ನೀರಿನ ಕೊರತೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯ ಒಂಬತ್ತು ತಾಲೂಕುಗಳ ಪೈಕಿ ಅಥಣಿ ಮೊದಲ ಸ್ಥಾನದಲ್ಲಿದೆ. ಅಥಣಿಯಲ್ಲಿ 18 ಗ್ರಾಮಗಳಲ್ಲಿ ನೀರಿನ ಕೊರತೆ ಇದೆ. ಖಾನಾಪುರ ಮತ್ತು ರಾಯಬಾಗದಲ್ಲಿ ತಲಾ 15 ಗ್ರಾಮಗಳಲ್ಲಿ, ಬೆಳಗಾವಿ ತಾಲೂಕಿನಲ್ಲಿ 12, ನಿಪ್ಪಾಣಿಯಲ್ಲಿ 6, ಚಿಕ್ಕೋಡಿಯಲ್ಲಿ 4, ಗೋಕಾಕದಲ್ಲಿ 3, ಮೂಡಲಗಿ ಮತ್ತು ರಾಮದುರ್ಗದಲ್ಲಿ ತಲಾ 1 ಗ್ರಾಮ ಪಂಚಾಯಿತಿ ಪ್ರದೇಶದಲ್ಲಿ ನೀರಿನ ಕೊರತೆ ಇದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಮುಂದಿನ 10 ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಂದು ಅಥವಾ ಎರಡು ವಾರಗಳಲ್ಲಿ ಪ್ರಸ್ತುತ ಸಮಸ್ಯೆ ಬಗೆಹರಿಯುತ್ತದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ