AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!

ಇತ್ತೀಚೆಗೆಷ್ಟೇ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ (Congress) ಶಾಸಕ ರಾಜು ಕಾಗೆ (Raju Kage) ವಿವಾದ ಹುಟ್ಟು ಹಾಕಿದ್ದರು. ಇದೀಗ ತಮ್ಮದೇ ಸ್ವಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ, ಅಸಹಾಯಕತೆ ಹೊರಹಾಕುವ ಮೂಲಕ ಸುದ್ದಿಯಾಗಿದ್ದಾರೆ.

ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!
ರಾಜು ಕಾಗೆ, ಸಿದ್ದರಾಮಯ್ಯ
Sahadev Mane
| Edited By: |

Updated on:Oct 11, 2024 | 4:36 PM

Share

ಬೆಳಗಾವಿ, (ಅಕ್ಟೋಬರ್ 11): ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಮೋದಿ ಬಗ್ಗೆ ಮತನಾಡಿ ಸುದ್ದಿಯಾಗಿದ್ದರು. ಈಗ ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ತಾವಂಶಿ ಗ್ರಾಮದಲ್ಲಿ ಮಾತನಾಡಿರುವ ಕಾಗೆ, ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದರು. ಅಲ್ಲದೇ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರೈತರು ಒಂದು ವರ್ಷ ಬೆಳೆಗಳನ್ನ ಬೆಳೆಯುವುದನ್ನು ಬಿಟ್ರೇ ನೀವೇನು ತಿಂತಿರೀ? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು. ಆದ್ರೆ ಅದನ್ನ ತಿನ್ನೋಕಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ . ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ. ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದ್ದೆ. ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ, ನಿನ್ನ ಕೆಲಸ ಮಾಡ್ತೇವಿ ಅಂತ ಹೇಳಿದ ಮಂತ್ರಿಗಳಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ: ಕಾಂಗ್ರೆಸ್​ ಶಾಸಕ ರಾಜು ಕಾಗೆ

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಚೈನಿ(ಮೋಜು, ಮಸ್ತಿ) ಮಾಡುತ್ತಿಲ್ಲ. ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ಆದ್ರೆ ಸರ್ಕಾರದವರು ನಮಗೆ ಸ್ಪಂದನೆ ಮಾಡುತ್ತಿಲ್ಲ. ಅದ್ದರಿಂದ ಏನು ಆಗೋದಿದೆ. ಬೇಕಾದ್ರೆ ನಾನು ನಾಳೆ ಹೋಗಿ ರಾಜೀನಾಮೆ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಏತಕ್ಕಾಗಿ ನಾವು ಎಂಎಲ್‌ಎ ಗಳಾಗಿರಬೇಕು, ಏತಕ್ಕಾಗಿ ನಾವು ಅಧಿಕಾರದಲ್ಲಿಬೇಕು. ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳುತ್ತಿದ್ದೇನೆ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂದು ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್ ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ಸಲ ನನಗೆ ಎಂಎಲ್ಎ ಆಗುವುದು ಬೇಕಾಗಿಲ್ಲ ಎಂದು ಜನತೆ ಮುಂದೆ ತಮ್ಮ ಅಸಹಾಯಕತೆ ತೊಡಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Fri, 11 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್