AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರನಹೊಳೆಯಲ್ಲಿ ಸಿಗದ ನೀರು, ಜೀವ ಜಲಕ್ಕಾಗಿ ಪ್ರತೀ ದಿನ ಜನರ ಪರದಾಟ

ಬೆಳಗಾವಿ: ಆ ಗ್ರಾಮದ ಹೆಸರಿನಲ್ಲೇ ಹೊಳೆ ಇದೆ, ಅಷ್ಟೇ ಅಲ್ಲದೆ ಆ ಗ್ರಾಮದ ಸಮೀಪದಲ್ಲೇ ನದಿ ಕೂಡ ಹರಿದು ಹೋಗುತ್ತೆ. 5 ತಿಂಗಳ ಹಿಂದೆ ಜಲಪ್ರವಾಹಕ್ಕೆ ಇಡೀ ಊರೇ ಮುಳುಗಿ ಹೋಗಿತ್ತು. ಆದ್ರೆ ಈಗ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಜನಪ್ರತಿನಿಧಿಗಳ ಕಿತ್ತಾಟದಿಂದ ಜನರು ಪರದಾಡುತ್ತಿದ್ದಾರೆ. ಕಲ್ಲು ಮುಳ್ಳಿರುವ ದಾರಿಯಲ್ಲಿ ಮಹಿಳೆಯರು ಕೊಡಹೊತ್ತು ಸಾಗಬೇಕಿದೆ. ಮತ್ತೊಂದ್ಕಡೆ ಕೊಡಗಳನ್ನ ತುಂಬಿಕೊಂಡು ಗಾಡಿಯಲ್ಲಿ ಮನೆಯತ್ತ ಹೊರಟ ಮಕ್ಕಳು ಹಾಗೂ ಪುರುಷರು. ಜಮೀನಿನಲ್ಲಿ ಬೀಳುತ್ತಿರುವ ನೀರು ತುಂಬಲು ಕಿತ್ತಾಟ ಅಂದಹಾಗೆ ಇಂತಹ […]

ಮಾರನಹೊಳೆಯಲ್ಲಿ ಸಿಗದ ನೀರು, ಜೀವ ಜಲಕ್ಕಾಗಿ ಪ್ರತೀ ದಿನ ಜನರ ಪರದಾಟ
ಸಾಧು ಶ್ರೀನಾಥ್​
|

Updated on: Jan 06, 2020 | 7:14 AM

Share

ಬೆಳಗಾವಿ: ಆ ಗ್ರಾಮದ ಹೆಸರಿನಲ್ಲೇ ಹೊಳೆ ಇದೆ, ಅಷ್ಟೇ ಅಲ್ಲದೆ ಆ ಗ್ರಾಮದ ಸಮೀಪದಲ್ಲೇ ನದಿ ಕೂಡ ಹರಿದು ಹೋಗುತ್ತೆ. 5 ತಿಂಗಳ ಹಿಂದೆ ಜಲಪ್ರವಾಹಕ್ಕೆ ಇಡೀ ಊರೇ ಮುಳುಗಿ ಹೋಗಿತ್ತು. ಆದ್ರೆ ಈಗ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಜನಪ್ರತಿನಿಧಿಗಳ ಕಿತ್ತಾಟದಿಂದ ಜನರು ಪರದಾಡುತ್ತಿದ್ದಾರೆ.

ಕಲ್ಲು ಮುಳ್ಳಿರುವ ದಾರಿಯಲ್ಲಿ ಮಹಿಳೆಯರು ಕೊಡಹೊತ್ತು ಸಾಗಬೇಕಿದೆ. ಮತ್ತೊಂದ್ಕಡೆ ಕೊಡಗಳನ್ನ ತುಂಬಿಕೊಂಡು ಗಾಡಿಯಲ್ಲಿ ಮನೆಯತ್ತ ಹೊರಟ ಮಕ್ಕಳು ಹಾಗೂ ಪುರುಷರು. ಜಮೀನಿನಲ್ಲಿ ಬೀಳುತ್ತಿರುವ ನೀರು ತುಂಬಲು ಕಿತ್ತಾಟ ಅಂದಹಾಗೆ ಇಂತಹ ಪರಿಸ್ಥತಿ ಉಂಟಾಗಿರುವುದು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾರನಹೊಳೆಯಲ್ಲಿ.

ಬೆಳಗ್ಗೆಯಿಂದ ಸಂಜೆವರೆಗೂ ನೀರು ತುಂಬುವುದೇ ಕೆಲಸ! ಮಾರನಹೊಳೆ ಇರುವುದು ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ. 5 ತಿಂಗಳ ಹಿಂದೆ ಗ್ರಾಮ ಪ್ರವಾಹಕ್ಕೆ ತುತ್ತಾಗಿತ್ತು. ಸದ್ಯ ಗ್ರಾಮಕ್ಕೆ ಮರಳಿ ಬದುಕು ಕಟ್ಟಿಕೊಳ್ಳುತ್ತಿರುವ ಜನರಿಗೆ 1 ವಾರದಿಂದ ನೀರು ಸಿಗ್ತಿಲ್ಲ. ಇಡೀ ಗ್ರಾಮದಲ್ಲಿ 250 ಮನೆಗಳಿದ್ದು ಊರಿಗೆ ಎರಡು ಬೋರವೆಲ್ ಮಾತ್ರ ಇವೆ. ಆದ್ರೇ ಇದೀಗ 2 ಬೋರ್​ಗಳು ಬಂದ್ ಆಗಿರುವ ಕಾರಣ ಜನರು 1 ಕಿಲೋಮೀಟರ್ ದೂರದ ಜಮೀನಿನಿಂದ ನೀರು ತರ್ತಿದ್ದಾರೆ. ಮಾರನಹೊಳೆ ಪಕ್ಕದಲ್ಲೇ ಹಿರಣ್ಯಕೇಶಿ ನದಿ ಹರಿಯುತ್ತಿದ್ದು, ನದಿ ನೀರು ಶೇಖರಿಸಿ ಗ್ರಾಮಕ್ಕೆ ಕೊಡಬಹುದು. ಆದ್ರೆ ಆ ಕೆಲಸ ಆಗ್ತಿಲ್ಲ. ಇತ್ತ ಸತೀಶ್ ಜಾರಕಿಹೊಳಿ 5 ತಿಂಗಳಿಂದಲೂ ಗೋಕಾಕ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದು, ಸ್ವಕ್ಷೇತ್ರದ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗ್ತಿಲ್ಲ. ಇದು ಗ್ರಾಮಸ್ಥರನ್ನ ಮತ್ತೆ ಚಿಂತೆಗೀಡು ಮಾಡಿದೆ.

ಉಪಚುನಾವಣೆ ಆಯ್ತು.. ಈಗ ‘ಕೆಪಿಸಿಸಿ’ ಸಂಕಟ! ಇಲ್ಲಿವರೆಗೂ ಉಪಚುನಾವಣೆಯಲ್ಲಿ ಬ್ಯೂಸಿ ಇದ್ದ ಸತೀಶ್ ಜಾರಕಿಹೊಳಿ ಇದೀಗ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಲಾಬಿ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿಬರ್ತಿದೆ. ಈ ಬಗ್ಗೆ ಸತೀಶ್​ರನ್ನ ಕೇಳಿದ್ರೆ, ಈಗಾಗಲೇ ಅಧಿಕಾರಿಗಳ ಜತೆ ಮಾತಾಡಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ಕೊಡ್ತಿದ್ದಾರೆ ಎನ್ನು ಮಾತುಗಳೇ ಕೇಳಿ ಬರುತ್ತಿವೆ. ಒಟ್ನಲ್ಲಿ ಅಣ್ಣ-ತಮ್ಮಂದಿರ ಜಗಳದಲ್ಲಿ ವೋಟು ಹಾಕಿದ ಪ್ರಜೆಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ