AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್, ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ

ನಾಡಿನಾಧ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಆದ್ರೆ, ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್ ತೆಗೆದಿದ್ದಾರೆ. ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್,  ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ
ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ
TV9 Web
| Edited By: |

Updated on:Aug 15, 2023 | 9:47 AM

Share

ಬೆಳಗಾವಿ, (ಆಗಸ್ಟ್ 15): ದೇಶಾದ್ಯಂತ ಇಂದು (ಆಗಸ್ಟ್ 15) 77ನೇ ಸ್ವಾತಂತ್ರ್ಯ ದಿನಾಚರಣೆ(Independence Day) ಆಚರಿಸಲಾಗುತ್ತಿದೆ. ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ, ಜಿಲ್ಲಾಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಶಾಲೆ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿದೆ. ಆದ್ರೆ, ಚಿಕ್ಕೋಡಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ದಿನದಂದು ಮರಾಠಿ ಭಾಷಿಕ ಪುಂಡರು ಕಿರಿಕ್ ಮಾಡಿದ್ದಾರೆ. ಬೆಳಗಾವಿ(Belagavi) ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದಾರೆ. ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಸ್ಥಳೀಯ ಅಧಿಕಾರಿಗಳಿಂದ ಧ್ವಜಾರೋಹಣದ ಬಳಿಕ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ. ಅದರ ಪಕ್ಕದಲ್ಲೇ ಮರಾಠಿ ಭಾಷಿಕ ನಿಪ್ಪಾಣಿ ನಗರಸಭಾ ಸದಸ್ಯರಾದ ವಿನಾಯಕ ವಾಡೆ ಹಾಗೂ ಸಂಜಯ ಸಾಂಗಾವಕರ್ ಅವರು ಭಗವಾ ಧ್ವಜ ಹಾರಿಸಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಅದನ್ನು ತಡೆದಿದ್ದು, ಧ್ವಜ ಹಾರಿಸಲು ಬಂದವರನ್ನ ತಡೆದು ತರಾಟೆಗೆ ತೆಗೆದುಕೊಂಡರು. ಈ ಇಬ್ಬರು ಎನ್.ಸಿ.ಪಿ. ಬೆಂಬಲಿತ ನಿಪ್ಪಾಣಿ ನಗರಸಭೆ ಸದಸ್ಯರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:36 am, Tue, 15 August 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ