AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲು ಗ್ಯಾರೇಜ್ ಕೆಲಸ, ರಾತ್ರಿ ವೇಳೆ ಲಾರಿ ಕದಿಯುತ್ತಿದ್ದ ಖತರ್ನಾಕ್ ಕಳ್ಳ ಲಾಕ್

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿ ಕಲ್ಲಪ್ಪ ಕದಂ ಹೊಟ್ಟೆ ಪಾಡಿಗೆ ಜಮೀನು ಮಧ್ಯ ಗ್ಯಾರೇಜ್ ಓಪನ್ ಮಾಡಿರೋ ಈತ ಅಲ್ಲೇ ಕಷ್ಟಪಟ್ಟು ದುಡಿದ್ರೆ ಇವತ್ತು ಪೊಲೀಸರ ಮುಂದೆ ಹೀಗೆ ಪೋಸ್​ ಕೊಡ್ತಿರ್ಲಿಲ್ಲ ಅನ್ಸುತ್ತೆ.. ಆದ್ರೆ, ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಸರಿಯಾಗೆ ತಗ್ಲಾಕ್ಕೊಂಡಿದ್ದಾನೆ. ಲಾರಿಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಲಾಕ್: ಯೆಸ್, ಬೆಳಗ್ಗೆಯಿಂದ ಸಂಜೆವರೆಗೂ ಲಾರಿಗಳನ್ನ ರಿಪೇರಿ ಮಾಡ್ತಿದ್ದ ಈ ಆಸಾಮಿ, ರಾತ್ರಿಯಾದ್ರೆ ಸಾಕು ರಸ್ತೆ ಪಕ್ಕದಲ್ಲಿ ನಿಲ್ಸೋ ಲಾರಿಗಳನ್ನ ಟಾರ್ಗೆಟ್ […]

ಹಗಲು ಗ್ಯಾರೇಜ್ ಕೆಲಸ, ರಾತ್ರಿ ವೇಳೆ ಲಾರಿ ಕದಿಯುತ್ತಿದ್ದ ಖತರ್ನಾಕ್ ಕಳ್ಳ ಲಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 26, 2020 | 12:53 PM

Share

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿ ಕಲ್ಲಪ್ಪ ಕದಂ ಹೊಟ್ಟೆ ಪಾಡಿಗೆ ಜಮೀನು ಮಧ್ಯ ಗ್ಯಾರೇಜ್ ಓಪನ್ ಮಾಡಿರೋ ಈತ ಅಲ್ಲೇ ಕಷ್ಟಪಟ್ಟು ದುಡಿದ್ರೆ ಇವತ್ತು ಪೊಲೀಸರ ಮುಂದೆ ಹೀಗೆ ಪೋಸ್​ ಕೊಡ್ತಿರ್ಲಿಲ್ಲ ಅನ್ಸುತ್ತೆ.. ಆದ್ರೆ, ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಸರಿಯಾಗೆ ತಗ್ಲಾಕ್ಕೊಂಡಿದ್ದಾನೆ.

ಲಾರಿಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಲಾಕ್: ಯೆಸ್, ಬೆಳಗ್ಗೆಯಿಂದ ಸಂಜೆವರೆಗೂ ಲಾರಿಗಳನ್ನ ರಿಪೇರಿ ಮಾಡ್ತಿದ್ದ ಈ ಆಸಾಮಿ, ರಾತ್ರಿಯಾದ್ರೆ ಸಾಕು ರಸ್ತೆ ಪಕ್ಕದಲ್ಲಿ ನಿಲ್ಸೋ ಲಾರಿಗಳನ್ನ ಟಾರ್ಗೆಟ್ ಮಾಡ್ತಿದ್ದ. ಲಾರಿಯಲ್ಲಿ ಯಾರೂ ಇಲ್ಲ ಅಂದ್ರೆ ಮುಗೀತು. ಡಮ್ಮಿ ಕೀಗಳನ್ನ ಬಳಸಿ ಲಾರಿಗಳನ್ನ ಎಗರಿಸುತ್ತಿದ್ದ. ಹೀಗೆ ಕದ್ದ ಲಾರಿಗಳನ್ನ ಅಂಕಲಿ ಗ್ರಾಮದಲ್ಲಿರೋ ತನ್ನ ಗ್ಯಾರೇಜ್​ಗೆ ತಂದು ನಂಬರ್ ಪ್ಲೇಟ್ ಹಾಗೂ ಚಾಸ್ಸಿಯನ್ನ ಚೇಂಜ್ ಮಾಡ್ತಿದ್ದ. ಬಳಿಕ ಲಾರಿಯ ಬಣ್ಣ ಕೂಡ ಬದಲಿಸಿ ಪಕ್ಕದ ಮಹಾರಾಷ್ಟ್ರದಲ್ಲಿ ಮಾರಾಟ ಮಾಡ್ತಿದ್ದ. ಹೀಗೆ ಬರೋಬ್ಬರಿ 8 ಲಾರಿ, 2 ಟಿಪ್ಪರ್ ಸೇರಿದಂತೆ ಒಟ್ಟು 13 ವಾಹನಗಳನ್ನ ಎಗರಿಸಿದ್ದಾನೆ ಈ ಖತರ್ನಾಕ್ ಕಳ್ಳ.

ಎರಡು ವರ್ಷಗಳಿಂದ ಇದೇ ಕೆಲಸ ಮಾಡಿಕೊಂಡು ಬಂದಿದ್ದ ಈತ ಎಲ್ಲೂ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಆದ್ರೆ ಕಳೆದ ತಿಂಗಳು ಲಾರಿಯೊಂದು ಕಳ್ಳತನವಾಗಿದ್ದು ಚಿಂಚನಿ ಗ್ರಾಮದ ಚೆಕ್​ಪೋಸ್ಟ್​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ಬೆನ್ನು ಹತ್ತಿದ ನಿಪ್ಪಾಣಿ ಪೊಲೀಸರು ಅಂಕಲಿ ಗ್ರಾಮದಿಂದ ಮುಂದೆ ಲಾರಿ ಹೋಗಿಲ್ಲ ಅನ್ನೋದನ್ನ ಖಚಿತಪಡಿಸಿಕೊಂಡ್ರು. ಬಳಿಕ ವಿಚಾರಣೆ ನಡೆಸಿದಾಗ ಇದೆಲ್ಲದರ ಹಿಂದೆ ಕಳ್ಳಪ್ಪ ಕದಂ ಕೈವಾಡವಿರೋದು ಬೆಳಕಿಗೆ ಬಂದಿದೆ. ಸದ್ಯ ಕಳ್ಳನನ್ನ ಲಾಕ್ ಮಾಡಿದ್ದಕ್ಕೆ ಚಿಕ್ಕೋಡಿ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಸದ್ಯ ಖತರ್ನಾಕ್ ಲಾರಿ ಕಳ್ಳ ಕಲ್ಲಪ್ಪ ಕದಂನನ್ನ ಕಂಬಿ ಹಿಂದೆ ತಳ್ಳಿರೋ ಪೊಲೀಸರು, ಕದ್ದ ವಾಹನಗಳ ಮಾರಾಟದಲ್ಲಿ ಈತನಿಗೆ ಸಾಥ್ ನೀಡಿದ್ದ ಮಹಾರಾಷ್ಟ್ರ ಮೂಲದ ಮತ್ತೊಬ್ಬ ಆರೋಪಿಗಾಗಿ ಬಲೆ ಬೀಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!