AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ BUDA ನೋಟಿಸ್: ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ

ಕಣಬರಗಿ ಈಗಾಗಲೇ ಬುಡಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಆಗಿದೆ. ಪರಿಹಾರ ಸಂಬಂಧ ಹೈಕೋರ್ಟ್​ನಲ್ಲಿ ಕೇಸ್​ ಇರುವುದರಿಂದ ರೈತರು ಹೈರಾಣಗೊಂಡಿದ್ದಾರೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದ ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ, ಕೊಂಡಸಕೊಪ್ಪ ಗ್ರಾಮಗಳು ಸೇರಿವೆ.

ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ BUDA ನೋಟಿಸ್: ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ
ಬೆಳಗಾವಿ ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ
ಸಹದೇವ್​ ಮಾನೆ
| Edited By: ಸಾಧು ಶ್ರೀನಾಥ್​|

Updated on: Sep 12, 2023 | 9:55 AM

Share

ಬೆಳಗಾವಿ: ಜಿಲ್ಲಾ ವ್ಯಾಪ್ತಿಯಲ್ಲಿರುವ ಬರುವ 28 ಗ್ರಾಮಗಳನ್ನು ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ (Belagavi BUDA Notice) ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ ಬುಡಾದಿಂದ ನೋಟಿಸ್ ಜಾರಿಯಾಗಿದೆ. ಇದರಿಂದಾಗಿ ಹೊಸ ಬಡಾವಣೆ, ಹೊಸ ಕೈಗಾರಿಕೆಗಳಿಗಾಗಿ ರೈತರು ಭೂಮಿ (Agriculture Land) ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮದ ರೈತರಿಗೆ (Farmers) ನೋಟಿಸ್ ಜಾರಿ ಮಾಡಲಾಗಿದೆ.

ಕಣಬರಗಿ ಈಗಾಗಲೇ ಬುಡಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಆಗಿದೆ. ಪರಿಹಾರ ಸಂಬಂಧ ರೈತರು ಹಾಗೂ ಬುಡಾ ನಡುವೆ ಸಂಘರ್ಷ ನಡೆಯುತ್ತಿದೆ. ಹೈಕೋರ್ಟ್​ನಲ್ಲಿ ಕೇಸ್​ ಇರುವುದರಿಂದ ರೈತರು ಹೈರಾಣಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದ ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ, ಕೊಂಡಸಕೊಪ್ಪ ಗ್ರಾಮಗಳು ಸೇರಿವೆ.

Also read: BUDA Scam: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ; ಸರ್ಕಾರಕ್ಕೆ ಕೋಟ್ಯಂತರ ನಷ್ಟ

ದಾಖಲಾರ್ಹ ಸಂಗತಿಯೆಂದರೆ ಕೃಷಿ ಭೂಮಿಯನ್ನು ಕೃಷಿಯೇತರ ಬಳಕೆಗೆ ಅನುಮತಿ ಕಡ್ಡಾಯವಾಗಿದೆ. ಗ್ರಾಮದ 250 ಮೀಟರ್ ವಿಸ್ತೀರ್ಣ ಹೊರತುಪಡಿಸಿ ಉಳಿದ ಭೂಮಿ ಏನೇ ಮಾಡಿದರೂ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

Also read: ಭ್ರಷ್ಟರ ವಿರುದ್ದ ಕೇಸ್ ದಾಖಲಿಸುವಂತೆ ಲೋಕಾಯಕ್ತಕ್ಕೆ ಕೋರ್ಟ್ ಸೂಚನೆ, ಬೆಳಗಾವಿ ನಗರಾಭಿವೃದ್ದಿ ಅಧಿಕಾರಿಗಳಿಗೆ ಬಂಧನ ಭೀತಿ

ಇದೇ ಹಾದಿಯಲ್ಲಿ ಈಗ ಬರೋಬ್ಬರಿ 28 ಗ್ರಾಮಗಳಲ್ಲಿ ರೈತರು ಭೂಮಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೂಡಲೇ ನೋಟಿಸ್ ವಾಪಸ್ ಪಡೆಯುವಂತೆ ರೈತರಿಂದ ಎಚ್ಚರಿಕೆ ಹೊರಬಿದ್ದಿದೆ. ಇಲ್ಲದಿದ್ರೆ ಬುಡಾ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ವರದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್