AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಭಾಗದಲ್ಲಿ ಮಳೆ, ಉತ್ತರ ಕರ್ನಾಟಕದಲ್ಲಿ ಬರ: ಹವಾಮಾನ ಇಲಾಖೆಯನ್ನು ನಂಬಿಕೊಂಡು ಪ್ಲ್ಯಾನ್ ಮಾಡಬೇಡಿ ಎಂದ ಬೊಮ್ಮಾಯಿ

ಬೆಳಗಾವಿ ಭಾಗದಲ್ಲಿ ಮಳೆ ಕೊರತೆ ಉಂಟಾಗಿದೆ. ಯಳ್ಳೂರ, ಶಹಾಪುರ, ವಡಗಾಂವ ಸೇರಿದಂತೆ ಹಲವು ಭಾಗದಲ್ಲಿ ಭತ್ತದ ಬೆಳೆ ಒಣಗುತ್ತಿದೆ.

ಕರಾವಳಿ ಭಾಗದಲ್ಲಿ ಮಳೆ, ಉತ್ತರ ಕರ್ನಾಟಕದಲ್ಲಿ ಬರ: ಹವಾಮಾನ ಇಲಾಖೆಯನ್ನು ನಂಬಿಕೊಂಡು ಪ್ಲ್ಯಾನ್ ಮಾಡಬೇಡಿ ಎಂದ ಬೊಮ್ಮಾಯಿ
ಬೆಳಗಾವಿಯಲ್ಲಿ ಬರ
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on:Jul 06, 2023 | 3:37 PM

Share

ಬೆಳಗಾವಿ: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮನೆಗಳು, ಸೇತುವೆಗಳು ಮುಳುಗಿವೆ. ಪ್ರವಾಹದ ಭೀತಿ ಎದುರಾಗಿದೆ(Karnataka Rain). ಆದ್ರೆ ಉತ್ತರ ಕರ್ನಾಟಕದಲ್ಲಿ(Uttara Karnataka) ಮಳೆ ಕೈಕೊಟ್ಟಿದೆ. ಬರದ ಛಾಯೆ ಆವರಿಸಿದೆ. ಪಶ್ಚಿಮ ಘಟ್ಟಗಳ ಪ್ರದೇಶ, ಬೆಳಗಾವಿ ಭಾಗದಲ್ಲಿ ಮಳೆ ಕೊರತೆ ಉಂಟಾಗಿದೆ. ಯಳ್ಳೂರ, ಶಹಾಪುರ, ವಡಗಾಂವ ಸೇರಿದಂತೆ ಹಲವು ಭಾಗದಲ್ಲಿ ಭತ್ತದ ಬೆಳೆ ಒಣಗುತ್ತಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಭತ್ತ ಬಿತ್ತನೆ ಮಾಡಿದ್ದ ರೈತರು ಕಂಗಾಲಾಗಿದ್ದಾರೆ. ಮಳೆ ಕೊರತೆ ಬಗ್ಗೆ ಇಂದಿನ ಸದನದಲ್ಲಿ ಪ್ರಸ್ತಾಪ ಮಾಡಲಾಗಿದೆ.

ಮಳೆಯಾಗದ ಕಾರಣ ಅಲ್ಪಸ್ವಲ್ಪ ಚಿಗುರೊಡೆದ ಬೆಳೆಗಳ ಮಧ್ಯೆ ಜಮೀನು ಬಿರುಕು ಬಿಡ್ತಿವೆ. ಮೂವತ್ತು ಸಾವಿರ ವರೆಗೂ ಖರ್ಚು ಮಾಡಿ ಭತ್ತ ಬಿತ್ತನೆ ಮಾಡಿದ್ದೀವಿ. ಮಳೆಯಾಗದ ಹಿನ್ನೆಲೆ ಬೆಳೆ ಕೈಕೊಟ್ಟಿದೆ. ಮಳೆ ಬರುತ್ತೆ ಅಂತ ಒಂದೂವರೆ ತಿಂಗಳ ಹಿಂದೆ ಭತ್ತ ಬಿತ್ತನೆ ಮಾಡಿದ್ದೀವಿ. ಹನ್ನೆರಡನೂರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ಭತ್ತ ಹಾಳಾಗುವ ಭೀತಿ ಎದುರಾಗಿದೆ. ಹೀಗಾಗಿ ಹೆಕ್ಟೇರ್‌ಗೆ ಐವತ್ತು ಸಾವಿರ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.

ಮಳೆ ಇಲ್ಲದೆ ಖಾಲಿ ಖಾಲಿಯಾಗಿರುವ ಜಲಾಶಯಗಳು

ಇನ್ನು ಮಳೆ ಇಲ್ಲದ ಕಾರಣ ಜಲಾಶಯಗಳಿಗೆ ಇನ್ನೂ ನೀರಿನ ಒಳ ಹರಿವು‌ ಆರಂಭವಾಗಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಶೇ‌ 62 ರಷ್ಟು ಮಳೆಯ ಕೊರತೆ ಇದೆ. ಜೂನ್ 1 ರಿಂದ ಇಲ್ಲಿಯ ವರೆಗೆ 165 ಮಿ.ಮೀ ವಾಡಿಕೆ ಮಳೆ ಆಗಬೇಕಿತ್ತು. ಈವರೆಗೆ ಕೇವಲ 62 ಮಿ.ಮೀ ಮಳೆಯಾಗಿದೆ. ಬೆಳಗಾವಿಯ ಘಟಪ್ರಭಾ, ಮಲಪ್ರಭಾ ಜಲಾಶಯಕ್ಕೆ ಇನ್ನೂ ಒಳ ಹರಿವು ಆರಂಭ ಆಗಿಲ್ಲ. 51 ಟಿಎಂಸಿ ಸಾಮರ್ಥ್ಯದ ಘಟಪ್ರಭಾ ಜಲಾಶಯ ಸಂಪೂರ್ಣ ಖಾಲಿ‌ಯಾಗಿದೆ. 37 ಟಿಎಂಸಿ ಸಾಮರ್ಥ್ಯದ ಮಲಪ್ರಭಾ ಜಲಾಶಯವೂ ಖಾಲಿ‌ಯಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ; ಹಲವೆಡೆ ಜಲ ದಿಗ್ಬಂಧನ, ಗುಡ್ಡ ಕುಸಿತ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಆಗುತ್ತಿಲ್ಲ. ಹೀಗಾಗಿ ಎರಡು ನದಿಗಳಲ್ಲಿ ಇನ್ನೂ ನಿರೀಕ್ಷಿತ ಪ್ರಮಾಣದ ನೀರಿ ಹರಿದು ಬರುತ್ತಿಲ್ಲ. ಕೇವಲ ಜಿಟಿಜಿಟಿ ಮಳೆಯಾಗುತ್ತಿದ್ದು ಈ ವರೆಗೂ ದೊಡ್ಡ ಮಳೆ ಆಗಿಲ್ಲ. ಜಿಲ್ಲೆಯಲ್ಲಿ 7.11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ಗೋವಿನಜೋಳ ಹೆಸರು, ಉದ್ದು, ಸೋಯಾಬಿನ್, ಶೇಂಗಾ ಬಿತ್ತನೆಯ ಗುರಿ ಇದೆ. ಇಷ್ಟೊತ್ತಿಗೆ ಆಗಲೇ ಶೇ 80ರಷ್ಟು ಬಿತ್ತನೆ ಕಾರ್ಯ ಆಗಬೇಕಿತ್ತು. ಕಬ್ಬು ಹೊರತು ಪಡಿಸಿ ಕೇವಲ ಶೇಕಡಾ 18ರಷ್ಟು ಮಾತ್ರ ಬಿತ್ತನೆ ಕಾರ್ಯ ಆಗಿದೆ. ಮಳೆ ಕೈ ಕೊಟ್ಟ ಹಿನ್ನೆಲೆ ರೈತರ ಲೆಕ್ಕಾಚಾರ ತಲೆಕೆಳಗಾಗಿದೆ.

ಸದನದಲ್ಲಿ ಮಳೆ ಕೊರತೆ ಹಾಗೂ ಬರ ನಿಯಂತ್ರಣ ಪ್ರಸ್ತಾಪ

ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಮಳೆ ಕೊರತೆ ಹಾಗೂ ಬರ ನಿಯಂತ್ರಣದ ಬಗ್ಗೆ ಪ್ರಸ್ತಾಪ ಮಾಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹವಾಮಾನ ಇಲಾಖೆಯನ್ನು ನಂಬಿಕೊಂಡು ಪ್ಲ್ಯಾನ್ ಮಾಡಬೇಡಿ. ಇಡೀ‌ ರಾಜ್ಯದಲ್ಲಿ ಈ ಬಾರಿ ಮಳೆ ಸರಿಯಾಗಿ ಆಗಿಲ್ಲ. ಕೂಡಲೇ ವಿಪತ್ತು ನಿರ್ವಹಣಾ ಇಲಾಖೆ ಗಮನಹರಿಸಬೇಕು. ಪ್ರತಿ ತಾಲೂಕಿಗೆ ಕುಡಿಯುವ ನೀರಿಗೆ 50 ಲಕ್ಷ ಬಿಡುಗಡೆ ಮಾಡಿ. ಸಮಸ್ಯೆ ನಿವಾರಣೆಗೆ ಶಾಶ್ವತ ಟಾಸ್ಕ್​ಫೋರ್ಸ್ ಮಾಡಬೇಕು. ತಡಮಾಡದೇ ಕ್ರಿಯಾ ಯೋಜನೆಗೆ ಅನುಮೋದನೆ ಮಾಡಲು ಎಸಿ ಅಥವಾ ತಹಸೀಲ್ದಾರ್​​ಗೆ ಅಧಿಕಾರ ನೀಡಿ. ಮಳೆ ಕೊರತೆ ಆಗಿ ಮೊಳಕೆ ಆಗದಿದ್ರೆ ಬೆಳೆ ವಿಮೆ ಬರುವುದಿಲ್ಲ. ಈ ಬಗ್ಗೆ ಸರ್ಕಾರ ‌ಗಮನ ಹರಿಸಬೇಕು ಎಂದು ಸಲಹೆ ಕೊಟ್ಟರು.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:37 pm, Thu, 6 July 23

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ