AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿ ಜೊತೆ ಯಾವುದೇ ವಾರ್ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಕೋಲ್ಡ್‌ವಾರ್ ಇರುವುದು ನಿಜ ಎಂದು ಈ ಹಿಂದೆ ಸ್ವತಃ ಸತೀಶ್ ಜಾರಕಿಹೊಳಿಯೇ ಹೇಳಿದ್ದರು. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೇಳಿದಾಗ "ಈ ಕೋಲ್ಡ್ ವಾರ್, ಹಾಟ್​​​ ವಾರ್ ನನಗೇನೂ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ, ನಮ್ಮ ನಡುವೆ ಯಾವುದೇ ವಾರ್ ಇಲ್ಲ" ಎಂದು ಹೇಳುತ್ತಿದ್ದಾರೆ.

ಸತೀಶ್ ಜಾರಕಿಹೊಳಿ ಜೊತೆ ಯಾವುದೇ ವಾರ್ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ
ಸಹದೇವ್​ ಮಾನೆ
| Edited By: Rakesh Nayak Manchi|

Updated on: Sep 05, 2023 | 7:16 PM

Share

ಬೆಳಗಾವಿ, ಸೆ.5: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಜೊತೆ ಕೋಲ್ಡ್‌ವಾರ್ ಇರುವುದು ನಿಜ ಎಂದು ಈ ಹಿಂದೆ ಸ್ವತಃ ಸತೀಶ್ ಜಾರಕಿಹೊಳಿ (Satish Jarkiholi) ಅವರೇ ಒಪ್ಪಿಕೊಂಡಿದ್ದರು. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೇಳಿದಾಗ “ಈ ಕೋಲ್ಡ್ ವಾರ್, ಹಾಟ್​​​ ವಾರ್ ನನಗೇನೂ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ, ನಮ್ಮ ನಡುವೆ ಯಾವುದೇ ವಾರ್ ಇಲ್ಲ” ಎಂದು ಹೇಳಿದ್ದಾರೆ.

ಈ ಚರ್ಚೆ ನೋಡಿ ನನಗೆ ವಿಚಿತ್ರ ಅನಿಸುತ್ತಿದೆ, ಕೋಲ್ಡ್ ವಾರ್, ಹಾಟ್ ವಾರ್ ಅಂದರೇನು? ಈ ಕೋಲ್ಡ್ ವಾರ ಬಗ್ಗೆ ನನಗೆ ತಿಳಿಯುತ್ತಿಲ್ಲ, ನನಗೆ ಮೊದಲು ಬಿಡಿಸಿ ಹೇಳಿ. ನಾನು ಉಡುಪಿ ಜಿಲ್ಲಾ ಉಸ್ತುವಾರಿ, ರಾಜ್ಯದ ಸಚಿವೆ. ನನ್ನ ಮೇಲೆ ದೊಡ್ಡ ಜವಾದ್ಬಾರಿ ಇದೆ, 36 ಸಾವಿರ ಕೋಟಿ ಹಣ ಮಹಿಳೆಯರಿಗೆ ಕೊಡಬೇಕು. ಬಹಳಷ್ಟು ಅಳೆದು ತೂಗಿ ನಾನು ಸಚಿವೆ ಆಗಿ ಹೆಜ್ಜೆ ಇಡುತ್ತಿದ್ದೇನೆ. ಅಲ್ಲದೆ ಉಡುಪಿ ಜಿಲ್ಲೆ ಕೂಡ ರಾಜ್ಯದಲ್ಲಿ ಸದಾ ಹಾಟ್ ಇರುವ ಜಿಲ್ಲೆ. ಬಿಟ್ಟು ಬಿಡದೇ ಕೆಲಸದಿಂದ ನನಗೆ ಇಲ್ಲೇ ಪುರುಸೊತ್ತು ಸಿಗುತ್ತಿಲ್ಲ. ಈ ಕೋಲ್ಡ್ ವಾರ್ ಹಾಟ್ ವಾರ್ ನನಗೇನೂ ಗೊತ್ತಿಲ್ಲ. ಬೇಕಾದರೆ ನೀವು ಸತೀಶ್ ಜಾರಕಿಹೊಳಿ ಅವರನ್ನು ಒಮ್ಮೆ ಕೇಳಿ ಎಂದರು.

ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮಧ್ಯಭಾಗದಲ್ಲೇ ಹೊರಟು ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹೊರಡಿ ಎಂದ ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ, ನಮ್ಮ ನಡುವೆ ಯಾವುದೇ ವಾರ್ ಇಲ್ಲ. ನಮ್ಮದು ಬಿಜೆಪಿ ವಿರುದ್ಧದ ಹೋರಾಟ ಎಂದು ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್​​ 11 ಸ್ಥಾನ ಗೆಲ್ಲಲು ನಮ್ಮ ಒಗ್ಗಟ್ಟು ಕಾರಣ. ಸತೀಶ್ ಅಣ್ಣ ಕೂಡ ಕೋಲ್ಡ್ ವಾರ್ ಬಗ್ಗೆ ಹೇಳಿಲ್ಲ, ನಾನೂ ಕೇಳಿಲ್ಲ. ನನ್ನ, ಸತೀಶ್​​ ಮಧ್ಯೆ ಲೋಕಸಭಾ ಚುನಾವಣೆ ಗೆಲುವು ಗುರಿ ಇದೆ. ನನ್ನ ಹಾಗೂ ಸತೀಶ್ ಅಣ್ಣ ಮಧ್ಯೆ ಮಿಸ್ ಅಂಡರ್ ಸ್ಟ್ಯಾಂಡಿಂಗ್​ ಇಲ್ಲ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಆಗುತ್ತದೆ ಎಂದರು.

ಕೋಲ್ಡ್ ವಾರ್ ಇದೆ ಎಂದಿದ್ದ ಸತೀಶ್ ಜಾರಕಿಹೊಳಿ

ಬಿಜೆಪಿಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಬೆಳಗಾವಿಯ ಇತರೆ ನಾಯಕರು ಮುನಿಸಿಕೊಂಡಿರುವಂತೆಯೇ, ಕಾಂಗ್ರೆಸ್​ನಲ್ಲೂ ಸತೀಶ್ ಜಾರಕಿಹೊಳಿ ವಿರುದ್ಧ ಇತರೆ ನಾಯಕರ ಮುನಿಸಿಕೊಂಡಿದ್ದಾರೆ. ಸತೀಶ್ ಅವರು ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ ಸವದಿ ಜೊತೆ ಮುಸುಕಿನ ಗುದ್ದಾಟ ನಡೆಸುತ್ತಿದ್ದಾರೆ. ಈ ಪೈಕಿ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಕೋಲ್ಡ್‌ವಾರ್ ಇರುವುದು ನಿಜ ಎಂದು ಸ್ವತಃ ಸತೀಶ್ ಜಾರಕಿಹೊಳಿ ಅವರೇ ಹೇಳಿಕೆ ನೀಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್