AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ BUDA ನೋಟಿಸ್: ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ

ಕಣಬರಗಿ ಈಗಾಗಲೇ ಬುಡಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಆಗಿದೆ. ಪರಿಹಾರ ಸಂಬಂಧ ಹೈಕೋರ್ಟ್​ನಲ್ಲಿ ಕೇಸ್​ ಇರುವುದರಿಂದ ರೈತರು ಹೈರಾಣಗೊಂಡಿದ್ದಾರೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದ ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ, ಕೊಂಡಸಕೊಪ್ಪ ಗ್ರಾಮಗಳು ಸೇರಿವೆ.

ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ BUDA ನೋಟಿಸ್: ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ
ಬೆಳಗಾವಿ ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ
Sahadev Mane
| Edited By: |

Updated on: Sep 12, 2023 | 9:55 AM

Share

ಬೆಳಗಾವಿ: ಜಿಲ್ಲಾ ವ್ಯಾಪ್ತಿಯಲ್ಲಿರುವ ಬರುವ 28 ಗ್ರಾಮಗಳನ್ನು ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ (Belagavi BUDA Notice) ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಬೆಳಗಾವಿ ತಾಲೂಕಿನ 28 ಗ್ರಾಮಗಳ ರೈತರಿಗೆ ಬುಡಾದಿಂದ ನೋಟಿಸ್ ಜಾರಿಯಾಗಿದೆ. ಇದರಿಂದಾಗಿ ಹೊಸ ಬಡಾವಣೆ, ಹೊಸ ಕೈಗಾರಿಕೆಗಳಿಗಾಗಿ ರೈತರು ಭೂಮಿ (Agriculture Land) ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮದ ರೈತರಿಗೆ (Farmers) ನೋಟಿಸ್ ಜಾರಿ ಮಾಡಲಾಗಿದೆ.

ಕಣಬರಗಿ ಈಗಾಗಲೇ ಬುಡಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಆಗಿದೆ. ಪರಿಹಾರ ಸಂಬಂಧ ರೈತರು ಹಾಗೂ ಬುಡಾ ನಡುವೆ ಸಂಘರ್ಷ ನಡೆಯುತ್ತಿದೆ. ಹೈಕೋರ್ಟ್​ನಲ್ಲಿ ಕೇಸ್​ ಇರುವುದರಿಂದ ರೈತರು ಹೈರಾಣಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದ ಕಲಕಾಂಬ, ಮುಚ್ಚಂಡಿ, ಕಡೊಲಿ ಗ್ರಾಮಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ, ಕೊಂಡಸಕೊಪ್ಪ ಗ್ರಾಮಗಳು ಸೇರಿವೆ.

Also read: BUDA Scam: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ; ಸರ್ಕಾರಕ್ಕೆ ಕೋಟ್ಯಂತರ ನಷ್ಟ

ದಾಖಲಾರ್ಹ ಸಂಗತಿಯೆಂದರೆ ಕೃಷಿ ಭೂಮಿಯನ್ನು ಕೃಷಿಯೇತರ ಬಳಕೆಗೆ ಅನುಮತಿ ಕಡ್ಡಾಯವಾಗಿದೆ. ಗ್ರಾಮದ 250 ಮೀಟರ್ ವಿಸ್ತೀರ್ಣ ಹೊರತುಪಡಿಸಿ ಉಳಿದ ಭೂಮಿ ಏನೇ ಮಾಡಿದರೂ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

Also read: ಭ್ರಷ್ಟರ ವಿರುದ್ದ ಕೇಸ್ ದಾಖಲಿಸುವಂತೆ ಲೋಕಾಯಕ್ತಕ್ಕೆ ಕೋರ್ಟ್ ಸೂಚನೆ, ಬೆಳಗಾವಿ ನಗರಾಭಿವೃದ್ದಿ ಅಧಿಕಾರಿಗಳಿಗೆ ಬಂಧನ ಭೀತಿ

ಇದೇ ಹಾದಿಯಲ್ಲಿ ಈಗ ಬರೋಬ್ಬರಿ 28 ಗ್ರಾಮಗಳಲ್ಲಿ ರೈತರು ಭೂಮಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೂಡಲೇ ನೋಟಿಸ್ ವಾಪಸ್ ಪಡೆಯುವಂತೆ ರೈತರಿಂದ ಎಚ್ಚರಿಕೆ ಹೊರಬಿದ್ದಿದೆ. ಇಲ್ಲದಿದ್ರೆ ಬುಡಾ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ವರದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ